ಸಿಡಿಲಬ್ಬರದ ಮಳೆಗೆ ಮತ್ತೆ ಮೂವರು ಬಲಿ
Team Udayavani, Apr 10, 2017, 10:11 AM IST
ಬೆಂಗಳೂರು: ಬಳ್ಳಾರಿ, ಹುಣಸೂರು, ಕಾಪು ಸೇರಿದಂತೆ ರಾಜ್ಯದ ಕೆಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕಿನ ಸೀತೂರಿನಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಸುಬ್ರಹ್ಮಣ್ಯ (10) ಎಂಬ ಬಾಲಕ ಮೃತಪಟ್ಟಿದ್ದಾನೆ. ಮನೆಯ ಕಿಟಕಿ ಪಕ್ಕದಲ್ಲಿ ಈತ ಮಲಗಿದ್ದ. 11.30ರ ಸುಮಾರಿಗೆ ಸಿಡಿಲಿನ ಶಬ್ಧ ಕೇಳಿದ್ದು, ತಕ್ಷಣ ಬಾಲಕ ಚೀರಿಕೊಂಡ. ಪಾಲಕರು ಬಂದು ನೋಡಿದಾಗ ಬಾಲಕ ತೀವ್ರ ಅಸ್ವಸ್ಥನಾಗಿದ್ದ. ತಕ್ಷಣವೇ ಆತನನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ. ಇದೇ ವೇಳೆ, ಸಿಡಿಲು ಬಡಿದು ಬಾಲಕನ ತಾಯಿ ಸುಮಾ ಹಾಗೂ ಈತನ ಸಹೋದರಿ ಪ್ರಾರ್ಥನಾರಿಗೆ ಕೈ ಹಾಗೂ ಕುತ್ತಿಗೆ ಭಾಗದಲ್ಲಿ ಉರಿ ಕಾಣಿಸಿಕೊಂಡಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಶನಿವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಮನೆ ಮೇಲಿನ ಸಿಮೆಂಟ್ ಶೀಟ್ಗಳು ಹಾರಿ ಬಿದ್ದು ಮನೆಯೊಳಗೆ ಮಲಗಿದ್ದ ಸಣ್ಣ ಮಾರೆಪ್ಪ (65)ಎಂಬುವರು ಮೃತಪಟ್ಟಿದ್ದಾರೆ. ಇದೇ ಪ್ರದೇಶದ ರಾಜಮ್ಮ (25) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ನಗರದ ಬಹುತೇಕ ವಾರ್ಡ್ಗಳಲ್ಲಿ ಬೃಹತ್ ಮರ-ಗಿಡಗಳೆಲ್ಲ ಧರೆಗುರುಳಿದ್ದು, ನೂರಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ರಾತ್ರಿಯೆಲ್ಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಮನೆ ಹೊರಗಡೆ ನಿಲ್ಲಿಸಲಾಗಿದ್ದ ಕಾರು, ದ್ವಿಚಕ್ರ ವಾಹನಗಳ ಮೇಲೆ ಮರ-ಗಿಡಗಳು ಉರುಳಿ ಜಖಂಗೊಂಡಿವೆ. ಹಂಪಿಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾದ ಬಾಳೆ, ಮಾವಿನ ಫಸಲು ನಾಶಗೊಂಡಿದೆ.
ಕರಾವಳಿಯಲ್ಲೂ ಮಳೆಯಾಗಿದ್ದು, ಉಡುಪಿ ಜಿಲ್ಲೆ ಕಾಪುವಿನಲ್ಲಿ ತೆಂಗಿನ ಮರಗಳು ಮನೆಗಳ ಮೇಲೆ ಉರುಳಿ ಬಿದ್ದು, ಸುಮಾರು 6 ಲಕ್ಷ ರೂ. ಸೊತ್ತು ನಷ್ಟ ಸಂಭವಿಸಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸಮೀಪ ಸತತ ಎರಡು ಗಂಟೆಗಳ ಕಾಲ ಮಳೆ ಸುರಿದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.