ಸಾಲಮನ್ನಾಗೆ ಆಗ್ರಹಿಸಿ ಬ್ಯಾಂಕ್‌ ಎದುರು ಧರಣಿ


Team Udayavani, Apr 5, 2017, 12:57 PM IST

mys6.jpg

ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರದ ನಡುವೆ ರೈತರಿಗೆ ನೋಟಿಸ್‌ ನೀಡುತ್ತಿರುವ ಬ್ಯಾಂಕ್‌ಗಳ ನಡೆಯನ್ನು ಖಂಡಿಸಿ ಹಾಗೂ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಗರದ ಸರಸ್ವತಿಪುರಂನಲ್ಲಿರುವ ಎಸ್‌ಬಿಐ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಮೂರು ವರ್ಷಗಳಿಂದ ಉಂಟಾಗಿರುವ ಭೀಕರ ಬರಗಾಲದಿಂದ ಮಳೆಯ ಅಭಾವ ಎದುರಾಗಿದ್ದು, ಇದರಿಂದ ರೈತರು ಬೆಳೆದ ಬೆಳೆಗಳಿಗೆ ನೀರಿಲ್ಲದೆ ಕಂಗಾಲಾಗಿದ್ದಾರೆ. ಈ ಪರಿಸ್ಥಿತಿಯಿಂದ ರೈತರು ತಾವು ಪಡೆದ ಸಾಲ ತೀರಿಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದು, ಇಂತಹ ಸ್ಥಿತಿಯಲ್ಲಿ ರೈತರಿಗೆ ನೋಟಿಸ್‌ ನೀಡುತ್ತಿರುವ ಬ್ಯಾಂಕುಗಳ ನಿರ್ಧಾರ ಖಂಡನೀಯ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆ ಸರ್ಕಾರ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ರೈತರ ಸಾಲ ಮನ್ನಾ ಮಾಡಲು ಮುಂದಾಗಬೇಕಿದೆ. ಅಲ್ಲದೆ ಬ್ಯಾಂಕ್‌ ಅಧಿಕಾರಿಗಳು ರೈತರ ಮನೆಗೆ ನೋಟಿಸ್‌ ನೀಡಿದರೆ ಅಂತಹ ಬ್ಯಾಂಕ್‌ಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ತಲೆ ಮೇಲೆ ಕಲ್ಲು ಹೊತ್ತುಕೊಂಡು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಈ ವೇಳೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಶಿವಲಿಂಗಯ್ಯ ಪ್ರತಿಭಟನಾನಿರತ ರೈತರ ಸಮಸ್ಯೆ ಆಲಿಸಿದರು.

ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ್‌ಕುಮಾರ್‌ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲಕ್ಕೆ ರೈತರು ತುತ್ತಾಗಿದ್ದರೂ ಬ್ಯಾಂಕ್‌ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್‌ ನೀಡುತ್ತಿರುವುದು ಖಂಡನೀಯ. ಇದೇ ರೀತಿ ಬ್ಯಾಂಕ್‌ ಮ್ಯಾನೇಜರ್‌ಗಳು ನೋಟಿಸ್‌ ನೀಡುತ್ತಿದ್ದರೆ, ಮುಂದಿನ ದಿನಗಳಲ್ಲಿ ಬ್ಯಾಂಕಿನ ವ್ಯವಹಾರಗಳನ್ನೇ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಬಳಿಕ ಎಸ್‌ಬಿಐ ವಿಬಾಗೀಯ ವ್ಯವಸ್ಥಾಪಕ ಕೆ.ಶ್ರೀನಿವಾಸ್‌ ಮಾತನಾಡಿ, ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ, ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ, ಪ್ರತಿಭಟನೆ ಹಿಂಪಡೆಯಲಾಯಿತು. ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಮುಖಂಡರಾದ ಭಾಗ್ಯರಾಜ್‌, ನಾಗರಾಜ್‌, ಸುರೇಶ್‌, ರೇವಣ್ಣ, ಪರಶಿವಮೂರ್ತಿ, ಸಿದ್ದೇಶ್‌, ಕೃಷ್ಣೇಗೌಡ, ರಾಜಣ್ಣ, ರವೀಂದ್ರ, ಮಂಜು, ಪುಟ್ಟರಾಜು, ಮಹದೇವಸ್ವಾಮಿ, ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.