ಅಂಗನವಾಡಿ ಕಾರ್ಯಕರ್ತೆಯರಿಂದ ಸಮಾಜ ತಿದ್ದುವ ಕೆಲಸ: ಶಾಸಕಿ


Team Udayavani, Apr 10, 2017, 3:29 PM IST

0904rjh4.jpg

ನಗರ : ಮಕ್ಕಳ ಎರಡನೇ ತಾಯಿ ಎಂಬ ಗೌರವವನ್ನು ಹೊಂದಿರುವ, ಸಮಾಜವನ್ನು ತಿದ್ದುವ ಕೆಲಸ ಮಾಡುವ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರು ಸಮಯಪ್ರಜ್ಞೆ, ಸ್ವತ್ಛತೆ, ಸಮಾಜಮುಖೀ ಚಿಂತನೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದು ಸಂಸದೀಯ ಕಾರ್ಯದರ್ಶಿ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾ ಯಕಿಯರ ಸಂಘ ಪುತ್ತೂರು ಇದರ ವತಿಯಿಂದ ಪುರಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ, ನಿವೃತ್ತರಿಗೆ ಸಮ್ಮಾನ, ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಮಕ್ಕಳನ್ನು ತಿದ್ದಿ ತೀಡುವವಳು ತಾಯಿ.ಮಹಾಭಾರತದಲ್ಲಿ ಶ್ರೀಕೃಷ್ಣನಿಗೆ ಯಶೋದಾ ತುಂಬಿದ ಸ್ಥಾನವನ್ನು ಇಂದು ಅಂಗನಧಿವಾಡಿ ಕಾರ್ಯಕರ್ತರು ನಿಭಾಯಿಸುತ್ತಿದ್ದಾರೆ. ಸಮಾಜದಲ್ಲಿ ನಾಯಕತ್ವ ಬೆಳೆ ಸುವ ಜವಾಧಿಬ್ದಾರಿ ನಿಭಾಧಿಯಿಸುವ ಜತೆಗೆ ಸಮಾಜಕ್ಕೆ ತಾಯಿಯಾಗಬೇಕು, ಮಹಿಳಾ ಶಕ್ತಿಯ ಧ್ವನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ನಿಷ್ಪತ್ತಿ ಪಾಲಿಸುತ್ತಿಲ್ಲ
ಅಂಗನವಾಡಿ ವ್ಯವಸ್ಥೆ ಆರಂಭವಾದ ಸಂದರ್ಭ ಕಾರ್ಯಕರ್ತರಿಗೆ 100 ರೂ., ಸಹಾಯಕಿಯರಿಗೆ 50 ರೂ. ಮಾತ್ರ ಗೌರವ ಧನ ಸಿಗುತ್ತಿತ್ತು. ಆಗ ಕೇಂದ್ರ ಮತ್ತು ರಾಜ್ಯದ 90:10 ನಿಷ್ಪತ್ತಿಯ ವೇತನ ನೀಡಲಾಗುತ್ತಿತ್ತು. ಆ ಬಳಿಕ ಅದನ್ನು 60;40 ನಿಷ್ಪತ್ತಿಗೆ ಬದಲಾಯಿಸಲಾಯಿತು. ಆದರೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಹೇಳಿದ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಸರಕಾರ 5,200 ರೂ. ನೀಡುವಾಗ ಕೇಂದ್ರ ಕನಿಷ್ಠ 6,000 ರೂ. ಆದರೂ ವೇತನ ಕೊಡಬೇಕಿತ್ತು ಎಂದು ಅಭಿಪ್ರಾಯಿಸಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ಅವರು ಮಾತನಾಡಿ, ಸಮಾಜದಲ್ಲಿ ಗುರುತಿಸಿಕೊಳ್ಳುವ ಗೌರವ ಕಾರ್ಯಕರ್ತೆಯರು ನಾವು. ಭಾರತೀಯ ಸಂಸ್ಕೃತಿ ಯನ್ನು ಅಳವಡಿಸಿಕೊಳ್ಳುವ ಮೂಲಕ ಮಕ್ಕಳನ್ನು ಬೆಳೆಸಬೇಕು ಎಂದರು. ಅಂಗನವಾಡಿ ಕಾರ್ಯ ಕರ್ತರಿಗೇ ಇರುವ ಬ್ಯಾಂಕ್‌ ವ್ಯವಸ್ಥೆಯನ್ನು ಬಳಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತಿಗೊಳ್ಳುತ್ತಿರುವ ಕೋಡಿಂಬಾಡಿ ವಲಯದ ರಾಧಾ ಹಾಗೂ ಮುಕ್ರಂಪಾಡಿ ವಲಯದ ಶಿವಮ್ಮ ಅವರನ್ನು ಶಾಸಕರು ಸಮ್ಮಾನಿಸಿದರು. ತಾಲೂಕು ಸಂಘದ ಉಪಾಧ್ಯಕ್ಷೆ ಶೋಭಾ, ಕಾರ್ಯದರ್ಶಿ ಜಯಲತಾ, ಜತೆ ಕಾರ್ಯದರ್ಶಿ ರಾಜರಾಜೇಶ್ವರಿ, ಕೋಶಾಧಿಕಾರಿ ಪುಷ್ಪಾವತಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷೆ ಮೀನಾಕ್ಷಿ ಸ್ವಾಗತಿಸಿ, ಶ್ರೀಲತಾ ವಂದಿಸಿದರು. ಪ್ರಶಸ್ತಿ ಪುರಸ್ಕೃತ ಕಾರ್ಯಕರ್ತೆ ಅರುಣಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಮಹಾಸಭೆ
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಪುತ್ತೂರು ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಸಿಡಿಪಿಒ ಶಾಂತಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮ ನಡೆಧಿಯಿತು. ನಿವೃತ್ತಿ ಹೊಂದಿದ ಒಟ್ಟು 9 ಮಂದಿ ಕಾರ್ಯಕರ್ತೆಯವರು ಹಾಗೂ ಸಹಾಯಕಿಯನ್ನು ಗೌರವಿಸಲಾಯಿತು.

ಸಿಎಂಗೆ ಬೇಸರ
ರಾಜ್ಯ ಸರಕಾರ 3 ವರ್ಷಗಳಲ್ಲಿ 500 ರೂ. ನಂತೆ ಹಾಗೂ ಈ ವರ್ಷ 1,000 ರೂ. ನಂತೆ ಗೌರವ ಧನ ಏರಿಕೆ ಮಾಡಿದೆ. ಹೋರಾಟ ಪ್ರತಿಯೊಬ್ಬರ ಹಕ್ಕು. ಆದರೆ ರಾಜಕೀಯ ಮಿಶ್ರಿತ ಹೋರಾಟ ಸರಿಯಲ್ಲ. ಯಾರ ವಿರುದ್ಧ ಹೋರಾಟ ನಡೆಸ ಬೇಕಿತ್ತೋ ಅಲ್ಲಿ ನಡೆಸಬೇಕಿತ್ತು. ಅದರಲ್ಲೂ ಪ್ರತಿಭಟನೆಯಲ್ಲಿ ಎಷ್ಟು ಅಂಗನವಾಡಿ ಕಾರ್ಯಕರ್ತೆಯರಿದ್ದರು ಎಂಬುದೂ ಪ್ರಶ್ನಾರ್ಹ ? ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸು ತ್ತಿದ್ದರೂ ಪ್ರತಿಭಟನೆ ನಡೆಸಿರುವುದು ಮುಖ್ಯಮಂತ್ರಿಗಳಿಗೆ ಬೇಸರ ತರಿಸಿದೆ ಎಂದು ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯೂ ಆಗಿರುವ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಆದರೆ ದ.ಕ. ಜಿಲ್ಲೆಯಲ್ಲಿ ಇಂತಹ ರಾಜಕೀಯ ಪ್ರೇರಿತ ಸಂಘಟನೆ ಇರದಿರುವುದು ಖುಷಿಯ ವಿಚಾರ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.