![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
ಶ್ರೀಕಂಠೇಶ್ವರನ ರಥೋತ್ಸವಕ್ಕೆ ಸಿದ್ಧತೆ
Team Udayavani, Apr 6, 2017, 1:10 PM IST
![mys5.jpg](https://www.udayavani.com/wp-content/uploads/2017/04/6/mys5-596x465.jpg)
ನಂಜನಗೂಡು: ಉಪ ಚುನಾವಣೆಯ ಭರದಲ್ಲಿರುವ ನಂಜನಗೂಡಿನಲ್ಲೀಗ ಜಾತ್ರೋತ್ಸವ ಪ್ರಾರಂಭವಾಗಿದೆ. ಪಟ್ಟಣದ ಪ್ರಸಿದ್ಧ ಶ್ರೀ ಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆಯ ಅಂಗವಾಗಿ ಏ. 7 ಶುಕ್ರವಾರ ಮುಂಜಾನೆ ಪಂಚಮಹಾರಥೋತ್ಸವ ಅತ್ಯಂತ ವಿಜೃಂಭಣೆ ಯಿಂದ ನೆರವೇರಲು ಸಕಲ ಸಿದ್ಧತೆಗಳು ಭರದಿಂದ ಸಾಗಿದೆ.
ಅಂದು ಬೆಳಗ್ಗೆ 5.20 ರಿಂದ 6.20ರೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ರಥೋತ್ಸವ ನಡೆಯಲಿದ್ದು, ದೇಗುಲದ ಅರ್ಚಕ ವೃಂದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಗಣಪತಿ ರಥಕ್ಕೆ ಮಹಾಮಂಗಳಾರತಿ ಮಾಡಿದ ನಂತರ ರಥಗಳು ಚಲಿಸಲಿವೆ.
ಮೊದಲಿಗೆ ಗಣಪತಿ ರಥ ನಂತರ ಶ್ರೀಕಂಠೇ ಶ್ವರ, ಪಾರ್ವತಿ ಅಮ್ಮನವರ ರಥ, ಸುಬ್ರಹ್ಮಣ್ಯ ರಥ, ಕೊನೆಯದಾಗಿ ಚಂಡಿಕೇಶ್ವರ ರಥಗಳು ಹೊರಡಲಿದ್ದು, ಈಗಾಗಲೇ 5 ರಥಗಳನ್ನು ದುರಸ್ತಿಗೊಳಿಸಿ, ಹೊಸ ಬಣ್ಣ ಬಳಿದು, ಬಂಟಿಂಗ್ಸ್ ಹಾಗೂ ತಳಿರು ತೋರಣಗಳಿಂದ ರಥ ಹಾಗೂ ದೇವಾಲಯದ ಆವರಣವನ್ನು ಸಿದ್ಧಗೊಳಿಸಲಾಗಿದೆ.
ಜಿಲ್ಲಾಧಿಕಾರಿ ರಂದೀಪ್ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆದು ಜಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮೂಲಭೂತ ಸೌಕರ್ಯ ಒದಗಿಸಬೇಕು, ಯಶಸ್ವಿಯಾಗಿ ಜಾತ್ರೆ ನಡೆಯಲು ಆಯಾ ಇಲಾಖೆಯ ಅಧಿಕಾರಿಗಳು ಜವಾಬ್ದಾರಿ ವಹಿಸಿ ಕೊಳ್ಳಬೇಕೆಂದು ಈಗಾಗಲೇ ಸೂಚಿಸಿದ್ದಾರೆ.
ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ ಮಾರ್ಗದರ್ಶನದಲ್ಲಿ ಎಎಸ್ಪಿ ಮಹಮದ್, ಸುಚಿತ್, ಸಿಪಿಐ ಶಿವಮೂರ್ತಿ ನೇತೃತ್ವದಲ್ಲಿ ಎಲ್ಲಾ ರೀತಿಯ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಜಿಲ್ಲೆಯ ವಿವಿಧೆಡೆಯಿಂದ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.
ಕಳೆದ ಬಾರಿಯ ರಥೋತ್ಸವದ ಸಮಯದಲ್ಲಿ ರಥ ಬೀದಿಯ ದುರಸ್ತಿ ಜವಾಬ್ದಾರಿ ವಹಿಸಿಕೊಂಡಿದ್ದ ರಾಜ್ಯ ಭೂ ಸೇನಾ ನಿಗಮ ಮಾಡಿದ ಕಳಪೆ ಕಾಮಗಾರಿ ಹೊಸದಾಗಿ ಅಗೆದ ರಾಜ್ಯ ಲೋಕೋಪಯೋಗಿ ಇಲಾಖೆ ಅಂದು ಹೊಂಡಬಿದ್ದ ರಸ್ತೆಯನ್ನು 10 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ದುರಸ್ತಿ ಮಾಡಿದ್ದು ಇದೂ ಸಹ ತಾತ್ಕಾಲಿಕವಾಗಿದೆ. ರಥೋತ್ಸವ ನಂತರ 10 ಕೋಟಿ ವೆಚ್ಚದಲ್ಲಿ ರಥಬೀದಿಯ ನವೀಕರಣ ಪ್ರಾರಂಭವಾಗಲಿದೆ ಎನ್ನಲಾಗಿದೆ.
ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಜಯಪ್ರಕಾಶ ಸೇರಿದಂತೆ ಇತರ ಅಧಿಕಾರಿಗಳು ಜಾತ್ರೆಗೆ ಬರುವ ಭಕ್ತಾದಿಗಳಿಗೆ ದೇಗುಲದಲ್ಲಿ ಸುಗಮ ರೀತಿಯಲ್ಲಿ ದರ್ಶನ, ಪ್ರಸಾದ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ನೀಡಲು ಕ್ರಮ ಕೈಗೊಂಡಿದ್ದಾರೆ. ದೇಗುಲದ ಪ್ರಮುಖ ಸ್ಥಳಗಳಲ್ಲಿ ಹಾಗೂ ಕಪಿಲಾ ನದಿ ದಡದಲ್ಲಿ ಸಿಸಿ ಟಿ.ವಿ ಅಳವಡಿಸ ಲಾಗಿದೆ. ಅನೇಕ ಸಂಘ ಸಂಸ್ಥೆಗಳು ಬರುವ ಭಕ್ತಾದಿಗಳಿಗೆ ಬೃಹತ್ ಅನ್ನ ಸಂತರ್ಪಣೆ, ಪಾನಕ ವಿತರಿಸಲು ಸಿದ್ಧತೆ ಮಾಡಿಕೊಂಡಿವೆ.
ಪುರಸಭೆಯವರು ಮುಂಜಾಗ್ರತೆ ಕ್ರಮವಾಗಿ ಹೋಟೆಲ್ಗಳಲ್ಲಿ ಸ್ವತ್ಛತೆ ಕಾಪಾಡಿ ಬಿಸಿನೀರು ನೀಡಲು ಸೂಚಿಸಿರುವುದಲ್ಲದೆ, ರಸ್ತೆ ಬದಿಗಳಲ್ಲಿ ತೆರದಿಟ್ಟ ಹಣ್ಣುಗಳನ್ನು ಮಾರುವುದನ್ನು ನಿಷೇಧಿಸಿದ್ದಾರೆ. ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಯಿಂದ ವಿಶೇಷ ಬಸ್ ಮತ್ತು ರೈಲ್ವೆ ಇಲಾಖೆಯಿಂದ ವಿಶೇಷ ಹೆಚ್ಚುವರಿ ಬೋಗಿಯನ್ನು ಹಾಕಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!](https://www.udayavani.com/wp-content/uploads/2024/06/tiger-2-150x83.jpg)
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
![5-hunsur](https://www.udayavani.com/wp-content/uploads/2024/06/5-hunsur-1-150x90.jpg)
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
![Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು](https://www.udayavani.com/wp-content/uploads/2024/06/hunasur-1-150x78.jpg)
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
![Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ](https://www.udayavani.com/wp-content/uploads/2024/06/hunasur-150x86.jpg)
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
MUST WATCH
ಹೊಸ ಸೇರ್ಪಡೆ
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.