ಚಾಲಕರು-ಕ್ಲೀನರ್ ಕಾರ್ಯಕ್ಷಮತೆಗೆ ಮೇಯರ್ ಮೆಚ್ಚುಗೆ
Team Udayavani, Apr 8, 2017, 1:05 PM IST
ದಾವಣಗೆರೆ: ಏ. 13ರಂದು ತಮ್ಮ ಅಧಿಕಾರಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಮೇಯರ್ ರೇಖಾ ನಾಗರಾಜ್ ಶುಕ್ರವಾರ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಲಘು ಉಪಾಹಾರ ಕೂಟ ಏರ್ಪಡಿಸಿ, ಅವರ ಕಾಯಕ್ಷಮತೆ ಶ್ಲಾಘಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ತ್ಯಾಜ್ಯ ಸಂಗ್ರಹ ಅಧಿಕವಾಗುತ್ತಿದ್ದು, ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ವಾಹನಗಳಲ್ಲಿ 60-70 ಟನ್ನಷ್ಟು ತ್ಯಾಜ್ಯ ಡಂಪ್ ಮಾಡಲಾಗುತ್ತಿತ್ತು. ವಾಹನಗಳ ಚಾಲಕರು, ಕ್ಲೀನರ್ಗೊಂದಿಗೆ ಮಾತನಾಡಿ, ಅವರ ಸಮಸ್ಯೆ ಆಲಿಸಿದ್ದರಲ್ಲದೆ, ವಾಹನಗಳ ದುರಸ್ತಿಗೆ ಮೇಯರ್ ಕ್ರಮ ಕೈಗೊಂಡಿದ್ದರು.
ಇದರಿಂದ ಹಂತ ಹಂತವಾಗಿ ತ್ಯಾಜ್ಯ ವಿಲೇವಾರಿ ಪ್ರಮಾಣ ಹೆಚ್ಚುತ್ತಾ ಬಂದಿತಲ್ಲದೆ, 120 ಟನ್ ನಷ್ಟು ವಿಲೇವಾರಿ ಮಾಡಲಾಗಿದೆ. ಚಾಲಕರು ಹಾಗೂ ಕ್ಲೀನರ್ಗಳ ಕಾರ್ಯಕ್ಷಮತೆ ಮೆಚ್ಚಿ ಅವರಿಗೆ ಕೃತಜ್ಞತೆ ಸಲ್ಲಿಸಿದ, ಮೇಯರ್ ಸ್ವತ ತಾವೇ ಲಘು ಉಪಾಹಾರ ವಿತರಿಸಿದರು.
ಈ ವೇಳೆ ಮಾತನಾಡಿದ ಮೇಯರ್ ರೇಖಾ ನಾಗರಾಜ್, 6 ತಿಂಗಳ ಹಿಂದೆ ನಾನು ಅಧಿಕಾರ ವಹಿಸಿಕೊಂಡಾಗ ನಗರದ ತ್ಯಾಜ್ಯ ವಿಲೇವಾರಿ ಪ್ರಮಾಣ ದಿನಕ್ಕೆ 70-80 ಟನ್ ಮಾತ್ರ ಇತ್ತು. ವಾಸ್ತವದಲ್ಲಿ ದಿನನಿತ್ಯ 120 ಟನ್ ಕಸ ಉತ್ಪತ್ತಿಯಾಗುತ್ತದೆ. ಪೂರ್ಣ ಪ್ರಮಾಣದ ವಿಲೇವಾರಿ ಸಾಧ್ಯ ಆಗಿರಲಿಲ್ಲ.
ದಿನವೊಂದಕ್ಕೆ 40-50 ಟನ್ ಕಸ ಹಾಗೆ ಉಳಿಯುತ್ತಿತ್ತು. ಇದರ ಪರಿಹಾರಕ್ಕೆ ಚಾಲಕರ, ಕೀÉನರ್, ಕಸ ತುಂಬುವವರ ಸಭೆ ನಡೆಸಿದ್ದೆ. ಸಭೆಯಲ್ಲಿ ಸಿಬ್ಬಂದಿ ತಮಗೆ ಇದ್ದ ಸಮಸ್ಯೆ ಹೇಳಿಕೊಂಡಿದ್ದರು ಎಂದು ಸ್ಮರಿಸಿದರು. ವಾಹನ ದುರಸ್ತಿ ಇತರೆ ಸಮಸ್ಯೆ ಪರಿಹರಿಸಿದ ನಂತರ ದಿನನಿತ್ಯ ಕಸ ವಿಲೇವಾರಿ ಪ್ರಮಾಣ ಹೆಚ್ಚಾಗುತ್ತಾ ಹೋಯಿತು.
ಇಂದು 38 ವಾಹನಗಳಲ್ಲಿ ಸರಿಯಾಗಿ 120 ಟನ್ ಕಸ ವಿಲೇವಾರಿ ಮಾಡಲಾಗಿದೆ. ನಿಜಕ್ಕೂ ಇದು ಉತ್ತಮ ಕಾರ್ಯ. ಇದನ್ನು ಮುಂದೆ ಸಹ ಹೀಗೆ ಕಾಪಾಡಿಕೊಂಡು ಹೋಗಿ. ಸಮಸ್ಯೆಗಳು ಬಂದಾಗ ಪರಿಹರಿಸಿಕೊಂಡು ನಗರದ ಸ್ವತ್ಛತೆಗೆ ಒತ್ತುಕೊಡಿ ಎಂದು ಕೋರಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಹಾಲೇಶ್, ಪಾಲಿಕೆ ಆಯುಕ್ತ ಬಿ.ಎಚ್. ನಾರಾಯಣಪ್ಪ, ಪಾಲಿಕೆಯ ಹಿರಿಯ ಸದಸ್ಯ ಶಿವನಹಳ್ಳಿ ರಮೇಶ್, ಪೌರ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜ್ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.