![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 5, 2017, 3:45 AM IST
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಯಥಾಸ್ಥಿತಿಯಲ್ಲಿ ಕಾಯ್ದುಕಳ್ಳುವಂತೆ ಮಂಗಳವಾರ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದ ಕೆಎಂಎಫ್ ಅಧ್ಯಕ್ಷಗಾದಿಯ ತಿಕ್ಕಾಟವೂ ಮತ್ತಷ್ಟು ಬಿಗಡಾಯಿಸಿದಂತಾಗಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡಿಲ್ಲವೆಂದು ಕೋರ್ಟ್ ಮೆಟ್ಟಿಲೇರಿರುವ ಪಿ.ನಾಗರಾಜು ಅಧ್ಯಕ್ಷಧಿರಾಗಿ ಕೆಲಸ ಮಾಡುವಂತೆಯೂ ಇಲ್ಲ. ಹೊಸದಾಗಿ ಎಂ.ಪಿ.ರವೀಂದ್ರ ಅಧ್ಯಕ್ಷರಾಗಿ ಆಯ್ಕೆಯಾಗುವಂತೆಯೂ ಇಲ್ಲ. ಆಡಳಿತಾಧಿಕಾರಿಯದೇ ಉಸ್ತುವಾರಿ. ಅಧ್ಯಕ್ಷರ ಆಯ್ಕೆ ಪ್ರತಿಷ್ಠೆಯಲ್ಲಿ ಲಕ್ಷಾಂತರ ರೈತರ ಸಂಸ್ಥೆ ಕೆಎಂಎಫ್ ಬಡವಾದಂತಾಗಿದೆ.
ವಿವಾದವೇನು: ಖಾಲಿ ಹಾಳೆಯೊಂದಕ್ಕೆ ತಮ್ಮ ಕೈಯಲ್ಲಿ ಬಲವಂತದ ಸಹಿ ಹಾಕಿಸಿಕೊಂಡು ನಕಲಿ ರಾಜೀನಾಮೆ ಪತ್ರ ಸೃಷ್ಟಿಸಿದ್ದು, ರಾಜೀನಾಮೆ ಅಂಗೀಕಾರಗೊಳಿಸಲಾಗಿದೆ ಎಂದು ಕೆಎಂಎಫ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ ತಾನು ರಾಜೀನಾಮೆ ನೀಡದಿದ್ದರೂ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಚುನಾವಣಾ ಪ್ರಕ್ರಿಯೆಗಳನ್ನು
ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಏಕಸದಸ್ಯ ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ.
ಈ ನಿಟ್ಟಿನಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ವಿಭಾಗೀಯ ಪೀಠದ ಮೊರೆಹೋಗಿದ್ದರು.
ನ್ಯಾಯಾಲಯ ಹೇಳಿದ್ದೇನು?
ನೂತನ ಅಧ್ಯಕ್ಷರ ಆಯ್ಕೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಸಲ್ಲಿಸಿದ್ದ
ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ, ಈ ಅರ್ಜಿಗೆ ಸಂಬಂಧಿಸಿದಂತೆ ಈಗಾಗಲೇ
ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ. ಅಲ್ಲದೆ ಮಾರ್ಚ್ 25ರಂದು ನಡೆದ ಕೆಎಂಎಫ್ ಆಡಳಿತ ಮಂಡಳಿ
ಸಭೆಯ ನಡಾವಳಿಗಳು ನ್ಯಾಯಾಲಯದ ವ್ಯಾಪ್ತಿಗೆ ಒಳಪಡಲಿವೆ ಎಂದು ಹೇಳಿದೆ. ಹೀಗಾಗಿ ಏಕಸದಸ್ಯ
ಪೀಠದ ಮುಂದೆಯೇ ಆದೇಶ ಪಡೆದುಕೊಳ್ಳಿ ಎಂದು ಹೇಳಿದ ನ್ಯಾಯಪೀಠ, ಅಲ್ಲದೆ ನ್ಯಾಯಾಲಯದ
ಮುಂದಿನ ಆದೇಶದವರೆಗೆ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಯಥಾಸ್ಥಿತಿ
ಮುಂದುವರಿಸಿ ಎಂದು ಸೂಚಿಸಿ ಅರ್ಜಿ ಇತ್ಯರ್ಥಗೊಳಿಸಿತು. ಈ ಮೊದಲು ಏಕಸದಸ್ಯ ಪೀಠದ ಮುಂದೆ
ಸಲ್ಲಿಕೆಯಾಗಿದ್ದ ನಾಗರಾಜು ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾ.ರವಿ ಮಳೀಮs…, ಮಾರ್ಚ್ 25ರಂದು
ನಡೆಯಲಿರುವ ಕೆಎಂಎಫ್ ಸಭೆಯ ಮುಂದೆ ನಡೆಯಲಿರುವ ಕೆಎಂಎಫ್ ಆಡಳಿತ ಮಂಡಳಿ ಸಭೆಯ ನಡಾವಳಿ ನ್ಯಾಯಾಲಯದ ವ್ಯಾಪ್ತಿಗೆ ಒಳಪಡಲಿದೆ ಎಂದು ಸೂಚಿಸಿದ್ದರು. ಜತೆಗೆ ಮಾರ್ಚ್ 28ರಂದು ನಡೆದ ವಿಚಾರಣೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವುದು ನ್ಯಾಯಾಲಯದ ವ್ಯಾಪ್ತಿಗೆ ಒಳಪಡಲಿದೆ ಎಂದು ಆದೇಶಿಸಿ ಕೆಎಂಎಫ್ ಆಡಳಿತ ಮಂಡಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.