ಬದುಕಿನಾಚೆಗೆ ಇರುವುದ ತೋರಿಸುವ ಶಕ್ತಿ ಸಂಗೀತಕ್ಕಿದೆ
Team Udayavani, Apr 10, 2017, 12:56 PM IST
ದಾವಣಗೆರೆ: ಬದುಕಿನ ಆಚೆಗೂ ಇರುವಂತಹದ್ದನ್ನು ತೋರಿಸಿಕೊಡುವಂತಹ ದಿವ್ಯ ಶಕ್ತಿ ಸಂಗೀತಕ್ಕೆ ಇದೆ ಎಂದು ಲೇಖಕ ಚಂದ್ರಶೇಖರ ತಾಳ್ಯ ತಿಳಿಸಿದರು. ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಮ್ಮಿಕೊಂಡಿದ್ದ ಗೀತ ಗಾಯನ ತರಬೇತಿ ಶಿಬಿರ ನಿನಾದ-5 ಸಮಾರೋಪದಲ್ಲಿ ಮಾತನಾಡಿದರು.
ಸಾಹಿತ್ಯಕ್ಕಿಂತಲೂ ಸಂಗೀತ ಅಪರೂಪದ ಮಾಧ್ಯಮ. ಸತತ ಅಭ್ಯಾಸ, ಸಾಧನೆಯ ಮೂಲಕ ಸಂಗೀತ ಕಲಿಯಬೇಕು ಎಂದರು. ಸಂಗೀತದ ಪ್ರಾರಂಭವಾಗಿದ್ದು ಯಾವಾಗ ಎಂಬುದಕ್ಕೆ ಯಾವುದೇ ರೀತಿಯ ಸಾಕ್ಷಿ, ದಾಖಲೆ ಇಲ್ಲ. ಪ್ರಾಚೀನ ಧ್ವನಿಯನ್ನು ಕೇಳಿಸುವಂತದ್ದು ಅಸಾಧ್ಯ. ಹಾಗಾಗಿ ಸಂಗೀತ ಅನಾದಿ ಕಾಲದಿಂದಲೂ ಪ್ರಚಲಿತದಲ್ಲಿ ಇದೆ ಎಂಬುದನ್ನು ಒಪ್ಪಬೇಕಾಗುತ್ತದೆ.
ಎಂತಹ ಕಲ್ಲು ಹೃದಯದವರನ್ನೂ ತಲೆದೂಗಿಸುವಂತಹ ದಿವ್ಯ ಶಕ್ತಿ ಸಂಗೀತ ಹೊಂದಿದೆ ಎಂದು ತಿಳಿಸಿದರು. ಸಂಗೀತ ಎಂಬುದು ಜಾತಿ, ಧರ್ಮ, ಗಡಿ ಎಲ್ಲವನ್ನೂ ಮೀರಿದ್ದು. ಸಂಗೀತಕ್ಕೆ ಯಾವುದೇ ಜಾತಿ, ಧರ್ಮ, ಗಡಿಯ ಮಿತಿ ಇಲ್ಲ ಎನ್ನುವುದಕ್ಕೆ ಗಂಗೂಬಾಯಿ ಹಾನಗಲ್, ಭೀಮಸೇನ್ ಜೋಷಿ, ಕುಮಾರ ಗಂಧರ್ವ ಅನೇಕರು ಕಾಣ ಸಿಗುತ್ತಾರೆ ಎಂದು ತಿಳಿಸಿದರು.
ಸಂಗೀತ ಕ್ಷೇತ್ರದಲ್ಲಿ ಅತ್ಯಂತ ಅಪರೂಪವಾಗಿರುವುದು ಗುರು-ಪರಂಪರೆ ಸಂಸ್ಕೃತಿ. ಒಬ್ಬ ಗುರುವಿನ ಬಳಿ ಸಂಗೀತ ಕಲಿತವರು ಮುಂದೆ ಎಷ್ಟೇ ಉನ್ನತ ಸ್ಥಾನದಲ್ಲೇ ಇರಲಿ ಗುರುವಿಗೆ ತಲೆಬಾಗಿ, ಕಾಲು ಮುಟ್ಟಿ ನಮಸ್ಕರಿಸುವುದನ್ನು ಬೇರೆ ಎಲ್ಲಿಯೂ ಕಾಣ ಸಿಗುವುದೇ ಇಲ್ಲ. ಸಾಹಿತ್ಯದಲ್ಲಿ ಅಂತದ್ದನ್ನು ಕಂಡು ಬರುವುದು ಅಪರೂಪ ಎಂದು ತಿಳಿಸಿದರು.
ಸಂಗೀತದ ಮೂಲಕ ಶಿಸ್ತು ಅತೀ ಮುಖ್ಯ. ಸಂಗೀತ ಅಸ್ತವ್ಯಸ್ತ ಧ್ವನಿಯನ್ನು ಹಿಡಿತಕ್ಕೆ ಒಳಪಡಿಸುವ ಬಹು ದೊಡ್ಡ ಮಾಧ್ಯಮ. ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಅತಿ ಪ್ರಮುಖ ಪ್ರಾಕಾರಗಳು. ಮಕ್ಕಳಿಗೆ ಸಂಗೀತ ಕಲಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ರಿಯಾಲಿಟಿ ಶೋಗೆ ಮಾತ್ರವೇ ಸಂಗೀತ ಕಲಿಸಲಿಕ್ಕೆ ಹೋಗಬೇಡಿ. ಮಕ್ಕಳು ತಾವಾಗಿಯೇ ಹೋದಲ್ಲಿ ಪ್ರೋತ್ಸಾಹ ಕೊಡಿ. ಆದರೆ, ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಮನವಿ ಮಾಡಿದರು. ಕ
ನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಮಾತನಾಡಿ, ಸಂಗೀತಕ್ಕೆ ದಿವ್ಯ ಶಕ್ತಿ ಇದೆ. ಇಲಾಖೆಯಿಂದ ಹಲವಾರು ತರಬೇತಿ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಚ್.ಎಸ್. ಮಂಜುನಾಥ್ಕುರ್ಕಿ ಅಧ್ಯಕ್ಷತೆ ವಹಿಸಿದ್ದರು. ಸುಶ್ರಾವ್ಯ ಸಂಗೀತ ವಿದ್ಯಾಲಯದ ಯಶಾ ದಿನೇಶ್ ಇತರರು ಇದ್ದರು. ರಂಜನಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.