ಬೋರ್‌ಗಳಲ್ಲಿ ನೀರಿದೆ, ಆದರೆ…


Team Udayavani, Apr 11, 2017, 12:43 PM IST

borewell.jpg

ಬೆಂಗಳೂರು: ಕಾವೇರಿ ಕೊಳ್ಳದ ಜಲಾಶಯ ಗಳಲ್ಲಿ ಬೆಂಗಳೂರಿಗೆ ಸಾಕಾಗುಷ್ಟು ನೀರಿನ ಸಂಗ್ರಹವಿಲ್ಲ. ಹೀಗಾಗಿ ಸಾರ್ವಜನಿಕ ಕೊಳವೆಬಾವಿಗಳ ಮೂಲಕವಾದರೂ ನೀರು ಪೂರೈಸಿ ಸದ್ಯದ ವಿಷಮ ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶ ಹೊಂದಿದ್ದ ಜಲಮಂಡಳಿ ಮತ್ತು ಬಿಬಿಎಂಪಿಗೆ ಹೊಸ ತಲೆನೋವು ಕಾಣಿಸಿಕೊಂಡಿದೆ. 

ಹೌದು, ಬೆಂಗಳೂರಿನಾದ್ಯಂತ ಜಲ ಮಂಡಳಿ ಮತ್ತು ಬಿಬಿಎಂಪಿಯ ಒಟ್ಟಾರೆ 12,986 ಬೋರ್‌ವೆಲ್‌ಗ‌ಳು ಸುಸ್ಥಿತಿಯ ಲ್ಲಿದ್ದು ಈ ಪೈಕಿ 850ರಲ್ಲಿ ಮಾತ್ರ ಕುಡಿಯಲು ಯೋಗ್ಯವಾದ ನೀರು ಲಭ್ಯವಾಗುತ್ತಿದೆ. ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಮಂಡನೆ ಯಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ಈ ಅಂಶ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಕೊಳವೆಬಾವಿ ಅವಲಂಬಿತ ಪ್ರದೇಶಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಪರ್ಯಾಯ ಮಾರ್ಗಗಳನ್ನು ಹುಡುಕಬೇಕಾದ ಅನಿ ವಾರ್ಯತೆ ಎದುರಾಗಿದೆ. 

ಹೊರೆ ಹೇಗೆ?: ಸದ್ಯ 12,8986 ಈ ಕೊಳವೆ ಬಾವಿಗಳಿಂದ ನಗರದ 40ರಿಂದ 50 ಸಾವಿರ ಕುಟುಂಬಗಳಿಗೆ ನೀರು ಪೂರೈಕೆ ಆಗುತ್ತಿದ್ದು, ಅದರ ಪ್ರಮಾಣ ಸರಿಸುಮಾರು ನಿತ್ಯ 4ರಿಂದ 5 ಲಕ್ಷ ಲೀಟರ್‌. ಅಷ್ಟು ಪ್ರಮಾಣದ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದಾದರೆ, ಅಷ್ಟೇ ಪ್ರಮಾಣದ ಶುದ್ಧ ನೀರನ್ನು ಬೇರೆ ಮೂಲಗಳಿಂದ ಹೊಂದಿಸಿ ತರಬೇಕಾದ ಹೊರೆ ಜಲಮಂಡಳಿ ಮತ್ತು ಬಿಬಿಎಂಪಿ ಮೇಲೆ ಬಿದ್ದಂತಾಗಿದೆ.

ಒಂದೆಡೆ ನೀರಿನ ಲಭ್ಯತೆಯೇ ಕಡಿಮೆ ಇದೆ. ಮತ್ತೂಂದೆಡೆ ಇದ್ದ ನೀರು ಕುಡಿಯು ವಂತಿಲ್ಲ. ಇದರಿಂದ ಮತ್ತಷ್ಟು ಒತ್ತಡಕ್ಕೆ ಸಿಲುಕಿದಂತಾಗಿದೆ ಎಂದು ಜಲಮಂಡಳಿಯ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೊಳವೆಬಾವಿಗಳ ನೀರನ್ನು ಬಳಸದೆ ವಿಧಿ ಇಲ್ಲ. ಅದು ಕುಡಿ ಯಲು ಯೋಗ್ಯವಲ್ಲದ ಸ್ಥಿತಿಯಲ್ಲಿದೆ.

ಹೀಗಾಗಿ ಕುಡಿಯಲು ಹೊರತುಪಡಿಸಿ, ಇನ್ನಿತರ ಚಟುವಟಿಕೆಗಳಿಗೆ ಉಪಯೋಗಿಸ ಬಹುದಾಗಿದೆ. ಆದ್ದರಿಂದ ವಿಜಯನಗರ, ಚಾಮರಾಜಪೇಟೆ, ಕಾಮಾಕ್ಷಿಪಾಳ್ಯ ಸೇರಿ ದಂತೆ ನಾನಾ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ 200ಕ್ಕೂ ಹೆಚ್ಚು ಕೊಳವೆಬಾವಿಗಳ ಮುಂದೆ “ಕುಡಿಯಲು ಬಳಸಬಾರದು’ ಎಂದು ಫ‌ಲಕಗಳನ್ನು ಹಾಕಲಾಗಿದೆ. ಆದರೂ ಜನ ಈ ಫ‌ಲಕಗಳನ್ನು ತೆಗೆದುಹಾಕಿ, ಎಲ್ಲದಕ್ಕೂ ನೀರನ್ನು ಉಪಯೋಗಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಫ್ಲೋರೈಡ್‌ ಅಂಶ ನಾಶಕ್ಕೆ ಕೆಮಿಕಲ್‌: ಫ‌ಲಕಗಳ ಅಳವಡಿಕೆ ಜತೆಗೆ ಫ್ಲೋರೈಡ್‌ ಅಂಶ ಕಂಡುಬಂದ ಕೊಳವೆಬಾವಿಗಳಿಗೆ ಸೋಡಿಯಂ ಹೈಪೋಕ್ಲೋರೈಟ್‌ ಸೇರಿಸುವ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ 15ಕ್ಕೂ ಹೆಚ್ಚು ಕಡೆಗಳಲ್ಲಿ ಈ ಘಟಕಗಳನ್ನು ತೆರೆಯಲಾಗಿದೆ. ಈ ಅಂಶವನ್ನು ಸೇರ್ಪಡೆ ಮಾಡುವುದರಿಂದ ನೀರನ್ನು ಕುಡಿಯಲಿಕ್ಕೂ ಬಳಸಬಹುದಾಗಿದೆ. ಆದರೆ, ಸಿಬ್ಬಂದಿ ಕೊರತೆ ಇರುವುದರಿಂದ ಪ್ರತಿ ಬೋರ್‌ವೆಲ್‌ಗೆ ಇದು ಕಷ್ಟಸಾಧ್ಯ ಎಂದು ಜಲಮಂಡಳಿ ಮುಖ್ಯ ಎಂಜಿನಿಯರ್‌ (ಯೋಜನೆ) ಕೆ.ಆರ್‌. ಮಂಜುನಾಥ್‌ ತಿಳಿಸುತ್ತಾರೆ. 

ಸಾಮಾನ್ಯವಾಗಿ ಬಡವರು ವಾಸವಿರುವ ಪ್ರದೇಶಗಳಲ್ಲಿ ಈ ಕೊಳವೆಬಾವಿಗಳಿವೆ. ಅಲ್ಲೆಲ್ಲಾ ಒಂದು ದಿನ ಕಾವೇರಿ ಮತ್ತೂಂದು ದಿನ ಕೊಳವೆಬಾವಿ ನೀರು ಪೂರೈಸುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಲಾಗುತ್ತಿದೆ. ಅಲ್ಲದೆ, ಕೆಲವೆಡೆ ಶುದ್ಧಕುಡಿಯುವ ನೀರಿನ ಘಟಕಗಳಿರುವುದರಿಂದ ಇದು ಗಂಭೀರ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ. 

ಫ್ಲೋರೈಡ್‌ ಇದ್ದಲ್ಲಿ ಟ್ಯಾಂಕರ್‌ ನೀರು: ಅದೇ ರೀತಿ, ಪಾಲಿಕೆಗೆ ಸೇರ್ಪಡೆಗೊಂಡ 110 ಹಳ್ಳಿಗಳಿಗೆ ಕೊಳವೆಬಾವಿಗಳೊಂದೇ ನೀರಿನ ಮೂಲ. ಈ ಭಾಗಗಳಲ್ಲಿ ಗುರುತಿಸಲಾಗಿರುವ ಆಯ್ದ ಕೊಳವೆ ಬಾವಿಗಳಿಂದ ಕುಡಿಯುವ ಉದ್ದೇಶಕ್ಕೆ ನೀರು ಪೂರೈಕೆ ಮಾಡುತ್ತಿಲ್ಲ. ಗುಣಮಟ್ಟ  ಖಾತ್ರಿಪಡಿಸಿಕೊಂಡ ನಂತರವೇ ಜನರಿಗೆ ಒದಗಿಸಲಾಗುತ್ತಿದೆ. ಒಂದು ವೇಳೆ ಫ್ಲೋರೈಡ್‌ಯುಕ್ತ ನೀರು ಎಂಬುದು ಕಂಡುಬಂದರೆ, ತಕ್ಷಣ ಸ್ಥಗಿತಗೊಳಿಸಬೇಕು. ಅಂತಹ ಕಡೆ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲು ಸೂಚಿಸಲಾಗಿದೆ.

ಸದ್ಯಕ್ಕಂತೂ ಹೊರೆಯಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಸಮಜಾಯಿಷಿ ನೀಡುತ್ತಾರೆ. ಈ ಮಧ್ಯೆ ಪಾಲಿಕೆ ಸದಸ್ಯರ ಬಳಿ ತಲಾ 40 ಲಕ್ಷ ಅನುದಾನ ಇದೆ. ಅನಿವಾರ್ಯತೆ ಇರುವ ಕಡೆ ಬೋರ್‌ವೆಲ್‌ ಕೊರೆಯಲಿಕ್ಕೂ ಸೂಚನೆ ನೀಡಲಾಗಿದೆ. ಇದಲ್ಲದೆ, ಶುದ್ಧ ಕುಡಿಯುವ ನೀರಿನ ಘಟಕಗಳನ್ನೂ ನಿರ್ಮಿಸಲಾಗಿದೆ. ಈ ಮೂಲಕ ಹೊರೆ ಯನ್ನು ನಿಭಾಯಿಸಲಾಗುತ್ತಿದೆ ಎಂದು ಅವರು ತಿಳಿಸುತ್ತಾರೆ. 

ಹೊರೆ ಆಗದು: ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿಯಲ್ಲಿ ಎಲ್ಲ ಕೊಳವೆಬಾವಿಗಳೂ ಫ್ಲೋರೈಡ್‌ನಿಂದ ಕೂಡಿವೆ ಎಂದು ಹೇಳಿಲ್ಲ. ಕೆಲ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಹೇಳಿದೆ. ಹಾಗಾಗಿ, ಉಳಿದ ಉದ್ದೇಶಗಳಿಗೆ ಈ ನೀರನ್ನು ಬಳಸಬಹುದಾಗಿದೆ. ಇನ್ನು ಕುಡಿಯಲಿಕ್ಕೆ ಕಾವೇರಿ ನೀರು ಒದಗಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೊರೆಯಾಗುವುದಿಲ್ಲ ಎಂದು ಜಲಮಂಡಳಿ ಪ್ರಧಾನ ಮುಖ್ಯ ಎಂಜಿನಿಯರ್‌ ಕೆಂಪರಾಮಯ್ಯ ವಿಶ್ವಾಸ ವ್ಯಕ್ತಪಡಿಸುತ್ತಾರೆ. 

* ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.