ತಾಲೂಕಿನಲ್ಲಿ ಈ ಬಾರಿಯಾದರೂ ಉತ್ತಮ ಮಳೆಯಾಗುವುದೆ?


Team Udayavani, Apr 6, 2017, 1:14 PM IST

mys7.jpg

ಎಚ್‌.ಡಿ.ಕೋಟೆ: ಕಳೆದ ಸಾಲಿನಲ್ಲಿ ರಾಜ್ಯ ದಲ್ಲಿ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಯಾಗದೆ ಭೀಕರ ಬರಗಾಲ ಎದುರಾಗಿ ಪ್ರಸಕ್ತ ಸಾಲಿ ನಲ್ಲಾದರೂ ಉತ್ತಮ ಮಳೆಯಾದರೆ ಸಾಕೆಂದು ತಾಲೂಕಿನ ರೈತರು ಕೃಷಿ ಭೂಮಿ ಹದ ಮಾಡಿಕೊಂಡು ಮಳೆಗಾಗಿ ಹಾತೊರೆಯುತ್ತಿದ್ದಾರೆ. ಪ್ರತಿ ಸಾಲಿನ ಯುಗಾದಿಗೆ ಮುನ್ನ 2-3 ಭಾರಿ ಮಳೆಯಾಗುವುದು ವಾಡಿಕೆ ಯಾದರೂ ಪ್ರಸಕ್ತ ಸಾಲಿನಲ್ಲಿ ಮಳೆಯ ಆಗಮನ ವಾಗಿಲ್ಲ.

ಕಳೆದ ಸಾಲಿನಲ್ಲಿ ಬಿದ್ದ ಅಲ್ಪಸ್ಪಲ್ಪ ಮಳೆಯಿಂದ ಕೃಷಿ ಚಟುವಟಿಕೆ ಕುಂಠಿತವಾಗಿ ಕೆರೆಕಟ್ಟೆಗಳು ನೀರಿಲ್ಲದೇ ಒಣಗಿ ನಿಂತಿವೆ. ಅಂತರ್ಜಲ ಕುಸಿದು ಕುಡಿವ ನೀರಿಗಾಗಿ ಜನ- ಜಾನುವಾರುಗಳು ಹಾಹಾಕಾರ ಪಡುವಂತಾಗಿದೆ. ಇದರಿಂದ ಕಂಗೆಟ್ಟ ರೈತರು ಪ್ರಸಕ್ತ ಸಾಲಿನಲ್ಲಿಯಾದರೂ ಉತ್ತಮ ಬೆಳೆ ತೆಗೆದು ಜೀವನ ಸುಧಾರಿಸಿ ಕೊಳ್ಳುವ ನಿರ್ಧಾರ ಮಾಡಿದ್ದಾರೆ. ಆದರೆ ಮಳೆಯಾಗುವುದೇ ಅನ್ನುವುದೇ ಯಕ್ಷ ಪ್ರಶ್ನೆ.

ಭೂಮಿ ಹದ ಮಾಡಿಕೊಂಡ ರೈತರು: ಕಳೆದ ಸಾಲಿನಲ್ಲಿ ಮಳೆ ಕೈಕೊಟ್ಟ ಹಿನ್ನೆಲೆ ಪ್ರಸಕ್ತ ಸಾಲಿನಲ್ಲಾದರೂ ಮಳೆಯ ಆಗಮನ ವಾಗುತ್ತಿದ್ದಂತೆಯೇ ಬಿತ್ತನೆ ಕಾರ್ಯ ಆರಂಭಿಸುವ ಸಲುವಾಗಿ ತಾಲೂಕಿನ ಬಹುತೇಕ ರೈತರು ಭೂಮಿ ಉಳುಮೆ ಮಾಡಿಕೊಂಡು ಮಳೆರಾಯನ ಆಗಮನ ಕ್ಕಾಗಿ ಕಾಯುತ್ತಿದ್ದಾರೆ. ಬೇಸಿಗೆಯ ಉರಿ ಬಿಸಿಲಿತ ತಾಪ ಸಹಿಸಲಾಗುತ್ತಿಲ್ಲ, ಹೀಗಿರು ವಾಗಲೂ ಅನ್ನದಾನ ಧೃತಿಗೆಡದೆ ಪ್ರಸಕ್ತ ಸಾಲಿನಲ್ಲಿಯಾದರೂ ಉತ್ತಮ ಬೆಳೆಯುವ ನಿರೀಕ್ಷೆಯಲ್ಲಿದದ್ದಾನೆ.

ತಾಲೂಕಿನ ಆರ್ಥಿಕ ಬೆಳೆ ಹತ್ತಿ: ತಾಲೂಕಿನ ರೈತರ ಆರ್ಥಿಕ ಬೆಳೆ ಹತ್ತಿ. ಈ ಹತ್ತಿಗೆ ನೆರೆಯ ತಮಿಳುನಾಡಿನಲ್ಲಿ ವಿಶೇಷ ಬೇಡಿಕೆ ಇದೆ. ಹಾಗಾಗಿ ತಾಲೂಕಿನ ಬಹುತೇಕ ರೈತರು ಹತ್ತಿ ಅವಲಂಭಿಸಿದ್ದಾರೆ.

ನಿರೀಕ್ಷೆ ಪ್ರಮಾಣದ ಮಳೆಯಾಗುವುದೆ: ಕಳೆದ ಸಾಲಿನ ಬರಗಾಲದಿಂದಲೇ ಜನ ಜಾನು ವಾರುಗಳು ತತ್ತರಗೊಂಡಿವೆ. ಹೀಗಿರು ವಾಗ ಮಳೆಯ ತಜ್ಞರ ವರದಿಯಂತೆ ಪ್ರಸಕ್ತ ಸಾಲಿನಲ್ಲಿಯೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಯಾಗುವುದಿಲ್ಲ ಅನ್ನುವ ಮಾಹಿತಿ ಲಭ್ಯ ವಾಗಿದೆ.

ಆದರೂ ರೈತರು ಮಾತ್ರ ಕೃಷಿ ಚಟುವಟಿಕೆ ಆರಂಭಕ್ಕೆ ಹಾತೊರೆಯುತ್ತಾ ಮಳೆಗಾಗಿ ಕಾಯುತ್ತಿದ್ದಾರೆ. ಆದರೆ ಎಷ್ಟು ಪ್ರಮಾಣದಲ್ಲಿ ಬೀಳುವುದೋ ಅನ್ನುವುದರ ಮೇಲೆ ರೈತರ ಜೊತೆಯಲ್ಲಿ ಜನಸಾಮಾನ್ಯರ ಜೀವನ ನಿರ್ಧಾ ರವಾಗಲಿದ್ದು ಮುಂದೇ ನಾಗುವುದೋ ಕಾದು ನೋಡಬೇಕಿದೆ?

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.