ವೈಭವದ ಶ್ರೀಕಂಠನ ಪಂಚ ಮಹಾರಥೋತ್ಸವ


Team Udayavani, Apr 8, 2017, 12:35 PM IST

mys1.jpg

ನಂಜನಗೂಡು: ದಕ್ಷಿಣ ಕಾಶಿ ಎಂಬ ಖ್ಯಾತಿ ಪಡೆದಿರುವ ಇಲ್ಲಿನ ಆರಾಧ್ಯದೈವ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ, ಸಂಭ್ರಮಗಳಿಂದ ನೆರವೇರಿತು. ಚೈತ್ರ ಮಾಸದ ಶುಕ್ರವಾರ ಬೆಳಗ್ಗೆ ಮೀನ ಲಗ್ನದಲ್ಲಿ ನಂಜುಂಡೇಶ್ವರನನ್ನು ಲಲಿತಾ ಚಂದ್ರಶೇಖರ ನಾಮಧೇಯದೊಂದಿಗೆ ರಥಾರೂಢನಾಗಿಸಿದ ಭಕ್ತರು 110 ಟನ್‌ ಬಾರದ 76 ಅಡಿ ಎತ್ತರದ ಭವ್ಯ ರಥವನ್ನು ಎಳೆಯುತ್ತ ರಥದಲ್ಲಿ ಪವಡಿಸಿದ ಭವರೋಗ ವೈದ್ಯನಿಗೆ ಹಣ್ಣು-ದವನ, ಧಾನ್ಯ ಎಸೆದು ಭಕ್ತಿ ಮೆರೆದರು.

ಚತುರ್ಮುಖ ಬ್ರಹ್ಮನನ್ನೇ ಸಾರಥಿಯನ್ನಾಗಿಸಿದ ರಥದ ಹಗ್ಗ ಹಿಡಿದು ಜಯಘೋಷದ ನಡುವೆ ಎಳೆದಾಗ ನಿಧಾನವಾಗಿ ಸಾಗಿದ ರಥ  ಮುಂದೆ ಸಾಗಿತು. ರಾಕ್ಷಸ ಮಂಟಪ ದಾಟಿ  ಚಾಮುಂಡಿಯ ದರ್ಶನಕ್ಕೆಂದು ವಾಡಿಕೆಯಂತೆ ಕೆಲ ಸಮಯ ಹಳೆ ಪೊಲೀಸ್‌ ಠಾಣೆಯ ಮುಂದೆ ವಿಶ್ರಮಿಸಿದ ಈ ರಥ ಮುಂದೆ ಸಾಗಿತು.

ಸ್ವಾಮಿಯವರ ರಥವನ್ನು ಹಿಂಬಾಲಿಸಿ ಬರುತ್ತಿದ್ದ ಪಾರ್ವತಿ ದೇವಿ ಪವಡಿಸಿದ ರಥ ಅದೇ ರಸ್ತೆಯಲ್ಲಿ ಪತಿಯ ರಥ ನಿಂತ ಸ್ಥಳಕ್ಕಿಂತ 100 ಅಡಿ ಹಿಂಭಾಗ ಗೋವಿಂದರಾಜ ಶೆಟ್ಟರ ಅಂಗಡಿ ಸಮೀಪ  ರಸ್ತೆ ಬಲಭಾಗದಲ್ಲಿ ಹೂತು ಇದೇ ಪ್ರಥಮ ಬಾರಿಗೆ ನಿಂತು ಇತಿಹಾಸ ಸೃಷ್ಟಿಸಿತು. ನಂತರ ರಥವನ್ನು 45 ನಿಮಿಷಗಳಲ್ಲಿ  ಕ್ರೇನ್‌ ಹಾಗೂ ಜೆಸಿಬಿ ಯಂತ್ರದ ಮೂಲಕ ಮತ್ತೆ ಮೇಲೆತ್ತಿದ ಭಕ್ತರು ರಥವನ್ನು ಸ್ವಸ್ಥಾನಕ್ಕೆ ಏರಿಸಿದರು.

ಬೆಳಗ್ಗೆ 5.30ಕ್ಕೆ ಆಗಮಿಕ ನಾಗಚಂದ್ರ  ದೀಕ್ಷೀತರು ಸ್ಥಳ ಪುರೋಹಿತ ಸಪ್ತರ್ಷಿ ಜೋಯಿಸರ ನೇತೃತ್ವದಲ್ಲಿ  ನಡೆದ ವೇದಘೋಷ ಹಾಗೂ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ರಥಾರೂಢನಾಗಿರುವ ಶ್ರೀಕಂಠೇಶ್ವರನ ಗೌತಮ ರಥಕ್ಕೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಷಡಕ್ಷರಸ್ವಾಮಿ, ಜಿಲ್ಲಾಧಿಕಾರಿ ರಂದೀಪ್‌ ಪೂಜೆ ಸಲ್ಲಿಸಿ ಇಡುಗಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪೊಲೀಸ್‌ ವರೀಷ್ಠಾಧಿಕಾರಿ  ರವಿ ಚಿನ್ನಣ್ಣನವರ್‌, ಜಿಪಂ ಸಿಇಒ ಶಿವಶಂಕರ್‌  ಉಪವಿಭಾಗಾಧಿಕಾರಿ ಆನಂದ, ತಹಶೀಲ್ದಾರ್‌ ದಯಾನಂದ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.