ಸಾಲಮನ್ನಾ ಹೇಗೆ ಮಾಡಲ್ವೋ ನೋಡ್ತೇನೆ


Team Udayavani, Apr 7, 2017, 12:27 PM IST

mys2.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡುವುದಿಲ್ಲ ಎನ್ನುತ್ತಿದ್ದಾರೆ. ಅದೇಗೆ ಮಾಡುವುದಿಲ್ಲವೋ ನೋಡಿಯೇ ಬಿಡುತ್ತೇನೆ. ಉಪ ಚುನಾವಣೆ ನಂತರ ಹೋರಾಟ ನಡೆಸಿ ಇದೇ ಸರ್ಕಾರದಿಂದ ಸಾಲಮನ್ನಾ ಮಾಡಿಸುತ್ತೇನೆ. ಇದು ತನ್ನ ಸವಾಲು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪಗುಡುಗಿದರು.

ನಂಜನಗೂಡಿನ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಅವಧಿಯಲ್ಲಿ ರಾಜ್ಯ ದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ ಮಾಡುವುದು ಬೇರೆ ವಿಷಯ. ಆದರೆ, ಸಿದ್ದರಾಮಯ್ಯ ಸರ್ಕಾರ ಅದೇಗೆ ರೈತರ ಸಾಲಮನ್ನಾ ಮಾಡುವು ದಿಲ್ಲ ಎಂದು ನೋಡುತ್ತೇನೆ. ಉಪ ಚುನಾ ವಣೆಯ ನಂತರ ಹೋರಾಟ ನಡೆಸಿ ಇದೇ ಸರ್ಕಾರದಿಂದ ಸಾಲ ಮನ್ನಾ ಮಾಡಿಸು ತ್ತೇವೆ ಎಂದು ಸವಾಲು ಹಾಕಿದರು.

ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಹೇರಳವಾಗಿ ಹಣ ಸುರಿಯು ತ್ತಿದ್ದೀರಲ್ಲ ಸಿದ್ದರಾಮಯ್ಯನವರೆ, ಯಾರಪ್ಪನ ದುಡ್ಡು ಎಂದು ಜನರ ಹಣ ವನ್ನು ಹೀಗೆ ಖರ್ಚು ಮಾಡುತ್ತಿದ್ದೀರಿ? ನಿಮ್ಮ ತುಘಲಕ್‌ ದರ್ಬಾರು, ಸೊಕ್ಕಿನ ನಡೆ, ದುರಹಂಕಾರಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿ ತತ್ವ, ನೀತಿ, ಸಿದ್ಧಾಂತಗಳಿಗೆ ಅನುಗುಣವಾಗಿ ಚುನಾವಣೆ ಎದುರಿಸು ತ್ತಿದೆ ಹೊರತು ಹಣಬಲದಿಂದ ಎಂದೂ ಚುನಾವಣೆ ಮಾಡಿಲ್ಲ. ಕಾಂಗ್ರೆಸ್‌ನವರು ಜನರ ಹಣವನ್ನು ಕೊಳ್ಳೆ ಹೊಡೆದು ತಂದು ಜನರಿಗೇ ಹಂಚಿ ಮತ ಗಳಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದ ಬಲದಿಂದ ಪೊಲೀಸರನ್ನು ದುರುಪ ಯೋಗಪಡಿಸಿ ಕೊಂಡು, ಎಲ್ಲಾ ಬಗೆಯ ವಾಮ ಮಾರ್ಗ ಗಳನ್ನು ಬಳಸಿಕೊಂಡು ಗೆಲ್ಲಲು ಯತ್ನಿಸು ತ್ತಿದ್ದಾರೆ. ಆದರೆ, ಈ ಬಾರಿ ಮತದಾರರು ಅವರ ತಂತ್ರಗಳಿಗೆ ಶರಣಾ ಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾವು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸುತ್ತಿಲ್ಲ. ವಾಸ್ತವಾಂಶ ಗಳನ್ನು ಜನರ ಎದುರಿಗಿಟ್ಟು ಮತ ಕೇಳುತ್ತಿದ್ದೇವೆ. ನಂಜುಂಡೇಶ್ವರ ಮತ್ತು ಚಾಮುಂಡೇಶ್ವರಿ ನಾಡಿನಲ್ಲಿ ಬದಲಾ ವಣೆಗಳನ್ನು ತರುವ ರೀತಿಯಲ್ಲಿ ಈ ಉಪ ಚುನಾವಣೆಗಳ ಫ‌ಲಿತಾಂಶ ಹೊರಬೀಳಲಿ ಎಂದು ಬೇಡಿಕೊಂಡಿದ್ದೇವೆ. ಅದು ಫ‌ಲ ನೀಡಲಿದೆ ಎಂದರು.

ಣ ಹಂಚೋರನ್ನು ಹಿಡಿಯಿರಿ: ಹಣಹಂಚುವ ಕಾಂಗ್ರೆಸ್‌ನವರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿ ಎಂದು ಕಾರ್ಯ ಕರ್ತರಿಗೆ ಕರೆ ನೀಡಿದ ಅವರು, ಶ್ರೀನಿವಾಸ ಪ್ರಸಾದ್‌ ಅವರ ಸ್ವಾಭಿಮಾನ ವನ್ನು  ಬೆಂಬಲಿಸಿ ಬಿಜೆಪಿ ಗೆಲ್ಲಿಸಿ ಎಂದರು. ಸಚಿವರು ಬಂದಿರು ವುದು ಪ್ರಚಾರಕ್ಕಲ್ಲ, ಹಣ ಹಂಚಲು ಠಿಕಾಣಿ ಹೂಡಿದ್ದಾರೆ. ನಿಮ್ಮ ದುರಹಂಕಾರದ ಆಡಳಿತ ಮದ್ದರೆಯಲು ಎರಡೂ ಕ್ಷೇತ್ರದ ಮತದಾರರು ಸಿದ್ಧರಾಗಿದ್ದಾರೆ.

ರಾಜ್ಯದ ಖಜಾನೆಯನ್ನ ಲೂಟಿ ಮಾಡಿದ ಹಣ ಇಲ್ಲಿ ಹರಿಯುತ್ತಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್‌ ದಯಾನೀಯ ಸೋಲು ಖಚಿತ ಎಂದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಸಿ.ಎಂ.ಉದಾಸಿ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ವೀರಯ್ಯ, ಮಾಜಿ ಸದಸ್ಯ ಸಿ.ರಮೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.