ನೇಮಕಾತಿಗೆ ಆಗ್ರಹಿಸಿ ನೂರಾರು ಆಕಾಂಕ್ಷಿಗಳ ಪ್ರತಿಭಟನೆ
Team Udayavani, Apr 11, 2017, 3:37 PM IST
ಹುಬ್ಬಳ್ಳಿ: ರೈಲ್ವೆ ಇಲಾಖೆಯ ಆಡಳಿತ ಮಂಡಳಿ ತರಬೇತಿ ಕೋರ್ಸ್ ಪೂರ್ಣಗೊಳಿಸಿದ ಅಪ್ರಂಟೀಸ್ಗಳನ್ನು ನೇಮಕ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಸೋಮವಾರ ವಿವಿಧ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಆಕಾಂಕ್ಷಿಗಳು ಪ್ರತಿಭಟಿಸಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಸದ್ಯ ನೈಋತ್ಯ ರೈಲ್ವೆ ವಲಯದಲ್ಲಿ 5,500ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಕಾರ್ಯ ಮಾತ್ರ ನಡೆಯುತ್ತಿಲ್ಲ. ಈ ಕುರಿತು ಹಲವು ಬಾರಿ ಮನವಿ ಮಾಡಿ ವಿವಿಧ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಏನೋ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡು ತಿಂಗಳ ಹಿಂದೆ ಮೈಸೂರಿನವರಾಗಿದ್ದ ಅಭಿಷೇಕ ಎಂಬುವರು ಉದ್ಯೋಗ ದೊರಕದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ತುಂಬಾ ಖೇದಕರ ಸಂಗತಿ. ರಾಜ್ಯದಲ್ಲಿ ಉದ್ಯೋಗಕ್ಕಾಗಿ ಸಾವಿರಾರು ಜನರ ನಿರುದ್ಯೋಗಿಗಳು ಕಾಯುತ್ತಿದ್ದಾರೆ. ಇಲಾಖೆ ಮಾತ್ರ ಕಣ್ಣು ತೆರೆಯುತ್ತಿಲ್ಲ.
ನಮ್ಮೊಂದಿಗೆ ಅಪ್ರೇಂಟಿಸ್ ಮುಗಿಸಿದ ಬೇರೆ ರಾಜ್ಯದಲ್ಲಿ ಈಗಾಗಲೇ ಉದ್ಯೋಗ ಭರ್ತಿ ಕಾರ್ಯ ಮಾಡಲಾಗಿದ್ದು, ರಾಜ್ಯದಲ್ಲಿ ಮಾತ್ರ ಭರ್ತಿ ಮಾಡಿಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಲ್ಯಾಮಿಂಗ್ಟನ್ ರಸ್ತೆ, ಸ್ಟೇಶನ್ ರಸ್ತೆ, ಆರ್ಜಿಎಸ್ ಮೂಲಕ ಗದಗ ರಸ್ತೆಯಲ್ಲಿರುವ ಜಿಎಂ ಕಚೇರಿಗೆ ತೆರಳಿ ಧರಣಿ ನಡೆಸಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ರವಿ ಗಾಣಿಗೇರ, ಶಿವರಾಜ, ಅರವಿಂದ ಮದವಿನಕೇರಿ, ಶಿವರಾಜ ಮಗದುಮ್, ಎಂ.ಜಾಫರ್ ಭಗವಾನ, ಶ್ರೀನಿವಾಸ, ಅನಿಲ, ಪವನಕುಮಾರ, ಸುನೀಲ ಕವಟೆ, ಶ್ಯಾಮ್ ನಾಯ್ಕ, ಬಸವರಾಜ ಸಾಯಣ್ಣವರ, ನಿರಂಜನಕುಮಾರ ಎಂ.ಎಸ್., ನವೀನ, ವಸುದೇವ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ನೆರೆಯ ರಾಜ್ಯಗಳಿಂದ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.