ವಾಡಿ ಪುರಸಭೆ: ಶೇ.56 ಮತದಾನ


Team Udayavani, Apr 8, 2017, 3:40 PM IST

gul5.jpg

ವಾಡಿ: ಪಟ್ಟಣದ ಪುರಸಭೆ ಮೂರನೇ ಅವಧಿ ಚುನಾವಣೆ ಶುಕ್ರವಾರ ಪೊಲೀಸ್‌ ಬಿಗಿಭದ್ರತೆ ಮಧ್ಯೆ ಶಾಂತಿಯುತವಾಗಿ ನಡೆಯಿತು. ಮತದಾರರು ವಿದ್ಯುನ್ಮಾನದ ಮತಯಂತ್ರಗಳ ಗುಂಡಿ ಒತ್ತುವ ಮೂಲಕ ಕಣದಲ್ಲಿದ್ದ ಒಟ್ಟು 72 ಅಭ್ಯರ್ಥಿಗಳ ಹಣೆಬರಹ ಬರೆದರು. 

ಪುರಸಭೆ ವ್ಯಾಪ್ತಿಯ ಒಟ್ಟು 34040 ಜನ ಮತದಾರರಲ್ಲಿ 18898 ಜನ ಮತ ಚಲಾಯಿಸಿದ್ದು, ಶೇ.56.3 ಮತದಾನವಾಗಿದೆ ಎಂದು ಚುನಾವಣಾಧಿಧಿಕಾರಿ ಮಲ್ಲೇಶ ತಂಗಾ ತಿಳಿಸಿದ್ದಾರೆ. ಪಟ್ಟಣದ ಒಟ್ಟು 23 ವಾರ್ಡ್‌ಗಳಲ್ಲಿ ಸ್ಥಾಪಿಸಲಾಗಿದ್ದ ಹಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯಿಂದಲೇ ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಿದರು.

ಮಧ್ಯಾಹ್ನದ ಉರಿಬಿಸಿಲು ಲೆಕ್ಕಿಸದೆ ತಾಂಡಾಗಳಲ್ಲಿ ಲಂಬಾಣಿ ಜನರು ಮತಗಟ್ಟೆಗಳತ್ತ ಬರುತ್ತಿದ್ದ ದೃಶ್ಯಗಳು ಕಂಡುಬಂದವು. ರೆಸ್ಟ್‌ಕ್ಯಾಂಪ್‌ ತಾಂಡಾದ ಎಂಪಿಎಸ್‌ ಶಾಲೆಯಲ್ಲಿನ ನಾಲ್ಕು ಮತಗಟ್ಟೆಗಳಿಗೆ ಪ್ರವೇಶಿಸಲು ಇಳಿಜಾರಿನ ರಸ್ತೆಯಲ್ಲಿ ನಡೆಯಲಾಗದೆ ವೃದ್ಧರು, ಅಂಗವಿಕಲರು ತೀವ್ರ ತೊಂದರೆ ಅನುಭವಿಸಿದರು.

ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಪೊಲೀಸ್‌ ಸಿಬ್ಬಂದಿ ವಯೋವೃದ್ಧರಿಗೆ ಆಸರೆಯಾದರು. ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಮಾಜಿ ಶಾಸಕ ಬಿಜೆಪಿಯ ವಾಲ್ಮೀಕಿ ನಾಯಕ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಚುನಾವಣೆ ಪ್ರಕ್ರಿಯೆ ಅರಿತುಕೊಂಡರು. 

ವ್ಯಾಪಕ ಭದ್ರತೆ: ಪಟ್ಟಣ ವ್ಯಾಪ್ತಿಯ 23 ವಾರ್ಡ್‌ಗಳ ಮತದಾರರ ಅನುಕೂಲಕ್ಕಾಗಿ ಸ್ತಾಪಿಸಲಾಗಿದ್ದ 33 ಮತದಾನ ಕೇಂದ್ರಗಳಿಗೆ ವ್ಯಾಪಕ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. 

ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗಳ್ಳಿ, ಚುನಾವಣಾಧಿಕಾರಿ ತಹಶೀಲ್ದಾರ ಮಲ್ಲೇಶ ತಂಗಾ, ಮಲ್ಲಣ್ಣ ದೇಸಾಯಿ, ಲಕ್ಷಣ ಶೃಂಗೇರಿ, ಶಿವಶರಣಪ್ಪ ಬನ್ನಿಕಟ್ಟಿ ಹಾಗೂ ಡಿವೈಎಸ್‌ಪಿ ಮಹೇಶ ಮೇಘಣ್ಣವರ್‌, ಸಿಪಿಐ ಶಂಕರಗೌಡ ಪಾಟೀಲ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಪೂರ್ಣಗೊಳಿಸುವಲ್ಲಿ ಯಶಸ್ವಿಯಾದರು. 

ಪ್ರತಿಭಟನೆ: ವಾರ್ಡ್‌ 23ರ ವಿಜಯನಗರ ಮತಗಟ್ಟೆ ಕೇಂದ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಬೋಗಸ್‌ ಮತದಾನ ನಡೆದಿದೆ ಎಂದು ಆರೋಪಿಸಿ ಜೆಡಿಎಸ್‌ ಅಭ್ಯರ್ಥಿ ಹಾಜಪ್ಪ ಲಾಡ್ಲಾಪುರ, ಬಿಜೆಪಿ ಅಭ್ಯರ್ಥಿ ರವಿಕುಮಾರ ಕಾಳಗಿ, ಪಕ್ಷೇತರ ಅಭ್ಯರ್ಥಿ ಬಾಲರಾಜ ಬಳಿಚಕ್ರ, ಸಾಬಣ್ಣ ಈರಣ್ಣ ಸೇರಿದಂತೆ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಮಾಜಿ ಪುರಸಭೆ ಸದಸ್ಯ ಕಾಂಗ್ರೆಸ್‌ನ ಚಾಂದ್‌ಮಿಯ್ನಾ ಎನ್ನುವರು ಎರಡು ಮತದಾನ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತ ಚೆಲಾಯಿಸಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.