ಅತಿಕ್ರಮಣ ತೆರವು ಮುಂದುವರಿಸಿ


Team Udayavani, Apr 11, 2017, 3:20 PM IST

hub2.jpg

ಹುಬ್ಬಳ್ಳಿ: ಅವಳಿ ನಗರದಲ್ಲಿ ಕೈಗೊಂಡಿರುವ ಪಾದಚಾರಿ ಮಾರ್ಗ(ಫ‌ುಟ್‌ಪಾತ್‌) ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ಮಹಾಪೌರ ಡಿ.ಕೆ. ಚವ್ಹಾಣ ಆಯುಕ್ತರಿಗೆ ಆದೇಶಿಸಿದರು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ ಸದಸ್ಯರಾದ ಯಾಸೀನ್‌ ಹಾವೇರಿ ಪೇಟೆ, ದೀಪಕ ಚಿಂಚೋರೆ, ಜೆಡಿಎಸ್‌ನ ರಾಜು ಅಂಬೋರೆ ಇನ್ನಿತರ ಸದಸ್ಯರು ವಿಷಯ ಪ್ರಸ್ತಾಪಿಸಿ, ಆಯುಕ್ತರು ಸ್ವಪ್ರತಿಷ್ಠೆಗಾಗಿ ಫ‌ುಟ್‌ಪಾತ್‌ ಕಾರ್ಯಾಚರಣೆ ನಡೆಸಿದ್ದಾರೆ.

ದೊಡ್ಡ ಮಳಿಗೆಗಳ ಅತಿಕ್ರಮಣ ತೆರವು ಬಿಟ್ಟು ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದು, ಬಿಜೆಪಿ ಸದಸ್ಯರನ್ನು ಸಂತೃಪ್ತಿಗೊಳಿಸಲು ಕಾರ್ಯಾಚರಣೆ ನಡೆದಿದೆ ಎಂದು ಆರೋಪಿಸಿದರು. ಧಾರವಾಡದಲ್ಲಿ 12 ಜನ ಸಣ್ಣ ವ್ಯಾಪಾರಸ್ಥರಿಗೆ ಅನ್ಯಾಯವಾಗಿದ್ದು, ಅವರಿಗೆ ನಷ್ಟ ತುಂಬಿ ಕೊಡಲು ತಲಾ 25 ಸಾವಿರ ರೂ.ಗಳ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿಪಕ್ಷ ನಾಯಕ ಸುಭಾಸ ಶಿಂಧೆ, ಗಣೇಶ ಟಗರಗುಂಟಿ ಪರ್ಯಾಯ ವ್ಯವಸ್ಥೆ ಕೈಗೊಂಡು ತೆರವು ಮಾಡಬೇಕಿತ್ತು. ದೊಡ್ಡ ಮಳಿಗೆಗಳ ಅತಿಕ್ರಮ ತೆರವಿಗೆ ಮೊದಲು ಕ್ರಮ ಕೈಗೊಳ್ಳಿ ಎಂದರು. ಬಿಜೆಪಿ ಸದಸ್ಯರಾದ ವೀರಣ್ಣ ಸವಡಿ, ಡಾ| ಪಾಂಡುರಂಗ ಪಾಟೀಲ, ಶಿವು ಹಿರೇಮಠ, ನಿರ್ಮಲಾ ಜವಳಿ ಮಾತನಾಡಿ, ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯ ಉತ್ತಮವಾಗಿದೆ. 

ಕಾರ್ಯಾಚರಣೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬೆಂಬಲ ಸೂಚಿಸಿದರಲ್ಲದೆ, ಪಾಲಿಕೆ ಸಭೆಯಲ್ಲಿ ನಾವೇ ಠರಾವು ಪಾಸ್‌ ಮಾಡಿದ್ದೇವೆ ಎಂದರು. ಈ ಸಂದರ್ಭದಲ್ಲಿ ಆಡಳಿತ ಹಾಗೂ ವಿಪಕ್ಷಗಳ ಕೆಲ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. 

ಹೊರನಡೆದ ಸದಸ್ಯರು: ಫ‌ುಟ್‌ಪಾತ್‌ ತೆರವು ಕಾರ್ಯಾಚರಣೆ ನೆಪದಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಅನೇಕ ವರ್ಷಗಳಿಂದ ಸಣ್ಣ ಪುಟ್ಟ ಅಂಗಡಿ ಇರಿಸಿಕೊಂಡಿದ್ದವರನ್ನು ತೆರವುಗೊಳಿಸಲಾಗಿದ್ದು, 12 ಜನರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಹಾಪೌರರ ಪೀಠದ ಮುಂದೆ ತೆರಳಿ ಒತ್ತಾಯಿಸಿದ ಕಾಂಗ್ರೆಸ್‌ ಸದಸ್ಯರಾದ ದೀಪಕ ಚಿಂಚೋರೆ, ಯಾಸೀನ್‌ ಹಾವೇರಿಪೇಟೆ, ಜೆಡಿಎಸ್‌ನ ರಾಜು ಅಂಬೋರೆ ಸಭೆಯಿಂದ ಹೊರ ನಡೆದರು. 

ಸದಸ್ಯರ ಅನಿಸಿಕೆಗಳನ್ನು ಆಲಿಸಿದ ಮಹಾಪೌರ ಡಿ.ಕೆ. ಚವ್ಹಾಣ, ಫ‌ುಟ್‌ಪಾತ್‌ ತೆರವು ಕಾರ್ಯಾಚರಣೆಯನ್ನು ಮುಂದುವರಿಸುವಂತೆ ಆಯುಕ್ತರಿಗೆ ಸೂಚಿಸುವ ಮೂಲಕ ಬಿಸಿಯೇರಿದ ಚರ್ಚೆಗೆ ತೆರೆ ಎಳೆದರು.

ವಾರ್ಡ್‌ ನಿಧಿ ಈ ವರ್ಷಕ್ಕೆ ಅನ್ವಯ: ಮಾಜಿ ಮಹಾಪೌರ ಮಂಜುಳಾ ಅಕ್ಕೂರ ಮಾತನಾಡಿ, ತಾವು ಮಹಾಪೌರರಾಗಿದ್ದಾಗ ಪ್ರತಿ ವಾರ್ಡ್‌ಗೆ 25 ಲಕ್ಷ ರೂ. ಹಾಗೂ ಮಹಾಪೌರ ನಿಧಿ ಬಿಡುಗಡೆ ಮಾಡಿದ್ದರೂ ಇದುವರೆಗೆ ಅದನ್ನು ಆಯುಕ್ತರು ಜಾರಿಗೊಳಿಸುತ್ತಿಲ್ಲ. ಮಹಾಪೌರ ನಿಧಿಯಾಗಿ ನೀಡಿದ ಹಣವನ್ನು ಸಹ ಬಿಡುಗಡೆ ಮಾಡುತ್ತಿಲ್ಲ. ಪಾಲಿಕೆ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿದರು. 

ಆಯುಕ್ತರು ಮಾತನಾಡಿ, ಮಹಾಪೌರರ ನಿಧಿಯಡಿ ಸುಮಾರು 1.50 ಕೋಟಿ ರೂ. ಬಳಕೆ ಆಗಿದೆ. ಈ ಬಗ್ಗೆ ಪರಿಶೀಲಿಸಿ ಹಣ ನೀಡುವುದಿದ್ದರೆ ಬಿಡುಗಡೆ ಮಾಡುವುದಾಗಿ ಹೇಳಿದರಲ್ಲದೆ, ವಾರ್ಡ್‌ ನಿಧಿಯನ್ನು 2017-18ನೇ ಆಯ-ವ್ಯಯದಲ್ಲಿ ಪರಿಗಣಿಸಿ ಈ ವರ್ಷಕ್ಕೆ ಅನ್ವಯವಾಗುವಂತೆ ಬಿಡುಗಡೆ ಮಾಡಲಾಗುವುದು ಎಂದರು. 

ಘನತ್ಯಾಜ್ಯ ಪ್ಯಾಕೇಜ್‌ಗೆ ಆಕ್ಷೇಪ: ಘನತ್ಯಾಜ್ಯ ವಿಲೇವಾರಿ ಕುರಿತಾಗಿ ಈ ಹಿಂದಿನ 22 ಪ್ಯಾಕೇಜ್‌ ಬದಲು ಆರು ಪ್ಯಾಕೇಜ್‌ ಮಾಡಿದ್ದು, ಇದರಿಂದ ಪೌರಕಾರ್ಮಿಕರ ಸಂಖ್ಯೆ ಕಡಿಮೆಯಾಗಿ ಸ್ವತ್ಛತೆಗೆ ತೊಂದರೆಯಾಗಲಿದೆ ಎಂದು ಸದಸ್ಯರಾದ ಗಣೇಶ ಟಗರಗುಂಟಿ, ಅಲ್ತಾಫ್ ಕಿತ್ತೂರು ಇನ್ನಿತರರು ಆಕ್ಷೇಪ ವ್ಯಕ್ತಪಡಿಸಿದರು.

ಆಯುಕ್ತರು ಮಾತನಾಡಿ, ಈ ಕುರಿತಾಗಿ ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರಾದರೂ ಕೋರ್ಟ್‌ ಅರ್ಜಿಗಳನ್ನು ವಜಾಗೊಳಿಸಿದೆ. ಸರಕಾರದ ಆದೇಶದಂತೆ ಆರು ಪ್ಯಾಕೇಜ್‌ ಕೈಗೊಳ್ಳಲಾಗುತ್ತಿದೆ ಎಂದರು. 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.