ಭೂ ಸುಧಾರಣೆ ಕಾಯ್ದೆ ಜನೋಪಕಾರಿ
Team Udayavani, Apr 6, 2017, 2:32 PM IST
ಚನ್ನಗಿರಿ: ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿದ್ದ ತಾಂಡಾ, ದೊಡ್ಡಿ ಪಾಳ್ಯ, ಹಟ್ಟಿ, ಕಾಲೋನಿಯಂತಹ ದಾಖಲೆ ಇಲ್ಲದ ಜನವಸತಿಗಳನ್ನು ಇನ್ನೂ ಮುಂದೆ ಕಂದಾಯ ಗ್ರಾಮಗಳನ್ನಾಗಿಸುವ ಮಹತ್ವದ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿರುವುದು ಹರ್ಷ ತಂದಿದೆ ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರ ಶಾಸಕ ಕೆ. ಶಿವಮೂರ್ತಿ ತಿಳಿಸಿದ್ದಾರೆ.
ಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ ವಿಧೇಯಕ ಅಂಗೀಕಾರಕ್ಕೆ ನಿರಂತರ ಒತ್ತಡ ಹಾಕಿ ಜಾರಿಗೆ ತರುವಲ್ಲಿ ಶ್ರಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕೆ. ಶಿವಮೂರ್ತಿ ನಾಯಕರಿಗೆ ಸನ್ಮಾನವನ್ನು ಮಾಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಶಾಸಕ ಕೆ. ಶಿವಮೂರ್ತಿ ನಾಯ್ಕ, ವಿಧಾನ ಸೌಧದಲ್ಲಿ ಭೂ ಸುಧಾರಣೆ ಕಾಯ್ದೆಯ ಬಗ್ಗೆ ವಿಷಯ ಪ್ರಸ್ತಾಪಿಸುತ್ತಿದಂತೆ ಪ್ರತಿಸಾರಿಯೂ ಇವನೊಬ್ಬ ಹುಚ್ಚ ಎನ್ನುತ್ತಿದ್ದರು.
ಇದನ್ನು ಜಾರಿ ಮಾಡುವಂತೆ ನಾನು ಒತ್ತಡ ಹೇರಿದ ಪರಿಣಾಮ, ವಿಧೇಯಕ ಅಂಗೀಕಾರವಾಗಿದೆ. ನನ್ನ ಕಾನೂನು ಹೋರಾಟವನ್ನು ಕಾಂಗ್ರೆಸ್ ಸರ್ಕಾರ ಮನ್ನಿಸಿದೆ. ರಾಜ್ಯದಲ್ಲಿ ಸುಮಾರು 58 ಸಾವಿರ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕರ್ನಾಟಕ ಭೂ ಸುಧಾರಣೆ ಕಾಯ್ದೆಯಾಗಿದೆ. ಇದರಲ್ಲಿ ವಾಸಿಸುವವನೇ ಮನೆಯ ಒಡೆತನ ಕೊಡುವ ಮಹತ್ವದ ವಿಧೇಯಕವಾಗಿದೆ ಎಂದರು.
ಈ ವಿದೇಯಕದಿಂದ ಸುಮಾರು 5 ಲಕ್ಷ ಕುಟುಂಬಗಳಿಗೆ ದಾಖಲಾತಿಗಳು ದೊರೆಯಲ್ಲಿವೆ. ಇಲ್ಲಿಯವರೆಗೆ ಆ ಕುಟುಂಬಗಳು ಪರಿಪೂರ್ಣವಾಗಿ ಸರ್ಕಾರಿ ಸೌಲಭ್ಯಗಳಿಲ್ಲದೆ ವಂಚನೆಗೆ ಒಳಪಟ್ಟಿದ್ದವು. ವಿದೇಯಕ ಮಂಡನೆಗೆ 60ಕ್ಕೂ ಹೆಚ್ಚು ಶಾಸಕರು ನನ್ನ ಜತೆ ಧ್ವನಿ ಗೂಡಿಸಿದ್ದರು. ಅದರ ಪರಿಣಾಮ ಸುವರ್ಣವಕಾಶದಲ್ಲಿ ಬರೆದಿಡುವಂತಹ ಮಹತ್ವದ ಯೋಜನೆ ಇದಾಗಿದೆ ಎಂದರು.
ಭೂ ಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿಗೊಳಿಸಿ ಇದರಲ್ಲಿ ರಾಜ್ಯದಲ್ಲಿರುವ 58 ಸಾವಿರ ಗೊಲ್ಲರಹಟ್ಟಿ, ಲಂಬಾಣಿ ತಾಂಡಾ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರಹಟ್ಟಿ, ಮಜಾರೆ ಗ್ರಾಮ, ದೊಡ್ಡಿಪಾಳ್ಯ, ಕ್ಯಾಂಪ್, ಗೌಳಿ ದೌಡ್ಡಿ, ಕಾಲೋನಿ ಅಂತಹ ದಾಖಲೆ ಇಲ್ಲದ ಜನವಸತಿ ಗ್ರಾಮಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಸರ್ಕಾರದ ಎಲ್ಲ ಸವಲತ್ತುಗಳನ್ನು ದೊರೆಯವಂತೆ ಮಾಡುವುದು ಈ ವಿಧೇಯಕದ ಪ್ರಮುಖಾಂಶವಾಗಿದೆ ಎಂದರು. ಕಾಂಗ್ರೆಸ್ ಮುಖಂಡರಾದ ಟಿ. ಮಹೇಶ್ವರಪ್ಪ, ಬಸವರಾಜಪ್ಪ, ಶಿವಗಾರಯ್ಯ, ಸುಣಿಗೆರೆ ಮಲ್ಲನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.