ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿ ಬೆಳ್ಳಕ್ಕಿ ಆಯ್ಕೆ
Team Udayavani, Apr 8, 2017, 1:21 PM IST
ಧಾರವಾಡ: ಇಲ್ಲಿಯ ಧಾರವಾಡ ವಕೀಲರ ಸಂಘದ ಆಡಳಿತ ಮಂಡಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಕಳೆದ ಮೂರು ಅವಧಿಗೆ ವಕೀಲರ ಸಂಘದ ಅಧ್ಯಕ್ಷರಾಗಿದ್ದ ವಿ.ಡಿ.ಕಾಮರೆಡ್ಡಿ ವಿರುದ್ಧ ಈ ಸಲ ಆರ್.ಯು.ಬೆಳ್ಳಕ್ಕಿ ಕಣಕ್ಕಿಳಿದು ಜಯಶಾಲಿಯಾದರು.
ಆರ್ .ಯು.ಬೆಳ್ಳಕ್ಕಿ 518 ಮತ ಪಡೆದು ಗೆಲುವು ಸಾಧಿಸಿದರೆ, ವಿ.ಡಿ.ಕಾಮರೆಡ್ಡಿ 457 ಮತ ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದ ಪ್ರಕಾಶ ಉಡಿಕೇರಿ 427 ಮತ ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿಗಳಾದ ಆರ್.ಜಿ.ನಾಯ್ಡು (189), ಆರ್.ಎಚ್.ಯಲಿಗಾರ (186), ವೈ.ಪಿ.ಮದೂರ (178) ಮತ ಪಡೆದರು.
ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಿಂದಿನ ಬಾರಿ ಕಾರ್ಯದರ್ಶಿಯಾಗಿದ್ದ ಸಿ.ಎಸ್.ಪೊಲೀಸ್ ಪಾಟೀಲ ಈ ಸಲವೂ 505 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಸಚಿನ ಕುಲಕರ್ಣಿ (480) ಅವರನ್ನು ಸೋಲಿಸಿದರು. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಬಿ.ಬನ್ನೂರ 487 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿ ಸ್ಪರ್ಧಿ ವಿ.ಎಂ.ಸಾಲಿ (422) ಅವರನ್ನು ಮಣಿಸಿದರು.
ಖಜಾಂಚಿ ಹುದ್ದೆಗೆ ಸ್ಪರ್ಧಿಸಿದ್ದ ಎನ್.ಆರ್.ಮಟ್ಟಿ 450 ಮತಗಳನ್ನು ಪಡೆದು ಆಯ್ಕೆಯಾದರೆ, ಅವರ ಪ್ರತಿಸ್ಪರ್ಧಿಗಳಾದ ಪ್ರಕಾಶ ರಟಗೇರಿ (388) ಹಾಗೂ ವಿ.ಎಚ್.ಪಾಟೀಲ (169) ಮತಗಳನ್ನು ಪಡೆದರು. ಇನ್ನು ಕಾರ್ಯಕಾರಿ ಆಡಳಿತ ಮಂಡಳಿಗೆ ಕಣದಲ್ಲಿದ್ದ 11 ಜನರ ಪೈಕಿ ಹೇಮಂತ್ ಕನಕಿಕೊಪ್ಪ (721), ಶ್ರೀಧರ್ ಹಂಚಿನಾಳ (641), ಸಂತೋಷ ಗೋಡಿ (521), ಮಹೇಶ ಕೆಲಗೇರಿ (504), ವೀರಣ್ಣ ಕಾಜಗಾರ (477), ಕಲ್ಮೇಶ ನಿಂಗಣ್ಣವರ (473) ಮತ ಪಡೆದು ಆಯ್ಕೆಗೊಂಡಿದ್ದಾರೆ.
ಉಳಿದಂತೆ ಮಹಿಳಾ ಪ್ರತಿನಿಧಿ ಹುದ್ದೆಗೆ ಸ್ಪರ್ಧಿಸಿದ್ದ ರೂಪಾ ಕೆಂಗಾನೂರ 510 ಮತ ಪಡೆದು ಗೆಲುವು ಸಾಧಿಸಿದರೆ, ಅವರ ಪ್ರತಿಸ್ಪರ್ಧಿ ಸಾವಿತ್ರಿ ಕುಲಕರ್ಣಿ 450 ಮತಗಳನ್ನು ಪಡೆದು ಪರಾಭವಗೊಂಡರು. ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿತ್ತು.
ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಡೆದ ಮತದಾನದಲ್ಲಿ ಒಟ್ಟು 1139 ಮತಗಳ ಪೈಕಿ 987 ಮತಗಳು ಚಲಾವಣೆಗೊಂಡಿವೆ. ಸಂಜೆ ಮತದಾನ ಮುಗಿದ ಬಳಿಕ ಮತ ಎಣಿಕೆ ತಡರಾತ್ರಿವರೆಗೂ ನಡೆಯಿತು. ಮತ ಎಣಿಕೆ ಆದಂತೆ ಫಲಿತಾಂಶ ಪ್ರಕಟಿಸಲಾಯಿತು. ವಿಜೇತರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲು ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.