ಕರಗ ಕಣ್ತುಂಬಿಕೊಳ್ಳಲು ರಾಜಧಾನಿ ಕಾತರ
Team Udayavani, Apr 10, 2017, 11:44 AM IST
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಾನುವಾರ ರಾತ್ರಿ ಹಸಿ ಕರಗ ನೆರವೇರಿಸಲಾಯಿತು. ಹೂವಿನ ಕರಗಕ್ಕೆ ಮಂಗಳವಾರ (ಏ.11) ಮಧ್ಯರಾತ್ರಿ 12 ಗಂಟೆಗೆ ಚಾಲನೆ ದೊರೆಯಲಿದೆ.
ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ಕೈಗೊಂಡಿರುವ ಅರ್ಚಕ ಜ್ಞಾನೇಂದ್ರ ಅವರು ಕಬ್ಬನ್ ಉದ್ಯಾನದಲ್ಲಿರುವ ಕರಗದ ಕುಂಟೆಯಲ್ಲಿ ಪೂಜೆ ಸಲ್ಲಿಸಿದ ನಂತರ ರಾತ್ರಿ ಹಸಿಕರಗ ಉತ್ಸವ ನೆರವೇರಿಸಿದರು.
ಮಂಗಳವಾರ ಮಧ್ಯರಾತ್ರಿ ಪ್ರತಿಷ್ಠಿತ ಹೂವಿನ ಕರಗ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಜನರು ಕರಗ ಮಹೋತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕರಗದ ಹಿನ್ನೆಲೆಯಲ್ಲಿ ತಿಗಳರಪೇಟೆ, ಅಕ್ಕಿಪೇಟೆ, ಬಳೆಪೇಟೆ, ಚಿಕ್ಕಪೇಟೆ, ಸುಲ್ತಾನ್ಪೇಟೆ ಮತ್ತಿತರ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಎಲ್ಲ ಭಾಗದಲ್ಲಿರುವ ದೇವಾಲಯಗಳು ಮತ್ತು ದರ್ಗಾಗಳಲ್ಲೂ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.
ಪ್ರತಿ ವರ್ಷ ನಗರದ ಹೃದಯ ಭಾಗದಲ್ಲಿ ಆಚರಿಸುತ್ತಾ ಬಂದಿರುವ ಕರಗ ಉತ್ಸವ, ಕರ್ನಾಟಕದ ದಕ್ಷಿಣ ಭಾಗದ ತಿಗಳ (ವಹಿ° ಕುಲ) ಸಮುದಾಯದ ಪಾರಂಪರಿಕ ಆಚರಣೆ. ಕುರುಕ್ಷೇತ್ರ ಯುದ್ಧದ ನಂತರ ತಿಮಿರ ಎಂಬ ರಾಕ್ಷಸನ ಉಪಟಳ ಅಂತ್ಯಗೊಳಿಸಲು ದ್ರೌಪದಿಯು ಆದಿಶಕ್ತಿ ಸ್ವರೂಪ ತಳೆದು ತಲೆಯ ಮೇಲೆ ಕಳಸ ಧರಿಸಿ, ತಿಮಿರನನ್ನು ಸಂಹರಿಸಿದ ಸಂಕೇತವೇ ಕರಗ ಎನ್ನುತ್ತದೆ ಪುರಾಣ.
ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಲ್ಲಿ ಧರ್ಮರಾಯ ದೇವಸ್ಥಾನದಿಂದ ಹೊರಡುವ ಹೂವಿನ ಕರಗಕ್ಕೆ ಮಂಗಳವಾರ (ಏ.11) ಮಧ್ಯರಾತ್ರಿ 12ಕ್ಕೆ ಚಾಲನೆ ದೊರೆಯಲಿದೆ. ಅಂದು ಮುಂಜಾನೆಯಿಂದಲೇ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಲಿವೆ.
ಅಂದು ಬೆಳಗ್ಗೆ 10.30ಕ್ಕೆ ಕರಗ ಹೊರುವ ಪೂಜಾರಿ ಅರಿಶಿನ ಬಣ್ಣದ ಸೀರೆ ಉಟ್ಟು, ಬಳೆ ತೊಟ್ಟು ಕಬ್ಬನ್ ಪಾರ್ಕ್ನ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಗಂಗಾ ಪೂಜೆ ಸಲ್ಲಿಸಲಿದ್ದಾರೆ. ಅಲ್ಲಿಂದ ಹಸಿಕರಗವನ್ನು ಮಂಟಪಕ್ಕೆ ತಂದು, ವಿಶೇಷ ಪೂಜೆ ನೆರವೇರಿಸಿ ದೇವಾಲಯಕ್ಕೆ ಕರೆತರಲಾಗುವುದು. ರಾತ್ರಿ ಹೂವಿನ ಕರಗೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.