ಮಧುಗಿರಿಯ ಸಾವಿರಾರು ಜನರಿಂದ ನೇತ್ರಾವತಿ ದರ್ಶನ


Team Udayavani, Apr 12, 2017, 12:29 PM IST

netravati.jpg

ಬೆಳ್ತಂಗಡಿ: ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಸುಮಾರು 3,000 ಮಂದಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ನೇತ್ರಾವತಿ ನದಿಯ ಸ್ಥಿತಿಗತಿ ವೀಕ್ಷಿಸಿದರು. ಇದಕ್ಕೂ ಮುನ್ನ ಎತ್ತಿನಹೊಳೆ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಮಧುಗಿರಿ ಕ್ಷೇತ್ರದ ಶಾಸಕ, ವಿಧಾನಧಿಸಭಾ ಭರವಸೆ ಈಡೇರಿಕೆ ಸಮಿತಿಯ ಕೆ. ಎನ್‌. ರಾಜಣ್ಣ ಅವರ ನೇತೃತ್ವದಲ್ಲಿ ಮಧುಗಿರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಮಧುಗಿರಿ ವಿಧಾನಸಭಾ ಕ್ಷೇತ್ರದ ಜನರನ್ನು ಎತ್ತಿನಹೊಳೆ ಕಾಮಗಾರಿ ಪ್ರಗತಿ ವೀಕ್ಷಣೆಗೆ ಕರೆತರಲಾಗಿತ್ತು. ಬಸ್‌, ಕ್ರೂಸರ್‌ ಜೀಪು, ಟೆಂಪೋ ಟ್ರಾವೆಲರ್‌, ಇನ್ನೋವಾ ಸೇರಿದಂತೆ 280ರಷ್ಟು ವಾಹನಗಳಲ್ಲಿ ಬೆಳಗ್ಗೆ ಮಧುಗಿರಿಯಿಂದ ಹೊರಟ ಮಂದಿಗೆ ಹಾಸನದ ಶಾಂತಿಗ್ರಾಮದಲ್ಲಿ ಊಟದ ಏರ್ಪಾಟು ಮಾಡಲಾಗಿತ್ತು. ಅನಂತರ ಸಕಲೇಶಪುರದ ಎತ್ತಿನಹೊಳೆಯಲ್ಲಿ ನಡೆಯುತ್ತಿರುವ 12,900 ಕೋ.ರೂ.ಗಳ ಕಾಮಗಾರಿ ವೀಕ್ಷಣೆಗೆ ಅವಕಾಶ ನೀಡಲಾಯಿತು. ಅಲ್ಲಿಂದ ಸಂಜೆ 3.30ರ ನಂತರ ಹತ್ತಾರು ವಾಹನಗಳು ಧರ್ಮಸ್ಥಳ ತಲುಪಿದವು.
ಶಾಸಕ ಕೆ.ಎನ್‌. ರಾಜಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಸ್‌. ಮಲ್ಲಿಕಾರ್ಜುನಯ್ಯ, ನಗರ ಸಭಾ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ, ಜಿ.ಪಂ. ಸದಸ್ಯರಾದ ಶಾಂತಲಾ ರಾಜಣ್ಣ, ಜಿ.ಜೆ. ರಾಜಣ್ಣ, ತಾ.ಪಂ. ಅಧ್ಯಕ್ಷೆ ಇಂದಿರಾ ದೇವಾನಾೖಕ್‌ ಮೊದಲಾದವರು ಇದ್ದರು.

ಶಾಸಕರ ನೇತೃತ್ವದ ನಿಯೋಗ ಧರ್ಮಸ್ಥಳದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗುವ ಇರಾದೆ ಹೊಂದಿದೆ. ಆದರೆ ನಿಯೋಗ ಧರ್ಮಸ್ಥಳ ತಲುಪುವಾಗಲೇ ರಾತ್ರಿಯಾಗಿದೆ. ಹಾಗೂ ಡಾ| ಹೆಗ್ಗಡೆಯವರು ಕೂಡ ಕಾರ್ಯಕ್ರಮ ನಿಮಿತ್ತ ಕೆರ್ವಾಶೆಗೆ ತೆರಳಿದ್ದು ರಾತ್ರಿಯಷ್ಟೇ ಮರಳಿದ್ದಾರೆ. ಆದ್ದರಿಂದ ಬುಧವಾರ ನಿಯೋಗ ಭೇಟಿ ಮಾಡಲಿದೆ. ಆಗಮಿಸಿದ ಸಾರ್ವಜನಿಕರು ದೇವರ ದರ್ಶನ, ಪ್ರಸಾದ ಭೋಜನ ಸೀÌಕರಿಸಿ ಊರಿಗೆ ಮರಳಲಿದ್ದಾರೆ.

ಭಿಕ್ಷೆ ಬೇಡುತ್ತೇವೆ
ನಗರಸಭೆ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ ಅವರನ್ನು ಮಾಧ್ಯಮದವರು ಮಾತನಾಡಿಸಿದಾಗ, ನಮ್ಮಲ್ಲಿ ಎಷ್ಟು ಕೊರೆದರೂ ನೀರಿಲ್ಲ. ಸದಾ ಬರದ ಸ್ಥಿತಿ ಇದೆ. ಮಳೆ ಇಲ್ಲ. ಜಾನುವಾರುಗಳಿಗೆ ಮೇವಿಲ್ಲ. ಜನರಿಗೆ ನೀರಿಲ್ಲ. ದ.ಕ.ದಲ್ಲಿ ಹರಿದು ಪೋಲಾಗುವ, ಸಮುದ್ರ ಸೇರುವ ನೀರನ್ನಷ್ಟೇ ನಮಗೆ ಬೊಗಸೆಯಲ್ಲಾದರೂ ಭಿಕ್ಷೆಯ ರೂಪದಲ್ಲಾದರೂ ಕುಡಿಯಲು ಕೊಡಿ ಎಂದು ಕೇಳುತ್ತಿದ್ದೇವೆ ಎಂದರು. ಕಾಮಗಾರಿ ವೀಕ್ಷಿಸಿದಾಗ ಅಲ್ಲಿ 24 ಟಿಎಂಸಿ ನೀರು ಇರದು ಎಂದು ನಿಮಗೆ ಅನಿಸಿಲ್ಲವೇ ಎಂದು ಪ್ರಶ್ನಿಸಿದಾಗ ಮುಂದಾದರೂ ಮಳೆ ಬಂದು ಅಲ್ಲಿ ನೀರು ಸಂಗ್ರಹವಾಗಿ ನಮಗೆ ದೊರೆಯಲಿ ಎಂದಷ್ಟೇ ನಮ್ಮ ಪ್ರಾರ್ಥನೆ. ಧರ್ಮಸ್ಥಳ ದೇವರಲ್ಲಿ ಕೂಡ ನಾವು ಅದನ್ನೇ ಪ್ರಾರ್ಥಿಸುವುದು, ಒಳ್ಳೆ ಮಳೆಯಾಗಿ ನಮಗೆ ನೀರು ದೊರೆಯಲಿ ಎಂದರು.

ಕುಡಿಯುವ ನೀರಿಗೆ ಆಕ್ಷೇಪವಲ್ಲ
ಎತ್ತಿನಹೊಳೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಪುಷ್ಪರಾಜ್‌ ಶೆಟ್ಟಿ, ಶಶಿಕಿರಣ್‌ ಜೈನ್‌, ಹರೀಶ್‌ ಪೂಂಜಾ, ಕಿರಣ್‌ ಶೆಟ್ಟಿ ಮೊದಲಾದವರ ನಿಯೋಗ ಮಧುಗಿರಿಯಿಂದ ಆಗಮಿಸಿದವರನ್ನು ದಿಢೀರ್‌ ಭೇಟಿ ಮಾಡಿತು. ಎತ್ತಿನಹೊಳೆ ಕಾಮಗಾರಿಯೇ ಬೋಗಸ್‌. ಇಲ್ಲಿ ನೇತ್ರಾವತಿಯಲ್ಲಿಯೇ ನೀರಿಲ್ಲ. ಇನ್ನು ಕಾಮಗಾರಿ ಪ್ರದೇಶದಲ್ಲಿ 24 ಟಿಎಂಸಿ ದೊರೆಯಲು ಹೇಗೆ ಸಾಧ್ಯ. ಕುಡಿಯುವ ನೀರು ಕೊಡಲು ದ.ಕ. ಜನ ವಿರೋಧ ಅಲ್ಲ. ಇಲ್ಲದ ನೀರಿಗಾಗಿ ಹಣ ಪೋಲು ಮಾಡುತ್ತಿರುವ ಕುರಿತು ಮಾತ್ರ ಆಕ್ಷೇಪ. ದ.ಕ. ಹಾಗೂ ಇತರ ಜಿಲ್ಲೆಗಳ ಜನರ ನಡುವೆ ಮನಸ್ತಾಪದ ಅಗತ್ಯವಿಲ್ಲ. ಹೊಂದಾಣಿಕೆ ಮೂಲಕ ಮಾಹಿತಿ ನೀಡುವ ಕಾರ್ಯ ಸರಕಾರದಿಂದ ಆಗುತ್ತಿಲ್ಲ ಎಂದು ಮನವರಿಕೆ ಮಾಡಲಾಯಿತು.

ಮಳೆ ಬಂತು
ಸಾವಿರಾರು ಮಂದಿ ಎತ್ತಿನಹೊಳೆ ಪ್ರದೇಶದಲ್ಲಿ ವೀಕ್ಷಣೆಗೆ ಇಳಿದಾಗ ಅಚಾನಕ್‌ ಆಗಿ ಮಳೆ ಬಂತು. ಆಗಮಿಸಿದವರಿಗೆ ಹರ್ಷ ತಂದಿತು. ಇದೇ ರೀತಿ ಮಳೆಯಾಗಿ ನೀರು ಉಕ್ಕಿ ಹರಿಯಲಿ ಎಂದು ಪ್ರಾರ್ಥಿಸಿದರು. 

ಪೊಲೀಸ್‌ ಬಂದೋಬಸ್ತ್
ಸಾವಿರಾರು ಮಂದಿ ಒಮ್ಮೆಲೇ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಎತ್ತಿನಹೊಳೆ ಪ್ರದೇಶದಿಂದ ಧರ್ಮಸ್ಥಳ ವರೆಗೂ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.