ಗರಿಗಳ ರವಿವಾರ ಆಚರಣೆ, ಕ್ರೈಸ್ತರ ಪವಿತ್ರ ಸಪ್ತಾಹ ಆರಂಭ


Team Udayavani, Apr 10, 2017, 3:06 PM IST

gari.jpg

ಮಂಗಳೂರು/ಉಡುಪಿ: ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ಸಂಭ್ರಮದಿಂದ ಸ್ವಾಗತಿಸಿದ ಘಟನೆಯನ್ನು ಸ್ಮರಿಸಿ ಕ್ರೈಸ್ತರು ಎ. 9ರಂದು ಗರಿಗಳ ರವಿವಾರ ಆಚರಿಸಿದರು.

ಮಂಗಳೂರಿನಲ್ಲಿ ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ತೊಟ್ಟಂ ಸಂತ ಅನ್ನಮ್ಮ ಮಾತೆ ಚರ್ಚ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು.

ಮಂಗಳೂರಿನಲ್ಲಿ ಕೆಥೆಡ್ರಲ್‌ನ ಧರ್ಮಗುರು ಫಾ| ಜೆ.ಬಿ. ಕ್ರಾಸ್ತಾ, ತೊಟ್ಟಂನಲ್ಲಿ ಧರ್ಮಗುರು ಫಾ| ಫ್ರಾನ್ಸಿಸ್‌ ಕರ್ನೆಲಿಯೊ, ಇತರ ಗುರುಗಳು ಉಪಸ್ಥಿತರಿದ್ದರು. ಎಲ್ಲ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಆಚರಣೆ ಹೀಗೆ ನಡೆಯಿತು
ಬಲಿ ಪೂಜೆಗೆ ಮೊದಲು ತೆಂಗಿನ ಗರಿಗಳನ್ನು ಚರ್ಚ್‌ ಆವರಣದಲ್ಲಿ ಧರ್ಮಗುರುಗಳು ಆಶೀರ್ವಚಿಸಿದರು. ಬಳಿಕ ಅವುಗಳನ್ನು ಭಾಗವಹಿಸಿದ್ದ ಎಲ್ಲ ಕ್ರೈಸ್ತರಿಗೆ ವಿತರಿಸಲಾಯಿತು. ಅವುಗಳನ್ನು ಹಿಡಿದು ಕ್ರೈಸ್ತರು ಯೇಸು ಕ್ರಿಸ್ತರಿಗೆ ಜೈಕಾರ ಹಾಕುತ್ತಾ ಮೆರವಣಿಗೆಯಲ್ಲಿ ಚರ್ಚ್‌ ಒಳಗೆ ಪ್ರವೇಶಿಸಿದರು. ಅಲ್ಲಿ ಬಲಿ ಪೂಜೆ ನಡೆಯಿತು.

ಯೇಸು ಕ್ರಿಸ್ತರಿಗೆ ಶಿಲುಬೆಯ ಶಿಕ್ಷೆ ವಿಧಿಸುವಲ್ಲಿಂದ ಹಿಡಿದು ಅವರು ಶಿಲುಬೆಗೇರಿ ಮರಣ ಹೊಂದಿ, ದೇಹವನ್ನು ಸಮಾಧಿ ಮಾಡುವ ವರೆಗಿನ ಕಥಾನಕವನ್ನು ಬೈಬಲ್‌ನಿಂದ ವಾಚಿಸಲಾಯಿತು. ಧರ್ಮಗುರು ಪ್ರವಚನ ನೀಡಿದರು.

ಹಿನ್ನೆಲೆ: ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್‌’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಗರಿಗಳ ರವಿವಾರ ಆಚರಿಸಲಾಗುತ್ತದೆ. ಪ್ರಸ್ತುತ ಇಲ್ಲಿ ಒಲಿವ್‌ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ.

ಕಾಸರಗೋಡು: ಮಂಗಳೂರು ಧರ್ಮಪ್ರಾಂತಕ್ಕೆ ಒಳಪಟ್ಟ ಕಾಸರಗೋಡು ವಲಯದ ಎಲ್ಲ ಚರ್ಚ್‌ ಹಾಗೂ ಜಿಲ್ಲೆಯ ಇತರ ಚರ್ಚ್‌ಗಳಲ್ಲಿ ಗರಿಗಳ ರವಿವಾರ ವಿಶೇಷ ಪ್ರಾರ್ಥನೆ, ಬಲಿಪೂಜೆಯೊಂದಿಗೆ ನಡೆಯಿತು. ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಬಲಿ ಪೂಜೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.