ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 24,712 ವಿದ್ಯಾರ್ಥಿಗಳು
Team Udayavani, Mar 31, 2017, 12:48 PM IST
ದಾವಣಗೆರೆ: ಜಿಲ್ಲೆಯ 87 ಕೇಂದ್ರದಲ್ಲಿ ಗುರುವಾರ ದಿಂದ ಪ್ರಾರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷೆ ವಿಷಯ (ಕನ್ನಡ, ಸಂಸ್ಕೃತ ಮತ್ತು ಉರ್ದು)ದಲ್ಲಿ ಒಟ್ಟು 24,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 37 ಕಿವುಡ ಮತ್ತು ಮೂಗ ಮಕ್ಕಳು, ಒಬ್ಬರು ವಿಶೇಷಚೇತನ ವಿದ್ಯಾರ್ಥಿ ಹಾಗೂ ದುರ್ಗಾಂಬಿಕಾ ಅಂಧತ್ವ ಶಾಲೆಯ ಅಂಧ ಮಕ್ಕಳು ಸೇರಿದಂತೆ 24,712 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷಾ ಅವ್ಯವಹಾರ ನಡೆದಿಲ್ಲ.
ಚನ್ನಗಿರಿ ತಾಲೂಕಿನಲ್ಲಿ 1,979 ಗಂಡು, 2,092 ಹೆಣ್ಣು ಮಕ್ಕಳು ಸೇರಿ ಒಟ್ಟು 4,071 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 136 ಗಂಡು, 61 ಹೆಣ್ಣು ಮಕ್ಕಳು ಒಟ್ಟು 197 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 3,874 ವಿದ್ಯಾರ್ಥಿಗಳು ಹಾಜರಾಗಿದ್ದರು.
ದಾವಣಗೆರೆ ದಕ್ಷಿಣದಲ್ಲಿ 3,259 ಗಂಡು, 3192 ಹೆಣ್ಣು ಮಕ್ಕಳು ಸೇರಿ ಒಟ್ಟು 6,451 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 170ಗಂಡು, 62 ಹೆಣ್ಣು ಮಕ್ಕಳು ಸೇರಿ ಒಟ್ಟು 232 ವಿದ್ಯಾರ್ಥಿಗಳು ಗೈರಾಗಿದ್ದರು. 6,219 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ದಾವಣಗೆರೆ ಉತ್ತರದಲ್ಲಿ 1,675 ಗಂಡು, 1,564 ಹೆಣ್ಣುಮಕ್ಕಳು ಸೇರಿ ಒಟ್ಟು 3,239 ನೋಂದಣಿ ಮಾಡಿಸಿದ್ದರು, 79 ಗಂಡು, 54 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 133 ವಿದ್ಯಾರ್ಥಿಗಳು ಗೈರಾಗಿದ್ದರು. 3,106 ವಿದ್ಯಾರ್ಥಿಗಳು ಹಾಜರಾಗಿದ್ದರು.
ಹರಿಹರ ತಾಲೂಕಿನಲ್ಲಿ 1,700 ಗಂಡು, 1,651 ಹೆಣ್ಣು ಮಕ್ಕಳು ಒಳಗೊಂಡಂತೆ ಒಟ್ಟು 3,351 ನೋಂದಣಿಯಾಗಿದ್ದು, 87 ಗಂಡು, 66 ಹೆಣ್ಣು ಮಕ್ಕಳು ಸೇರಿ ಒಟ್ಟು 153 ವಿದ್ಯಾರ್ಥಿಗಳು ಗೈರಾಗಿದ್ದರು. 3,198 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಹೊನ್ನಾಳಿ ತಾಲೂಕಿನಲ್ಲಿ 1,317 ಗಂಡು, 1,411 ಹೆಣ್ಣು ಮಕ್ಕಳು ಒಳಗೊಂಡಂತೆ ನೋಂದಣಿಯಾಗಿದ್ದ ಒಟ್ಟು 2,728 ವಿದ್ಯಾರ್ಥಿಗಳಲ್ಲಿ 40 ಗಂಡು, 34 ಹೆಣ್ಣುಮಕ್ಕಳು ಸೇರಿ ಒಟ್ಟು 74 ವಿದ್ಯಾರ್ಥಿಗಳು ಗೈರಾಗಿದ್ದರು. 2,654 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಹರಪನಹಳ್ಳಿ ತಾಲೂಕಿನಲ್ಲಿ 1,995 ಗಂಡು, 1,733 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 3,728 ವಿದ್ಯಾರ್ಥಿಗಳು ನೋಂದಣಿಯಾಗಿದ್ದು 157 ಗಂಡು, 78 ಹೆಣ್ಣುಮಕ್ಕಳು ಸೇರಿ ಒಟ್ಟು 235 ವಿದ್ಯಾರ್ಥಿಗಳು ಗೈರಾಗಿ, 3,493 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಜಗಳೂರು ತಾಲೂಕಿನಲ್ಲಿ 1,129 ಗಂಡು, 1,132 ಹೆಣ್ಣುಮಕ್ಕಳು ಸೇರಿ ಒಟ್ಟು 2,261 ನೋಂದಣಿಯಾಗಿದ್ದವರಲ್ಲಿ 46 ಗಂಡು, 47 ಹೆಣ್ಣುಮಕ್ಕಳು ಒಳಗೊಂಡಂತೆ ಒಟ್ಟು 93 ವಿದ್ಯಾರ್ಥಿಗಳು ಗೈರಾಗಿದ್ದರು. 2,168 ವಿದ್ಯಾರ್ಥಿಗಳು ಹಾಜರಾಗಿದ್ದರು.
ಎಲ್ಲಾ ಕಡೆ ಶಾಂತಿಯುತವಾಗಿ ಪರೀಕ್ಷೆ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್. ಎಂ. ಪ್ರೇಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.