ಮೋದಿ ಆಡಳಿತ ಪಾಕ್‌, ಸಿದ್ದುಗೆ ಇಷ್ಟವಾಗುತ್ತಿಲ್ಲ: ಈಶ್ವರಪ್ಪ ಟೀಕೆ


Team Udayavani, Apr 6, 2017, 12:52 PM IST

mys2.jpg

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ವಿಶ್ವಮಟ್ಟದಲ್ಲಿ ಎಲ್ಲರೂ ಇಷ್ಟಪಡುತ್ತಿದ್ದಾರೆ. ಆದರೆ ಪಾಕಿಸ್ಥಾನ ಮತ್ತು ಸಿದ್ದರಾಮಯ್ಯ ಅವರಿಗೆ ಮಾತ್ರ ಮೋದಿ ಇಷ್ಟವಾಗುತ್ತಿಲ್ಲ ಎಂದು ವಿಧಾನಪರಿಷತ್‌ ವಿರೋಧಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಟೀಕಿಸಿದರು. 

ನಂಜನಗೂಡು ಕ್ಷೇತ್ರದ ಕತ್ವಾಡಿಪುರದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿವಿ.ಶ್ರೀನಿವಾಸ ಪ್ರಸಾದ್‌ ಅವರ ಪರ ಪ್ರಚಾರ ಮಾಡಿದ ಅವರು, ಮೋದಿ ಅವರ ಆಡಳಿತ ನಮಗೆಲ್ಲರಿಗೂ ಹೆಮ್ಮೆ. ಇಡೀ ದೇಶ ಅವರನ್ನು ಮೆಚ್ಚಿದೆ. ವಿಶ್ವಮಟ್ಟದಲ್ಲೂ ಸಹ ಮೋದಿ ಮನೆಮಾತಾಗಿದ್ದಾರೆ. ಒಂದು ಕಾಲದಲ್ಲಿ ಮೋದಿ ಅವರಿಗೆ ಅಮೆರಿಕಾ ಪ್ರವೇಶಿಸಲು ವೀಸಾ ನೀಡುವುದಿಲ್ಲ ಎಂದು ಹೇಳಿದ್ದ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ,

ಪಾಕಿಸ್ಥಾನದ ವಿರುದ್ಧ ತಿರುಗಿಬಿದ್ದು ತಕ್ಕ ಉತ್ತರ ನೀಡಿದ್ದನ್ನು ಕಂಡು ಬೆರಗಾಗಿ ಹಲವು ರಾಷ್ಟ್ರಗಳಲ್ಲಿ ಒಂದು ದೊಡ್ಡ ಪಿಡುಗಾಗಿರುವ ¸‌ಯೋತ್ಪಾ$ದನೆಯನ್ನು ಹತ್ತಿಕ್ಕುವ ಸಾಮರ್ಥ್ಯ ಇರುವುದು ಮೋದಿಗೆ ಮಾತ್ರ ಎಂದು ಹೇಳುತ್ತಿದ್ದಾರೆ. ಹೀಗೆ ಜಗವೇ ಅವರನ್ನು ಮೆಚ್ಚುತ್ತಿರುವಾಗ ಪಾಕಿಸ್ಥಾನ ಮತ್ತು ಸಿದ್ದರಾಮಯ್ಯ ಮಾತ್ರ ಮೋದಿ ಅವರನ್ನು ಇಷ್ಟಪಡುತ್ತಿಲ್ಲ. ಮುಂದೆ ಅವರೂ ಸಹ ಮೆಚ್ಚಲಿದ್ದಾರೆ ಎಂದರು. 

ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷದ ಆಡಳಿತವಿದ್ದು ಡಾ.ಮನಮೋಹನಸಿಂಗ್‌ ಪ್ರಧಾನಿಯಾಗಿದ್ದಾಗ ಪಾಕಿಸ್ಥಾನ ಇಲ್ಲಸಲ್ಲದ ಕ್ಯಾತೆ ತೆಗೆದು ತೊಂದರೆ ಕೊಡುತ್ತಿತ್ತು. ಹತ್ಯೆ, ದಬ್ಟಾಳಿಕೆ ನಡೆಸುತ್ತಿತ್ತು. ಆದರೆ ಸಿಂಗ್‌ ವîೌನವಾಗಿರುತ್ತಿದ್ದರು. ಆದರೆ ನರೇಂದ್ರ ಮೋದಿ ಅವರು ನಮ್ಮ ದೇಶದ ನಾಲ್ವರು ಸೈನಿಕರನ್ನು ಪಾಕಿಸ್ಥಾನದವರು ಕೊಂದಾಗ ಕ್ಷಿಪ್ರವಾಗಿ ಪ್ರತಿಕ್ರಿಯಿಸಿ ನಾಲ್ಕಕ್ಕೆ ನಲವತ್ತರಷ್ಟು ಉತ್ತರ ನೀಡಿದರು. ಇದರಿಂದಾಗಿ ಇಂದು ಪಾಕ್‌ ಸೈನಿಕರು ನಮ್ಮ ದೇಶದ ತಂಟೆಗೆ ಬರುತ್ತಿಲ್ಲ. ನಾವಾಗಿ ಹೋಗಲ್ಲ, ಕೆಣಕಿದರೆ ಬಿಡಲ್ಲ ಎಂಬುದು ನರೇಂದ್ರ ಮೋದಿ ಅವರ ಗಂಡುಗಲಿ ವ್ಯವಸ್ಥೆಯಾಗಿದೆ ಎಂದು ಅವರು ಹೇಳಿದರು. 

ಇಂಥ ದಿಟ್ಟ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಬೆಂಬಲ ನೀಡಲು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಹಕರಿಸಬೇಕೆಂದು ಈಶ್ವರಪ್ಪ ಮನವಿ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌, ವಿಧಾನಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮುಖಂಡರಾದ ದಯಾನಂದಮೂರ್ತಿ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HC-Mahadevappa

CM Siddaramaiah ಪತ್ನಿಗೆ ಕಾನೂನು ಬದ್ಧವಾಗಿ ಸೈಟ್‌: ಸಚಿವ ಡಾ.ಎಚ್‌.ಸಿ. ಮಹದೇವಪ್ಪ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.