ಕುರಾಯ ಶ್ರೀ ಸದಾಶಿವ ದೇವಸ್ಥಾನ ಬ್ರಹ್ಮಕಲಶಾಭಿಷೇಕಕ್ಕೆ ಚಾಲನೆ
Team Udayavani, Apr 1, 2017, 2:27 PM IST
ಬೆಳ್ತಂಗಡಿ: ಬಂದಾರಿನ ಕುರಾಯ ಶ್ರೀ ಸದಾಶಿವ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ವೈದಿಕ ಕಾರ್ಯಗಳ ಸಾರಥ್ಯ ವಹಿಸಿಕೊಂಡಿರುವ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ಕಾರ್ಯವು ವೈಭವದಿಂದ ನೆರವೇರಿದ್ದು, ಕ್ಷೇತ್ರದ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ ಮತ್ತು ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಿತು.
ತಂತ್ರಿಗಳ ಮಾರ್ಗದರ್ಶನದಲ್ಲಿ ತೋರಣ ಮುಹೂರ್ತ ಬಳಿಕ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಸಂಪ್ರದಾಯದಂತೆ ವಿವಿಧ ವೈದಿಕ ಕಾರ್ಯಗಳು ಹಾಗೂ ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಗೌರವಾಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಚಡಗ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಗೋಪಾಲಕೃಷ್ಣ ಹೊಳ್ಳ ಕಲೊÅàಡಿ, ಧರ್ಣಪ್ಪ ಗೌಡ ಅಂಡಿಲ ಬಾನಡ್ಕ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಹರೀಶ್ ಹೊಳ್ಳ ಕಲೊÅàಡಿ, ಶ್ರೀ ಸದಾಶಿವ ಭಜನಾ ಮಂಡಳಿ ಕಾರ್ಯದರ್ಶಿ ಶಿವಣ್ಣ ಗೌಡ ಕುಂಬುಡಂಗೆ, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಗಳ ಉಪಾಧ್ಯಕ್ಷರು, ಗೌರವ ಸಲಹೆಗಾರರು, ಬೈಲುವಾರು ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.