ಆರೋಗ್ಯ ವಿಚಾರಕ್ಕೆ ಪ್ರಚಾರ ಕೊರತೆ


Team Udayavani, Apr 7, 2017, 1:11 PM IST

hub1.jpg

ಹುಬ್ಬಳ್ಳಿ: ಭಾರತದಲ್ಲಿ ಉತ್ಪನ್ನಗಳಿಗೆ ಪ್ರಚಾರ ಸಿಗುವಷ್ಟು ಆರೋಗ್ಯ ರಕ್ಷಣೆ ಕುರಿತ ವಿಷಯಗಳಿಗೆ ಪ್ರಚಾರ ಸಿಗದಿರುವುದು ದುರದೃಷ್ಟಕರ ಸಂಗತಿ ಎಂದು ಇಂಡೋಸಿಸ್‌ ಲೈಫ್ ಸಾಯನ್ಸ್‌ ಸಂಸ್ಥೆಯ ಚೇರನ್‌ ಹಾಗೂ ಅಂತಾರಾಷ್ಟ್ರೀಯ ಆಹಾರ ತಜ್ಞ ಡಾ| ಎಸ್‌. ಎಚ್‌.ಕುಲಕರ್ಣಿ ಹೇಳಿದರು. 

ಗುರುವಾರ ವಕೀಲರ ಸಂಘದ ಸಭಾಭವನದಲ್ಲಿ ಆರೋಗ್ಯ ಚಿಂತನ ಕುರಿತು ಅವರು ಉಪನ್ಯಾಸ ನೀಡಿದರು.  ಬೇರೆ ದೇಶಗಳಲ್ಲಿ ಉತ್ಪನ್ನಗಳೊಂದಿಗೆ ಆರೋಗ್ಯ ರಕ್ಷಣೆ ಕುರಿತು ಪ್ರಚಾರ ಮಾಡಲಾಗುತ್ತದೆ. ಆದರೆ ನಮ್ಮಲ್ಲಿ ಸೆಲೆಬ್ರಿಟಿಗಳನ್ನು ಬಳಸಿಕೊಂಡು ಕಂಪನಿಗಳು  ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತವೆ. 

ಆರೋಗ್ಯ ರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ವಿರಳ ಎಂದರು. ರೋಗ ಬಂದ ನಂತರ ವೈದ್ಯರ ಬಳಿಗೆ ಎಡತಾಕುವುದಕ್ಕಿಂತ ರೋಗ ಬರದಂತೆ ತಡೆಯುವುದು ಹೇಗೆ ಎಂಬುದರ ಬಗ್ಗೆ ತಿಳಿಯುವುದು ಅವಶ್ಯ. ಆಹಾರ, ನೀರು, ವ್ಯಾಯಾಮ, ಜೀವನಶೈಲಿಯಿಂದ ಹೆಚ್ಚಿನ ರೋಗಗಳು ಬರದಂತೆ ತಡೆಯಬಹುದು ಎಂದರು.

ಪ್ರತಿದಿನ ನಾವು ಸೇವಿಸುವ ಆಹಾರದ ಮೂಲಕ ರಾಸಾಯನಿಕ ನಮ್ಮ ದೇಹಕ್ಕೆ ಸೇರುವುದರಿಂದ ಜೀವಕೋಶಗಳ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಇದು ರೋಗಗಳಿಗೆ ಕಾರಣವಾಗಿದೆ.  ಎಲ್ಲ ರೋಗಗಳಿಗೂ ಜೀವಕೋಶಗಳು ಹಾಳಾಗುವುದೇ ಕಾರಣ ಎಂದರು. ಅಡುಗೆ ಅನಿಲ ಬಳಸಿ ಅಡುಗೆ ಮಾಡುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇರುತ್ತದೆ.

ಅಡುಗೆ ಅನಿಲದಲ್ಲಿರುವ ಕೆಲ ರಾಸಾಯನಿಕಗಳಿಂದ ಹೆಚ್ಚು ಹೊತ್ತು ಅಡುಗೆ ಮನೆಯಲ್ಲಿ ಕಳೆಯುವ ಮಹಿಳೆಯರಲ್ಲಿ 40-45 ವರ್ಷಕ್ಕೆ ಸಂದು ನೋವು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದರು. ಭಾರತದಲ್ಲಿ ಆರೋಗ್ಯಕ್ಕೆ ಪೂರಕವಾಗುವ ಹಲವಾರು ಉತ್ಪನ್ನಗಳು ಸಿದ್ಧವಾಗುತ್ತಿದ್ದರೂ ಅವುಗಳನ್ನು ವಿದೇಶಗಳಿಗೆ ರಫ್ತು ಮಾಡುವುದೇ ಅಧಿಕ.

ಭಾರತದಲ್ಲಿ ಉತ್ಪಾದಿಸುವ ಚಹಾಗಳಲ್ಲಿ ಶೇ.15ರಷ್ಟು ಚಹಾಗಳಲ್ಲಿ ಆರೋಗ್ಯ ಪೂರಕ ಅಂಶಗಳಿವೆ. ಆದರೆ ಅದು ಭಾರತದಲ್ಲಿ ಅದರ ಮಾರಾಟ ಅತಿ ಕಡಿಮೆ. ದೇಹಕ್ಕೆ ಮಾರಕವಾಗುವ ಶೇ.85 ಚಹಾ ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದೆ ಎಂದರು. ಜೀವಕೋಶಗಳು ಸಶಕ್ತವಾಗಿರಲು ಪ್ರತಿಯೊಂದು ಮನೆಗಳಲ್ಲಿ ಅಡುಗೆ ವೇಳಾಪಟ್ಟಿ ಹಾಕಿಕೊಳ್ಳಬೇಕು.

ಒಂದೇ ರೀತಿಯ ತರಕಾರಿ, ಧಾನ್ಯ ಬಳಕೆ ಮಾಡುವುದಕ್ಕಿಂತ 2-3 ರೀತಿಯ ತರಕಾರಿ, ಸೊಪ್ಪು, ಧಾನ್ಯ, ಹಣ್ಣು ಬಳಕೆ ಮಾಡುವುದು ಒಳಿತು. ನೋನಿ ಹಣ್ಣಿನ ಜ್ಯೂಸ್‌ ಬಳಕೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಅಣವೇಕರ, ಸಿ.ವಿ.ಮಲ್ಲಾಪುರ ವೇದಿಕೆ ಮೇಲಿದ್ದರು.   

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.