ಮಾಹಿತಿಗಾಗಿ ಪಿರಿಯಾಪಟ್ಟಣ ಪುರಸಭೆ ಎದುರು ಟಿವಿ ಅಳವಡಿಕೆ


Team Udayavani, Apr 7, 2017, 12:43 PM IST

mys7.jpg

ಪಿರಿಯಾಪಟ್ಟಣ: ಏ.30ರ ಒಳಗೆ ಕಂದಾಯ ಪಾವತಿಸಿದರೆ ಶೇ.5 ಹಾಗೂ ಮಾಜಿ ಯೋಧರಿಗೆ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ. ಕಂದಾಯ ಪಾವತಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ವೇಣುಗೋಪಾಲ್‌ ಮನವಿ ಮಾಡಿದರು.

ಅಧ್ಯಕ್ಷರಾಗಿ 200 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ಅವಧಿಯಲ್ಲಿ ಪಕ್ಷ ಭೇದವಿಲ್ಲದೆ ಪಟ್ಟಣದ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ. ಪುರಸಭೆ ವ್ಯಾಪ್ತಿಯಲ್ಲಿನ ಮಾಹಿತಿಯನ್ನು ತಿಳಿಯಲು ವೆಬ್‌ಸೈಟ್‌ ತೆರೆಯಲಾಗಿದ್ದು, ಕಚೇರಿಯ ಮುಂಭಾಗ ಟೀವಿ ಮೂಲಕ ಮಾಹಿತಿ ವೀಕ್ಷಿಸಬಹುದಾಗಿದೆ ಎಂದರು.

ಮುಕ್ತ ಸಮಾಜ ನಿರ್ಮಿಸಲು ಪುರಸಭೆ ವತಿಯಿಂದ 9 ಸಾವಿರ ಹಾಗೂ ಸ್ವತ್ಛ ಭಾರತ ಅಭಿಯಾನದಡಿ 5 ಸಾವಿರ ರೂ.ಗಳನ್ನು ಶೌಚಾಲಯದ ನಿರ್ಮಾಣಕ್ಕೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಕೋರಿದರು.

ಇ-ಸ್ವತ್ತಿನಲ್ಲಿ ಆಸ್ತಿ ಮಾಹಿತಿ: ಪುರಸಭಾ ವ್ಯಾಪ್ತಿಯ ಮೂಲಭೂತ ಸೌಲಭ್ಯ ತಲುಪಿಸಲು ಜನಮುಖೀ ಮತ್ತು ಪಾರದರ್ಶಕ ಆಡಳಿತ ನೀಡಿದ್ದು, ಪುರಸಭೆಯ ಆದಾಯದ ಮೂಲಗಳನ್ನು ಹೆಚ್ಚಿಸಿ ಆರ್ಥಿಕ ಸದೃಢತೆಗೆ ಕಾರ್ಯಕ್ರಮ ರೂಪಿಸಲಾಗಿದೆ. ಇ ಸ್ವತ್ತು ಘೋಷಣೆ ಮಾಡುವುದರ ಮೂಲಕ ಆಸ್ತಿಯ ಸಂಪೂರ್ಣ ಮಾಹಿತಿ ಸಿಗುತ್ತದೆ. ಇದರಿಂದಾಗಿ ಆಸ್ತಿಗಳಿಗೆ ಭದ್ರತೆ ಇರುತ್ತದೆ ಮತ್ತು ಕಾನೂನು ಬಾಹಿರವಾಗಿ ಪರಭಾರೆ ಮಾಡಲು ಸಾಧ್ಯವಾಗುವುದಿಲ್ಲ. ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆಯಲ್ಲಿ ಪಟ್ಟಣವು 2ನೇ ಸ್ಥಾನದಲ್ಲಿದೆ ಎಂದರು.

8 ಕೋಟಿ ರೂ.ವೆಚ್ಚದಲ್ಲಿ ಮಳಿಗೆ: ಪುರಸಭೆ ಮಳಿಗೆಗಳ ಹರಾಜಿನಿಂದ 35 ಲಕ್ಷಕ್ಕೂ ಹೆಚ್ಚು ಆದಾಯ ಸಂಗ್ರಹಿಸಲಾಗಿದ್ದು, ಪುರಸಭೆಗೆ ತಿಂಗಳ ಬಾಡಿಗೆ ಆದಾಯವಾಗಿ 1.50 ಲಕ್ಷ ರೂ. ಬರುತ್ತಿದೆ. ಶಾಸಕರ ವಿಶೇಷ ಅನುದಾನದ  8 ಕೋಟಿ ರೂ.ಗಳನ್ನು ಮಳಿಗೆಗಳ ನಿರ್ಮಾಣಕ್ಕೆ ಬಳಸುತ್ತಿದ್ದು, ಬಸ್‌ನಿಲ್ದಾಣ, ಕೆ.ವೆಂಕಟೇಶ್‌ ಮಾರುಕಟ್ಟಗಳಲ್ಲಿ ತಲಾ 30 ಲಕ್ಷ ರೂ. ವೆಚ್ಚದಲ್ಲಿ  ಮಳಿಗೆ ನಿರ್ಮಿಸಲು ಕ್ರಿಯಾಯೋಜನೆ ಸಿದ್ಧಪಡಿಸ ಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಸ್ಮಶಾನಕ್ಕಾಗಿ ಜಿಲ್ಲಾಡಳಿತಕ್ಕೆ ಪುರಸಭೆ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತವು 20 ಗುಂಟೆ ಜಾಗವನ್ನು ಗುರುತಿಸಿ ಪುರಸಬಾ ವ್ಯಾಪ್ತಿಯ ಸಾರ್ವಜನಿಕ ಸ್ಮಶಾನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಪುರಸಭೆ ವತಿಯಿಂದ ಮೂಲಭೂತ ಸೌಲಭ್ಯ ಕಲ್ಪಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಒಳಚರಂಡಿ ವ್ಯವಸ್ಥೆಗೆ 57 ಕೋಟಿ ರೂ.: ಪಟ್ಟಣದ ವ್ಯಾಪ್ತಿಯಲ್ಲಿ ಒಳ ಚರಂಡಿ ವ್ಯವಸ್ಥೆ ನಿರ್ಮಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, 57 ಕೋಟಿ ರೂ.ಗಳ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪ್ರಾರಂಭಿಸ ಲಾಗುವುದು ಎಂದು ತಿಳಿಸಿದರು.

ನೀರಿನ ಸಮಸ್ಯೆ ಬಗೆಹರಿಸಲು 14. 52 ಲಕ್ಷ ರೂ.ಗಳ ವೆಚ್ಚದಲ್ಲಿ ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಹರವೆಮಲ್ಲರಾಜ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗುವುದು. ಕಾವೇರಿ ನೀರು ದುರಸ್ತಿಗೆ 1 ಕೋಟಿ ರೂ. ಮೀಸಲಿಟ್ಟಿದ್ದು, ಪುರಸಬೆ ವ್ಯಾಪ್ತಿಗೆ ಬರುವ ನೂತನ ಗ್ರಾಮಗಳಿಗೂ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ನಂಜುಂಡಸ್ವಾಮಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.