ಕರಾವಳಿಯಿಂದ ಬೆಂಗಳೂರಿಗೆ ಮೂರು ರೈಲು


Team Udayavani, Apr 10, 2017, 4:15 PM IST

mangalore.jpg

ಮಂಗಳೂರು: ಕುಡ್ಲ ಎಕ್ಸ್‌ಪ್ರೆಸ್‌ ರೈಲು ಸೇವೆ ಪ್ರಾರಂಭದೊಂದಿಗೆ ಕರಾವಳಿ ಜನತೆಗೆ ಬೆಂಗಳೂರಿಗೆ ಸಂಚರಿಸಲು ಇದೀಗ ಒಟ್ಟು 3 ರೈಲುಗಳು ಲಭ್ಯವಾಗಿವೆ. ಕಾರವಾರ-ಮಂಗಳೂರು-ಯಶವಂತಪುರ ರಾತ್ರಿ ರೈಲು ಮಂಗಳೂರಿನಿಂದ ರಾತ್ರಿ 8.45ಕ್ಕೆ ಹೊರಟು ಮರುದಿನ ಬೆಳಗ್ಗೆ 8.25ಕ್ಕೆ ಬೆಂಗಳೂರು ತಲುಪುತ್ತದೆ. ಈ ರೈಲು ಮಂಗಳೂರು, ಸುಬ್ರಹ್ಯಣ – ಹಾಸನ- ಹೊಳೆನರಸಿಪುರ-ಮೈಸೂರು, ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದೆ. ಒಟ್ಟು 505 ಕಿ.ಮೀ. ದೂರವನ್ನು ಕ್ರಮಿಸಲು 11 ತಾಸು ಬೇಕಾಗುತ್ತದೆ.

ಇನ್ನೊಂದು ರೈಲು ಹಗಲುಹೊತ್ತು ವಾರದಲ್ಲಿ ಮೂರು ದಿನ ಮಂಗಳೂರು-ಯಶವಂತಪುರ ನಡುವೆ ಸಂಚರಿಸುತ್ತಿದೆ. ಈ ರೈಲು ಕಾರವಾರ-ಮಂಗಳೂರು- ಸುಬ್ರಹ್ಮಣ್ಯ- ಹಾಸನ- ಅರಸೀಕೆರೆ- ತುಮಕೂರು ಮಾರ್ಗವಾಗಿ ಯಶವಂತಪುರಕ್ಕೆ ಹೋಗುತ್ತಿದೆ. ಒಟ್ಟು 405 ಕಿ.ಮೀ. ದೂರವನ್ನು ಪ್ರಯಾಣಿಸಲು ಹತ್ತೂವರೆ ತಾಸು ಬೇಕಾಗುತ್ತದೆ. 

ಇದೀಗ ಆರಂಭಗೊಂಡಿರುವ ನೂತನ ರೈಲು ಮಂಗಳೂರು ಜಂಕ್ಷನ್‌ನಿಂದ ಹೊರಟು ಸುಬ್ರಹ್ಮಣ್ಯ -ಹಾಸನ-ಶ್ರವಣಬೆಳಗೂಳ- ಚೆನ್ನರಾಯಪಟ್ಟಣ- ಕುಣಿಗಲ್‌-ನೆಲಮಂಗಲ ಮಾರ್ಗವಾಗಿ ಯಶವಂತಕ್ಕೆ ಹೋಗಲಿದೆ. ಒಟ್ಟು 400 ಕಿ.ಮೀ. ದೂರ ಕ್ರಮಿಸಲು 9 ತಾಸುಗಳು ಬೇಕು. ಶ್ರವಣಬೆಳಗೊಳ ಮಾರ್ಗದ ಮೂಲಕ ಸಂಚರಿಸುವ ಬೆಂಗಳೂರು-ಮಂಗಳೂರು ಪ್ರಯಾಣದಲ್ಲಿ ಒಟ್ಟು 3 ತಾಸುಗಳು ಕಡಿತವಾಗಲಿದೆ.

ಕುಡ್ಲ ಎಕ್ಸ್‌ಪ್ರೆಸ್‌ ರೈಲು ವಾರಕ್ಕೆ ಮೂರು ಬಾರಿ ಮಂಗಳೂರು ಹಾಗೂ ಯಶವಂತಪುರದಿಂದ ಸಂಚರಿಸಲಿದೆ. ರೈಲು ನಂ. 16576 ಮಂಗಳೂರು ಜಂಕ್ಷನ್‌-ಯಶವಂತಪುರ ರೈಲು ಗಾಡಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದ್ದು ರಾತ್ರಿ 8.30ಕ್ಕೆ ಯಶವಂತ ಪುರ ತಲುಪಲಿದೆ. ಯಶವಂತಪುರದಿಂದ ರೈಲು ನಂ. 16575 ಪ್ರತಿ ರವಿವಾರ, ಮಂಗಳವಾರ ಹಾಗೂ ಗುರುವಾರ ಸಂಚರಿಸಲಿದೆ. ಯಶವಂತಪುರದಿಂದ ಬೆಳಗ್ಗೆ 7.50ಕ್ಕೆ ಹೊರಡಲಿದ್ದು ಸಂಜೆ 5.30ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಲಿದೆ. ಒಟ್ಟು 14 ಬೋಗಿಗಳನ್ನು ಒಳಗೊಂಡಿದೆ. ಇದರಲ್ಲಿ 4 ದ್ವಿತೀಯ ದರ್ಜೆ ಚೆಯರ್‌ ಕಾರ್‌, 8 ಜನರಲ್‌ ಸೆಕೆಂಡ್‌ ಕ್ಲಾಸ್‌ ಬೋಗಿಗಳು, 2 ಸೆಕೆಂಡ್‌ಕಾÉಸ್‌ ಲಗೇಜ್‌ -ಕಮ್‌-ಬ್ರೇಕ್‌ವ್ಯಾನ್‌ ಅಂಗವಿಕಲರ ಬೋಗಿಗಳು ಸೇರಿವೆ.

ಪ್ರಯಾಣದ ದರ
ಕುಡ್ಲ ಎಕ್ಸ್‌ಪ್ರೆಸ್‌ನಲ್ಲಿ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಪ್ರಯಾಣದರ ಒಟ್ಟು 130 ರೂ. ಆಗಿದೆ. ಬಂಟ್ವಾಳ-30 ರೂ. ಕಬಕ ಪುತ್ತೂರು-30 ರೂ., ಸುಬ್ರಹ್ಮಣ್ಯ ರೋಡ್‌- 45 ರೂ., ಸಕಲೇಶಪುರ-75 ರೂ., ಹಾಸನ- 85 ರೂ., ಚೆನ್ನರಾಯಪಟ್ಣ-95 ರೂ., ಶ್ರವಣಬೆಳಗೊಳ-95 ರೂ., ಬಿ.ಜಿ. ನಗರ-105 ರೂ., ಯಡಿಯೂರು-110 ರೂ., ಕುಣಿಗಲ್‌-115 ರೂ., ನೆಲಮಂಗಲ, ಚಿಕ್ಕಬಾಣಾವರ, ಯಶವಂತಪುರ-130 ರೂ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.