![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 5, 2017, 11:39 AM IST
ಹೊಸದಿಲ್ಲಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಣ್ಣ ಮತ್ತು ಅತೀ ಸಣ್ಣ ರೈತರ 36,359 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ಮಾಡಿರುವುದು ಸರಿಯಾದ ದಿಕ್ಕಿನಲ್ಲಿ ಇಟ್ಟಿರುವ ಹೆಜ್ಜೆಯಾಗಿದೆ. ಆದರೆ ಇದು ಕೇವಲ ಆಂಶಿಕ ಪರಿಹಾರ ಮಾತ್ರವೇ ಆಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ದೇಶಾದ್ಯಂತ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಈ ಸಮಸ್ಯೆಗೆ ರಾಷ್ಟ್ರಮಟ್ಟದಲ್ಲಿ ಸ್ಪಂದಿಸಬೇಕಾಗಿದೆ. ರಾಜ್ಯ ರಾಜ್ಯಗಳ ನಡುವೆ ಈ ವಿಷಯದಲ್ಲಿ ಕೇಂದ್ರ ಸರಕಾರ ತಾರತಮ್ಯ ಮಾಡಬಾರದು; ಬಡ ರೈತರ ಬದುಕಿನೊಂದಿಗೆ ಕೇಂದ್ರ ಸರಕಾರ ಚೆಲ್ಲಾಟವಾಡಬಾರದು ಎಂದು ರಾಹುಲ್ ಗಾಂಧಿ ಹೇಳಿದರು.
ಟ್ವಿಟರ್ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ರಾಹುಲ್ ಗಾಂಧಿ, “ಸಂಕಷ್ಟದಲ್ಲಿರುವ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂಬುದಕ್ಕೆ ಯಾವತ್ತೂ ನನ್ನ ಬೆಂಬಲವಿದೆ’ ಎಂದು ರಾಹುಲ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.