ಲಯನ್ಸ್ನತ್ತ ಯುವಕರನ್ನು ಸೆಳೆಯುವ ಪ್ರಯತ್ನ ನಡೆಯಲಿ : ದಿವಾಕರ ಶೆಟ್ಟಿ
Team Udayavani, Mar 31, 2017, 12:18 PM IST
ಕಾಪು: ಪರಸ್ಪರ ಪ್ರೀತಿ , ವಿಶ್ವಾಸ, ಸ್ನೇಹ ಮತ್ತು ಸೇವೆಯೊಂದಿಗೆ ಉತ್ತಮ ಪ್ರಗತಿ ಸಾಧಿಸುವುದು ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಸುಮಾರು 40 ವರ್ಷಗಳಷ್ಟು ಇತಿಹಾಸವುಳ್ಳ ಕಾಪು ಲಯನ್ಸ್ ಕ್ಲಬ್ನ್ನು ಇನ್ನಷ್ಟು ಬಲಿಷ್ಠಗೊಳಿಸುವ ಸಲುವಾಗಿ ಯುವಕರನ್ನು ಸೆಳೆಯುವ ಮತ್ತು ಫ್ಯಾಮಿಲಿ ಮೆಂಬರ್ಶಿಪ್ ಮುಖಾಂತರ ಸದಸ್ಯರ ಸಂಖ್ಯೆಯನ್ನು ವೃದ್ಧಿಗೊಳಿಸಬೇಕು ಎಂದು ಲಯನ್ಸ್ ಜಿಲ್ಲಾ ಗವರ್ನರ್ ಬಿ. ದಿವಾಕರ ಶೆಟ್ಟಿ ಹೇಳಿದರು.
ಮಾ. 27ರಂದು ಕಾಪು ಲಯನ್ಸ್ ಕ್ಲಬ್ಗ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಕಾಪು ಕಮ್ಯುನಿಟಿ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ತಲ್ಲೂರು ಶಿವರಾಮ ಶೆಟ್ಟಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿವಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ, ಪುರಸಭೆಯ ನಾಮ ನಿರ್ದೇಶಿತ ಸದಸ್ಯ ಹರೀಶ್ ಕೆ. ನಾಯಕ್ ಇವರನ್ನು ಸಮ್ಮಾನಿಸಲಾಯಿತು.
ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ಗಳಾದ ಸುರೇಶ್ ಶೆಟ್ಟಿ, ಬಸೂÅರು ರಾಜೀವ್ ಶೆಟ್ಟಿ, ಶೀÅಧರ ಶೇಣವ, ಮಧುಸೂದನ್ ಹೆಗ್ಡೆ, ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಸುನಿಲ್ ಸಾಲ್ಯಾನ್, ಪ್ರಾಂತ್ಯಾಧ್ಯಕ್ಷ ಮಹಮದ್ ಹನೀಫ್, ಕಾಪು ಲಯನ್ಸ್ ಕ್ಲಬ್ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಲಯನ್ಸ್ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ವರುಣ್ ಶೆಟ್ಟಿ ವಂದಿಸಿ, ಕಾಪು ಪುರಸಭೆಯ ಸ್ವತ್ಛ ಭಾರತ ಅಭಿಯಾನದ ರಾಯಭಾರಿ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.