ಅಭಿವೃದ್ಧಿಗೆ ಒಳ್ಳೆ ಅಧಿಕಾರಿ ಶೋಧ


Team Udayavani, Apr 11, 2017, 4:06 PM IST

gul5.jpg

ಚಿಂಚೋಳಿ: ನಮ್ಮ ಹಿಂದುಳಿದ ತಾಲೂಕಿನ ಅಭಿವವೃದ್ಧಿಗೋಸ್ಕರ ಒಳ್ಳೆಯ ಅಧಿಕಾರಿಗಳನ್ನು ಹುಡುಕುತ್ತಿದ್ದೇನೆ. ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳು ಸಿಗುತ್ತಿಲ್ಲ. ಅಧಿಕಾರಿಗಳು ಸರಕಾರಿ ಕೆಲಸಗಳನ್ನು ಸರಿಯಾಗಿ ಮಾಡಿದರೆ ಯಾರಿಗೂ ತಲೆಬಾಗುವ ಅವಶ್ಯಕತೆ ಇರುವುದಿಲ್ಲ ಎಂದು ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಹೇಳಿದರು. 

ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸೇಡಂ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ ರಾಜ್ಯ ಪ್ರವಾಸೋದ್ಯಮ ಇಲಾಖೆ ವಿಶೇಷ ಅಧಿಕಾರಿಯಾಗಿ ಬಡ್ತಿ ಹೊಂದಿದ ಭೀಮಾಶಂಕರ ತೆಗ್ಗೆಳ್ಳಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯ ಸುಕ್ಷೇತ್ರ ರೇವಗ್ಗಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಮತ್ತು ಘತ್ತರಗಿ ಭಾಗ್ಯವಂತಿ ದೇವಸ್ಥಾನ ಅಭಿವೃದ್ಧಿಪಡಿಸಿ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಒಳ್ಳೆಯ ಅಧಿಕಾರಿಗಳಿದ್ದರೆ ತಾಲೂಕು ಅಭಿವೃದ್ಧಿ ಆಗತ್ತದೆ. ಹೀಗಾಗಿ ತಾಲೂಕಿನ ಅಭಿವೃದ್ಧಿಗಾಗಿ ಒಳ್ಳೆಯ ಅಧಿಕಾರಿಗಳನ್ನು ಹುಡುಕಬೇಕಾಗಿದೆ ಎಂದು ಹೇಳಿದರು. ತಾಲೂಕಿನ ಚಂದ್ರಂಪಳ್ಳಿ ಮತ್ತು ಗೊಟ್ಟಂಗೊಟ್ಟ, ಎತ್ತಪೋತ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಬೇಕಾಗಿದೆ. ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ ಅವರು ಕಳೆದ 3 ವರ್ಷಗಳಲ್ಲಿ ಕಂದಾಯ ಇಲಾಖೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. 

ಇನ್ನು ಮುಂದೆ ಕಲಬುರಗಿ ಜಿಲ್ಲೆಯ ನೋಡಲ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಂಬಂಧಿಸಿದ ಸಚಿವರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ, ಸಿಬ್ಬಂದಿಗಳನ್ನು ಅಮಾನತುಗೊಳಿಸುವುದು ಸಮಂಜಸವಲ್ಲ. ಸಿಬ್ಬಂದಿಗಳಿಂದ ಕೆಲಸಗಳನ್ನು ಮಾಡಿಸಿಕೊಳ್ಳುವ ಕೌಶಲ್ಯ ಅಧಿಕಾರಿಗಳಲ್ಲಿಬೇಕು. 

ಚಿಂಚೋಳಿ, ಸೇಡಂ, ಚಿತ್ತಾಪುರ ತಾಲೂಕಿನಲ್ಲಿ  ಯಾವುದೇ ಕಾನೂನು ಬಾಹಿರವಾದ ಕೆಲಸ ನಡೆಯಲು ಅವಕಾಶ ನೀಡಿಲ್ಲ. ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸರಳವಾಗಿ ದಾಖಲೆ ಸಿಗಬೇಕು ಎಂಬ ಉದ್ದೇಶವಾಗಿತ್ತು. ಹೈ.ಕ. ಪ್ರದೇಶ ಅತಿ ಹಿಂದುಳಿದೆ. ಹೀಗಾಗಿ ನನ್ನ ಸೇವೆಯನ್ನು ಇಲ್ಲಿಯೇ ಮಾಡುವ ಇಷ್ಟ ಹೊಂದಿದ್ದೇನೆ ಎಂದು ಹೇಳಿದರು. 

ಚಿತ್ತಾಪುರ ತಾಲೂಕಿನಲ್ಲಿ ಮರಳು ಮಾμಯಾದಿಂದ ವರ್ಗಾವಣೆ ಮಾಡಲಾಗಿದೆ ಎಂದು ಕೆಲ ಉಹಾಪೋಹ ಸುದ್ದಿಗಳು ಬಂದಿವೆ. ಇದು ಶುದ್ಧ ಸುಳ್ಳು. ನನ್ನ ಮೂರು ವರ್ಷ ಸೇವೆ ಅವಧಿ ಪೂರ್ಣಗೊಂಡಿದೆ. ಸರಕಾರ ಬಡ್ತಿ ನೀಡಿ ಅದೇಶ ಹೊರಡಿಸಿದ್ದರಿಂದ ವರ್ಗಾವಣೆ ಆಗಿದೆ ಎಂದು ಹೇಳಿದರು. ಚಿಂಚೋಳಿ ಡಿವೈಎಸ್‌ಪಿ ಯು. ಶರಣಪ್ಪ. ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ ಮಾತನಾಡಿದರು.

ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ವೆಂಕಟೇಶ ದುಗ್ಗನ್‌, ಬಸವರಾಜ ಸಜ್ಜನಶೆಟ್ಟಿ, ಕೆ.ಎಂ. ಬಾರಿ, ಮಾಣಿಕಪ್ಪ ಭಗವಂತಿ ಇದ್ದರು. ತಹಶೀಲ್ದಾರ ಪ್ರಕಾಶ ಕುದುರೆ ಸ್ವಾಗತಿಸಿದರು. ರೇವಣಸಿದ್ದಯ್ಯ ಸ್ವಾಮಿ ನಿರೂಪಿಸಿದರು. ಆಹಾರ ನಿರೀಕ್ಷಕ ಮಂಜುನಾಥ ಕಲಬುರಗಿ ವಂದಿಸಿದರು. ಕಂದಾಯ ಇಲಾಖೆ ಸಿಬ್ಬಂದಿಗಳು ಸಹಾಯಕ ಆಯುಕ್ತ ಭೀಮಾಶಂಕರ ಅವರನ್ನು ಸನ್ಮಾನಿಸಿ ಗೌರವಿಸಿದರು.   

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.