ಮತ್ತೆ ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆ


Team Udayavani, Apr 12, 2017, 10:42 AM IST

Kappatagudda-area.jpg

ಬೆಂಗಳೂರು: ಸಂರಕ್ಷಿತ ಅರಣ್ಯ ವ್ಯಾಪ್ತಿಯಿಂದ ಹೊರಗಿಟ್ಟ ಕಾರಣಕ್ಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗದಗ ಜಿಲ್ಲೆಯ ಕಪ್ಪತಗುಡ್ಡ ಪ್ರದೇಶವನ್ನು ಮತ್ತೆ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಇದರೊಂದಿಗೆ ಕಪ್ಪತಗುಡ್ಡ ಪ್ರದೇಶವನ್ನು ಮತ್ತೆ ಸಂರಕ್ಷಿತ ಅರಣ್ಯ ಪ್ರದೇಶವಾಗಿ ಘೋಷಿಸಬೇಕು ಎಂಬ ಆ ಭಾಗದ ಜನ, ಮಠಾಧೀಶರು ಮತ್ತು ಪರಿಸರ ಪ್ರೇಮಿಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ.

ಸರ್ಕಾರದ ಆದೇಶದಂತೆ ಗದಗ ಜಿಲ್ಲೆ ಗದಗ ತಾಲೂಕಿನ 401.811 ಹೆಕ್ಟೇರ್‌, ಮುಂಡರಗಿ ತಾಲೂಕಿನ 15453.673 ಹೆಕ್ಟೇರ್‌ ಮತ್ತು ಶಿರಹಟ್ಟಿಯ 2016.764 ಹೆಕ್ಟೇರ್‌ ಸೇರಿದಂತೆ ಒಟ್ಟು 17872.248 ಹೆಕ್ಟೇರ್‌ ಪ್ರದೇಶ ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಆದರೆ, ಈಗಾಗಲೇ ಆ ಪ್ರದೇಶದಲ್ಲಿರುವ ಕಂದಾಯ ಭೂಮಿ, ಪಟ್ಟಾ ಭೂಮಿ, ಕಂದಾಯ ಗ್ರಾಮಗಳನ್ನು ಸಂರಕ್ಷಿತ ಅರಣ್ಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಕಪ್ಪತಗುಡ್ಡ ಪ್ರದೇಶ ಉತ್ತರ ಕರ್ನಾಟಕ ಭಾಗದ ವನ್ಯಜೀವಿಗಳ ಆವಾಸ ಸ್ಥಾನವಾಗಿದ್ದು, ಇಲ್ಲಿ ಅಪರೂಪದ ಔಷಧೀಯ ಸಂಸ್ಯಗಳು ಹೇರಳ ಪ್ರಮಾಣದ್ದಲ್ಲಿವೆ ಎಂಬ ಕಾರಣಕ್ಕೆ 2015ರ ಸೆ. 11ರಂದು ಇದನ್ನು ಸಂರಕ್ಷಿತ ಅರಣ್ಯ ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅಲ್ಲದೆ, ಮುಂಡರಗಿ ತಾಲೂಕಿನ 89.923 ಹೆಕ್ಟೇರ್‌ ಪ್ರದೇಶವನ್ನು ಔಷಧ ಸಸ್ಯಗಳಿಗಾಗಿಯೇ ಮೀಸಲಿಟ್ಟ ಸಂರಕ್ಷಿತ ಅರಣ್ಯ ಎಂದು ಪರಿಗಣಿಸಲೂ ನಿರ್ಧರಿಸಲಾಗಿತ್ತು. ನಂತರ 2017ರ ಫೆ. 2ರಂದು ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲೂ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತರ ಅರಣ್ಯ ಪ್ರದೇಶ ಎಂದು ಘೋಷಿಸಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಅರಣ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ವಿವಾದ ಸೃಷ್ಟಿಸಿದ ಸರ್ಕಾರದ ನಿರ್ಧಾರ: ವನ್ಯಜೀವಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕಪ್ಪತಗುಡ್ಡ ಪ್ರದೇಶವನ್ನು 2015ರ  ಡಿ. 19ರಂದು ಸಂರಕ್ಷಿತರ ಅರಣ್ಯ ಎಂದು ಘೋಷಿಸಲಾಗಿತ್ತು. ಆದರೆ, ನಂತರ ಸರ್ಕಾರ 2016ರ ಏ. 4ರಂದು ಮತ್ತೂಂದು ಆದೇಶ ಹೊರಡಿಸಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಅದನ್ನು ಕೈಬಿಟ್ಟಿತ್ತು. ಇದು ಆ ಭಾಗದ ಜನರು, ಪರಿಸರವಾದಿಗಳು, ಸ್ವಾಮೀಜಿಗಳ ಕೆಂಗಣ್ಣಿಗೆ ಗುರಿಯಾಗಿತ್ತಲ್ಲದೆ, ಸಾಕಷ್ಟು ಹೋರಾಟಗಳೂ ನಡೆದಿದ್ದವು. ಅಲ್ಲದೆ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ಸಂದರ್ಭದಲ್ಲಿ ಕಪ್ಪತಗುಡ್ಡವನ್ನು ಸಂರಕ್ಷಿತರ ಅರಣ್ಯ ಪ್ರದೇಶವಾಗಿ ಘೋಷಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು.

ಅದರಂತೆ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತ ಅರಣ್ಯ ಎಂದು ಘೋಷಿಸುವ ಕಡತ ಸಿದ್ಧಪಡಿಸಿ ವನ್ಯಜೀವಿ ಮಂಡಳಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು. ಮಂಗಳವಾರ ಅವರು ಕಡತಕ್ಕೆ ಸಹಿ ಮಾಡಿದ್ದು, ಅದರ ಬೆನ್ನಲ್ಲೇ ಅರಣ್ಯ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.