ಶ್ರೀರಾಮನ ಆದರ್ಶಗಳು ಎಂದೆಂದಿಗೂ ಪ್ರಸ್ತುತ
Team Udayavani, Apr 6, 2017, 2:57 PM IST
ಹುಬ್ಬಳ್ಳಿ: ಶ್ರೀರಾಮ ನವಮಿ ನಿಮಿತ್ತ ಬಾನಿ ಓಣಿಯಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಗೆ ಚಾಲನೆ ನೀಡಿದ ಮೂರುಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, ಶ್ರೀರಾಮನ ಆದರ್ಶಗಳು ಕಲಿಯುಗದಲ್ಲಿ ಪ್ರಸ್ತುತವಾಗಿವೆ.
ಶ್ರೀರಾಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಹಾತ್ಮಾ ಗಾಂಧಿಧಿಯವರ ರಾಮರಾಜ್ಯ ಕನಸನ್ನು ಜನಪ್ರತಿನಿಧಿಗಳು ನನಸು ಮಾಡಬೇಕು. ಆಗ ಮಾತ್ರ ಜೀವನ ಸಾರ್ಥಕವಾಗುವುದು ಎಂದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ವಸಂತ ಹೊರಟ್ಟಿ,
ಸುಬ್ರಮಣ್ಯ ಶಿರಕೋಳ, ಕೃಷ್ಣ ಗಂಡಗಾಳೇಕರ, ಉಪಮಹಾಪೌರ ಲಕ್ಷ್ಮಿಬಾಯಿ ಬಿಜವಾಡ, ಸ್ಮಿತಾ ಜಾಧವ, ಮಹೇಶ ಟೆಂಗಿನಕಾಯಿ, ಜಯತೀರ್ಥ ಕಟ್ಟಿ, ಶರಣು ಅಂಗಡಿ, ರಂಗಾ ಕಠಾರೆ, ಗಜು ಜಡಿ ಸೇರಿದಂತೆ ನೂರಾರು ರಾಮಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
16 ಅಡಿ ಎತ್ತರದ ಶ್ರೀರಾಮನ ಮೂರ್ತಿಯೊಂದಿಗೆ ನಡೆದ ಮೆರವಣಿಗೆಯಲ್ಲಿ ಕೇಸರಿ ಧ್ವಜ, ಟೋಪಿ ಧರಿಸಿದ ಯುವಕರು ಭಾಗವಹಿಸಿದ್ದರು. ಮೆರವಣಿಗೆಯುದ್ದಕ್ಕೂ ಡಿಜೆ ಸಂಗೀತಕ್ಕೆ ತಕ್ಕಂತೆ ಯುವಕರು ಹೆಜ್ಜೆ ಹಾಕುತ್ತಿದ್ದುದು ಕಂಡು ಬಂತು. ಮೆರವಣಿಗೆಯಲ್ಲಿ ಪಾಲ್ಗೊಂಡವರಿಗಾಗಿ ಕುಡಿಯಲು ನೀರು, ಶರಬತ್ ನೀಡಲಾಯಿತು.
ಬಾನಿ ಓಣಿಯಿಂದ ಮಧ್ಯಾಹ್ನ 12ಕ್ಕೆ ಆರಂಭಗೊಂಡ ಶೋಭಾಯಾತ್ರೆ ರೈಲ್ವೆ ಸ್ಟೇಶನ್ ರಸ್ತೆ, ಗಣೇಶ ಪೇಟೆ ವೃತ್ತ, ಮರಾಠ ಗಲ್ಲಿ, ತುಳಜಾಭವಾನಿ ದೇವಸ್ಥಾನ, ದಾಜಿಬಾನ ಪೇಟೆ, ಚನ್ನಮ್ಮ ವೃತ್ತ, ಕೊಪ್ಪಿಕರ ರಸ್ತೆಯ ಮೂಲಕ ಬಾನಿ ಓಣಿಯಲ್ಲಿ ಮಧ್ಯಾಹ್ನ 3ಕ್ಕೆ ಮುಕ್ತಾಯಗೊಂಡಿತು. ಮಹಾನಗರ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಜಿನೇಂದ್ರ ಖನಗಾವಿ, ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿಪಿವೈ ಎನ್ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ
Pralhad Joshi: ಟಿಕೆಟ್ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.