ಒಂದೇ ದಿನದಲ್ಲಿ 230ಕ್ಕೇರಿದ ಪ್ರಶಸ್ತಿ ಪುರಸ್ಕೃತರ ಸಂಖ್ಯೆ
Team Udayavani, Apr 12, 2017, 12:33 PM IST
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗಾಜಿನ ಮನೆಯಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಪ್ರಶಸ್ತಿ ಸಮಾರಂಭ ಗೊಂದಲ ಹಾಗೂ ಗದ್ದಲದ ಗೂಡಾಗಿತ್ತು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 158 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿತ್ತಾದರೂ ಕೊನೆ ಗಳಿಗೆಯಲ್ಲಿ ಪುರಸ್ಕೃತ ಪಟ್ಟಿ ಬೆಳೆಯುತ್ತಾ ಹೋಗಿದ್ದರಿಂದ ಸಮಾರಂಭದಲ್ಲಿ ಅವ್ಯವಸ್ಥೆ ಉಂಟಾಗಲು ಕಾರಣವಾಯಿತು.
ಶಾಸಕರು, ಸಚಿವರು ಹಾಗೂ ಪಾಲಿಕೆಯ ಸದಸ್ಯರ ಒತ್ತಡದ ಹಿನ್ನೆಲೆಯಲ್ಲಿ ಪುರಸ್ಕೃತರ ಸಂಖ್ಯೆ 158ರಿಂದ 230 ದಾಟಿತ್ತು. ಪರಿಣಾಮ ವೇದಿಕೆಯಲ್ಲಿ ಎಲ್ಲ ಪುರಸ್ಕೃತರಿಗೆ ಕುಳಿತು ಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸುವುದು ಸವಾಲಾ ಗಿತ್ತು. ಜತೆಗೆ ಪ್ರಶಸ್ತಿ ಸ್ವೀಕರಿಸಲು ಬಂದವರಿಗೆ ಎಲ್ಲಿಗೆ ಹೋಗಬೇಕು? ಎಲ್ಲಿ ಕೂರಬೇಕೆಂಬ ಮಾಹಿತಿ ಇಲ್ಲದೆ ಗೊಂದಲವಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸುತ್ತಿನಲ್ಲಿ 15 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಿ ಅನ್ಯ ಕಾರ್ಯದ ನಿಮಿತ್ತ ಕಾರ್ಯಕ್ರಮದಿಂದ ಹೊರಟರು. ನಂತರ, ಪ್ರಶಸ್ತಿ ಪುರಸ್ಕೃತರು ಗಣ್ಯರಿಂದಲೇ ಪ್ರಶಸ್ತಿ ಪಡೆಯಬೇಕು ಆಸೆಯಿಂದ ವೇದಿಕೆಗೆ ಬಂದ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಏಕಕಾಲದಲ್ಲಿ 30ಧಿ-40 ಮಂದಿ ಪುರಸ್ಕೃತರು ವೇದಿಕೆಗೆ ಬಂದ ಹಿನ್ನೆಲೆಯಲ್ಲಿ ಪ್ರಶಸ್ತಿ ಯಾರಿಗೆ ನೀಡಬೇಕು ಎಂಬುದು ತಿಳಿಯದೆ ಗಣ್ಯರು ಸಹ ಗಲಿಬಿಲಿಗೊಂಡರು.
ಮಾಹಿತಿಯಿಲ್ಲ: ಕೆಂಪೇಗೌಡ ಪ್ರಶಸ್ತಿಗೆ ಪುರಸ್ಕೃತರ ಆಯ್ಕೆ ಪ್ರಕ್ರಿಯೆ ಮಂಗಳವಾರ ಸಂಜೆಯವರಿಗೆ ನಡೆದ ಹಿನ್ನೆಲೆಯಲ್ಲಿ ಪ್ರಶಸ್ತಿ ಪಡೆದ ಹಲವರಿಗೆ ತಮಗೆ ಪ್ರಶಸ್ತಿ ಬಂದಿದೆ ಎಂಬ ಮಾಹಿತಿ ಇರಲಿಲ್ಲ. ಜತೆಗೆ ಸೋಮವಾರ ಬಿಬಿಎಂಪಿ ಪ್ರಕಟಿಸಿದ ಪುರಸ್ಕೃತರಿಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲು ಪಾಲಿಕೆ ಯಿಂದ ಕರೆ ಮಾಡಿರಲಿಲ್ಲ ಎನ್ನಲಾಗಿದೆ.
ಸ್ಮರಣಿಕೆಗಳ ಕೊರತೆ!: ಪುರಸ್ಕೃತರ ಸಂಖ್ಯೆ ಎಷ್ಟಾಗಬಹುದು ಎಂಬ ನಿಖರ ಮಾಹಿತಿ ಪಾಲಿಕೆಯ ಅಧಿಕಾರಿಗಳಿಗೂ ಇರಲಿಲ್ಲ. ಪುರಸ್ಕೃತರಿಗೆ ಕೆಂಪೇಗೌಡ ಪ್ರಶಸ್ತಿಯೊಂದಿಗೆ ನೀಡಲಾಗುವ ಅಶ್ವರೋಢ ಕೆಂಪೇಗೌಡರ ಸ್ಮರಣಿಕೆಗಳ ಕೊರತೆಯಾಯಿತು. ಪಾಲಿಕೆಯ ಅಧಿಕಾರಿಗಳು 200 ಸ್ಮರಣಿಕೆಗಳನ್ನು ತರಿಸಿದ್ದರು. ಆದರೆ, ಪ್ರಶಸ್ತಿ ಪುರಸ್ಕೃತರ ಸಂಖ್ಯೆ ಹೆಚ್ಚಾಗಿದ್ದಧಿಲ್ಲದೆ ಸಮಾರಂಭದಲ್ಲಿಯೇ ಸುಮಾರು ಹೆಸರುಗಳು ಪುರಸ್ಕೃತರ ಪಟ್ಟಿಗೆ ಸೇರಿದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಪುರಸ್ಕೃತರಿಗೆ ಸ್ಮರಣಿಕೆಯನ್ನು ನಂತರ ತಲುಪಿಸುವುದಾಗಿ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ವೇದಿಕೆಯಲ್ಲೇ ಆಯ್ಕೆ
ಪ್ರಶಸ್ತಿ ಪ್ರದಾನ ಸಮಾರಂಭದ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಸುಮಾರು 10ಕ್ಕೂ ಹೆಚ್ಚು ಮಂದಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು. ಮುಖ್ಯಮಂತ್ರಿಗಳು ಕೆಲವರಿಗೆ ಪ್ರಶಸ್ತಿ ಪ್ರದಾನ ಮಾಡಿ ಹೊರಟ ನಂತರ ವೇದಿಕೆ ಏರಿದ್ದರಿಂದ ಗೊಂದಲ ಉಂಟಾಯಿತು. ಲಾಭಿ ಮಾಡಿದವರಿಗೆ ಸ್ಥಳದಲ್ಲಿಯೇ ಪ್ರಶಸ್ತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.