ಎಡ-ಬಲವೆಂದು ಕಚ್ಚಾಡಬೇಡಿ


Team Udayavani, Apr 8, 2017, 3:29 PM IST

gul2.jpg

ಕಲಬುರಗಿ: ಶೋಷಿತರ ಮನಸ್ಸುಗಳಲ್ಲಿ ಮಡುಗಟ್ಟಿರುವ ಜಾತಿ ವ್ಯವಸ್ಥೆ ನಿರ್ಮೂಲನೆಗೆ ನಾವು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶೋಷಿತರ ಮಧ್ಯೆ ಇನ್ನಷ್ಟು ಕಂದಕ ಬೆಳೆಯುತ್ತದೆ. ಆದ್ದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ಉಪ ನಾಯಕ ಕೆ.ಬಿ. ಶಾಣಪ್ಪ ಹೇಳಿದರು. 

ಗುವಿವಿಯಲ್ಲಿ ಶುಕ್ರವಾರ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ ಅಧ್ಯಯನ ಸಂಶೋಧನಾ ಹಾಗೂ ವಿಸ್ತರಣಾ ಸಂಸ್ಥೆ ಜಂಟಿಯಾಗಿ ಹಮ್ಮಿಕೊಂಡಿದ್ದ ಹಸಿರುಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ ಅವರ 110ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಶೋಷಿತ ಸಮುದಾಯದವರು ಎಡ, ಬಲ ಎಂದು ಕಚ್ಚಾಡುವುದನ್ನು ಬಿಡಬೇಕು. ಎಲ್ಲರೂ ಒಂದಾಗಿ ಒಟ್ಟಾಗಿರಬೇಕು. ಹುಟ್ಟು, ಸಾವು ಪ್ರತಿಯೊಬ್ಬರ ಜೀವನದಲ್ಲಿ ಇರುವಂತದ್ದೆ. ಆ ಹುಟ್ಟು ಸಾವಿನ ನಡುವೆ ಏನಾದರೂ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಸ್ವತಂತ್ರ ಭಾರತದಲ್ಲಿ ಜಾತಿ ವ್ಯವಸ್ಥೆ ಇರುವುದಾದಲ್ಲಿ ಅಂತಹ ಸ್ವಾತಂತ್ರ್ಯ ನನಗೆ ಬೇಡ ಎಂದು ಡಾ| ಬಾಬಾಸಾಹೇಬ ಅಂಬೇಡ್ಕರ್‌ ಹೇಳಿದ್ದನ್ನು ಉಲ್ಲೇಖೀಸಿದ ಅವರು, ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮೂಲಕ ನಿಜವಾದ ಸ್ವಾತಂತ್ರ್ಯವನ್ನು ದೇಶದಲ್ಲಿ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಜಾತಿ ವ್ಯವಸ್ಥೆ ನಿರ್ಮೂಲನೆಗಾಗಿ 12ನೇ ಶತಮಾನದಲ್ಲಿ ಅಣ್ಣ ಬಸವಣ್ಣ ಸೇರಿದಂತೆ ಅನೇಕ ಶರಣರು ಸಾಮಾಜಿಕ ಕ್ರಾಂತಿ ಮಾಡಿದರು. ಅದಕ್ಕೆ ಅನುಭವ ಮಂಟಪವು ಬುನಾದಿಯಾಗಿತ್ತು. ಮಾಳಿಗೆ ಮಾರಯ್ಯ, ಉರಿಲಿಂಗ ಪೆದ್ದಿ ಮುಂತಾದ ಶರಣರು ದೇಶದ ಬೇರೆ, ಬೇರೆ ರಾಜ್ಯಗಳಿಂದ ಅನುಭವ ಮಂಟಪಕ್ಕೆ ಬಂದರು.

ಮಾಳಿಗೆ ಮಾರಯ್ಯ ಕಾಶ್ಮೀರದಿಂದ, ಉರಿಲಿಂಗ ಪೆದ್ದಿ ಮಹಾರಾಷ್ಟ್ರದಿಂದ ಬಸವಕಲ್ಯಾಣದ ಅನುಭವ ಮಂಟಪಕ್ಕೆ ಬಂದರು ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಶೋಧನೆ ಕೈಗೊಂಡು, 12ನೇ ಶತಮಾನದ ಸಮಗ್ರ ಇತಿಹಾಸ  ದಾಖಲಿಸಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಅಧ್ಯಯನ ಪೀಠವು ಸಂಶೋಧನೆ ಕೈಗೊಳ್ಳಬೇಕೆಂದು ಹೇಳಿದರು. 

ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ| ಜಿ.ಬಿ. ನಂದನ್‌ ಅವರು ಡಾ| ಬಾಬು ಜಗಜೀವನರಾಮ್‌ ಅವರ ಜೀವನ ಮತ್ತು ಧ್ಯೇಯ, ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವರಾದ ಪ್ರೊ| ದಯಾನಂದ ಅಗಸರ್‌, ಡಾ| ಸಿ.ಎಸ್‌. ಪಾಟೀಲ, ಸಿಂಡಿಕೇಟ್‌ ಸದಸ್ಯ ಈಶ್ವರ ಇಂಗನ್‌, ವಿದ್ಯಾ ವಿಷಯಕ ಪರಿಷತ್‌ ಸದಸ್ಯೆ ಶೋಭಾ ಪಾಟೀಲ, ವಿತ್ತಾಧಿಕಾರಿ ಪ್ರೊ| ರಾಜನಾಳಕರ್‌ ಹಾಜರಿದ್ದರು. 

ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ನಿರ್ದೇಶಕ ಡಾ| ದೇವಿದಾಸ ಮಾಲೆ ಸ್ವಾಗತಿಸಿದರು. ಡಾ| ಕಟ್ಟಿಮನಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳು, ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.