ಉಪ್ಪಿನಂಗಡಿಯಲ್ಲಿ ತಂದೆಯ ಅಸ್ಥಿ ವಿಸರ್ಜನೆ ಮಾಡಿದ ಐಶ್ವರ್ಯಾ ರೈ
Team Udayavani, Apr 8, 2017, 2:34 PM IST
ಮಂಗಳೂರು: ಬಾಲಿವುಡ್ನ ಖ್ಯಾತ ನಟಿ ಐಶ್ವರ್ಯಾ ರೈ ಅವರು ಪುತ್ರಿ ಮತ್ತು ಕುಟುಂಬ ಸದಸ್ಯರೊಂದಿಗೆ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದಾರೆ. ಇತ್ತೀಚೆಗೆ ಮುಂಬಯಿಯಲ್ಲಿ ನಿಧನಹೊಂದಿದ ತಂದೆ ಕೃಷ್ಣರಾಜ್ ರೈ ಅವರ ಅವರ ಅಸ್ಥಿ ವಿಸರ್ಜನೆಯನ್ನು ಉಪ್ಪಿನಂಗಡಿಯ ನೇತ್ರಾವತಿ-ಕುಮಾರಧಾರಾ ನದಿಗಳ ಸಂಗಮ ಸ್ಥಳದಲ್ಲಿ ನೆರವೇರಿಸಿದರು.
ಐಶ್ವರ್ಯಾ ದಂಪತಿಯ ಪುತ್ರಿ ಆರಾಧ್ಯ,ತಾಯಿ ವೃಂದಾ ,ಸಹೋದರ ಆದಿತ್ಯ ರೈ
ಸೇರಿದಂತೆ ಕುಟುಂಬ ಸದಸ್ಯರು ಜೊತೆಗಿದ್ದರು.
ಮುಂಬಯಿಯಿಂದ ವಿಮಾನದ ಮೂಲಕ ಬೆಳಗ್ಗೆ 10.45ಕ್ಕೆ ಬಜಪೆ ಆಗಮಿಸಿದ ಅಶರು ಶ್ರೀ ಕ್ಷೇತ್ರ ಕದ್ರಿ ಮತ್ತು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಇಂದು ಸಂಜೆ ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ತಂಗಲಿರುವ ಅವರು, ರವಿವಾರ ನಗರದ ವಿವಿಧ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ ವಿಮಾನದ ಮೂಲಕ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ವಿಶ್ವಸುಂದರಿಯನ್ನು ನೋಡಲು ನೂರಾರು ಜನ ಕುತೂಹಲಿಗಳಾಗಿ ಕಾಯುತ್ತಿದ್ದುದು ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.