ಉಪದೇಶ ಪಾಲನೆಯಿಂದ ಮೋಕ್ಷ ಪ್ರಾಪ್ತಿ


Team Udayavani, Apr 6, 2017, 2:46 PM IST

hub4.jpg

ಹುಬ್ಬಳ್ಳಿ: ಮಹಾವೀರ ತೀರ್ಥಂಕರರ ಉಪದೇಶವೇ ನಮ್ಮ ಎರಡು ಕಣ್ಣುಗಳಾಗಿದ್ದು, ಸ್ವಾಮಿಯ ಮಾರ್ಗದಲ್ಲೇ ಜೀವನ ಸಾಗಿಸು ತ್ತೇವೆಂದು ಮುಂದೆ ಸಾಗಿದರೆ ಮೋಕ್ಷಪ್ರಾಪ್ತಿ ಪಡೆಯಬಹುದೆಂದು ಹೊಂಬುಜದ ಶ್ರೀ ಜೈನ ಮಠದ ಡಾ| ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ನುಡಿದರು. 

ಇಲ್ಲಿನ ಮಹಾವೀರ ಗಲ್ಲಿಯ ಶಾಂತಿನಾಥ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿರುವ ಮಹಾವೀರ ತೀರ್ಥಂಕರರ 2616ನೇ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಶಾಂತಿನಾಥ ತೀರ್ಥಂಕರರು ಮಾರ್ಗ ತಪ್ಪಿ ಹೋಗುತ್ತಿದ್ದಾಗ ಅವರಿಗೆ ಸರಿಯಾದ ಮಾರ್ಗ ತೋರಿದ ಬೇಡನು ಶ್ರೀಗಳ ಆಶೀರ್ವಾದದ ಫಲದಿಂದಾಗಿ ಮಹಾವೀರರಾಗಿ ಜನಿಸಿದರು.

ಮಹಾವೀರ ತೀರ್ಥಂಕರರು ಅಪಾರ ಪುಣ್ಯಪ್ರಾಪ್ತಿ ಮಾಡಿಕೊಂಡು ಮೋಕ್ಷ ಹೊಂದಿದರು. ಇಂದಿಗೂ ತೀರ್ಥಂಕರರ ಅನುಶಾಸನ, ಉಪದೇಶ, ಮಾರ್ಗದರ್ಶನದಂತೆ ಮೋಕ್ಷ ಮಾರ್ಗ ನಡೆಯುತ್ತಿದೆ ಎಂದರು. ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಡಿಆರ್‌ಎಂ ಅರುಣ ಜೈನ ಮಾತನಾಡಿ, ಸದ್ಯದಲ್ಲೇ ಹುಬ್ಬಳ್ಳಿ-ಶ್ರವಣಬೆಳಗೊಳಕ್ಕೆ ರೈಲು ಆರಂಭಿಸಲಾಗುವುದು.

ಅಲ್ಲದೆ ಈ ರೈಲಿಗೆ ಧಾರವಾಡದಿಂದ ಎರಡು ಹೆಚ್ಚುವರಿ ಬೋಗಿ ಅಳವಡಿಸಲು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಸ್ಥಳೀಯ ದಿಗಂಬರ ಜೈನ ಸಮಾಜದ ಅಧ್ಯಕ್ಷ ಶಾಂತಿನಾಥ ಹೋತಪೇಟಿ ಮಾತನಾಡಿ, ಮಹಾಮಸ್ತಕಾಭಿಷೇಕ ನಿಮಿತ್ತ ನಗರಕ್ಕೆ ಅನೇಕ ತ್ಯಾಗಿಗಳು ಬರುತ್ತಾರೆ. ಸಮಾಜದವರು ತ್ಯಾಗಿಗಳ ಸೇವೆಯಲ್ಲಿ ಪಾಲ್ಗೊಳ್ಳಿರಿ. ಯುವ ಜನಾಂಗವು ಸಮಾಜ ಸೇವೆಯಲ್ಲಿ ತೊಡಗಿರುವುದು ಸಂತಸದ ವಿಷಯ.

ಸಮಾಜದಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಪರಸ್ಪರ ಪ್ರೀತಿ-ವಿಶ್ವಾಸದಿಂದ ಸಮಾಜ ಬಲಗೊಳಿಸೋಣವೆಂದರು. ಇದೇ ಸಂದರ್ಭದಲ್ಲಿ ಶ್ರೀಗಳು ಸಮಾಜದಲ್ಲಿ ವಿವಿಧ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿದರು. ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿಮಲ ತಾಳಿಕೋಟಿ, ರಾಜೇಂದ್ರ ಬೀಳಗಿ, ಶ್ರೇಣಿಕರಾಜ ರಾಜಮಾನೆ, ಆರ್‌.ಟಿ. ತವನಪ್ಪನವರ, ಮಹಾವೀರ ಸೂಜಿ, ರಾಮಚಂದ್ರ ದಿನಕರ ಇದ್ದರು. ಭರತಕುಮಾರ ಮುತ್ತಗಿ ನಿರೂಪಿಸಿದರು. 

ಟಾಪ್ ನ್ಯೂಸ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.