![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 12, 2017, 3:36 PM IST
ಜೇವರ್ಗಿ: ದೇಶದಲ್ಲಿನ ಮಠ ಮಂದಿರಗಳು ಸಮಾಜದ ಸರ್ವ ವರ್ಗದ ಜನರಿಗೆ ಧಾರ್ಮಿಕ ಸಂಸ್ಕಾರ ನೀಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾಂದರು ನುಡಿದರು.
ತಾಲೂಕಿನ ಯಡ್ರಾಮಿ ಹತ್ತಿರದ ರೇಣುಕಗಿರಿಯಲ್ಲಿ ಶಾಖಾಮಠದ ಮೂರನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿರುವ ಸಿದ್ಧಾಂತ ಶಿಖಾಮಣಿ ಪ್ರವಚನ, ಧರ್ಮಸಭೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸನಾತನ ವೀರಶೈವ ಧರ್ಮದಲ್ಲಿ ಅನನ್ಯ ಮತ್ತು ಅಸಾಧಾರಣ ಮಹತ್ವವಿದೆ. 84 ಲಕ್ಷ ಜೀವರಾಶಿಗಳಲ್ಲಿ ಮನುಷ್ಯನಿಗೆ ಮಾತ್ರ ಸಂಸ್ಕಾರ ನೀಡಲು ಸಾಧ್ಯವಾಗುತ್ತದೆ. ಸಂಸ್ಕಾರದ ಬಲದಿಂದ ಮನುಷ್ಯ ಮಹಾದೇವನಾಗುತ್ತಾನೆ. ಗುರುವೇ ಇರದಿದ್ದರೆ ಮನುಷ್ಯ ಪಶುವಿನಂತೆ ಬಾಳಬೇಕಾಗಿತ್ತು.
ಮನುಷ್ಯನನ್ನು ಮಾನವನನ್ನಾಗಿ ರೂಪಿಸುವ ಜವಾಬ್ದಾರಿ ಮಠ, ಗುರುಗಳ ಮೇಲಿದೆ ಎಂದರು. ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ| ಅಜಯಸಿಂಗ್, ಮಲ್ಲಾಬಾದ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು.
ರೇಣುಕಗಿರಿಗೆ ಬರುವ ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸಲು ಯಾತ್ರಿಕ ನಿವಾಸ ನಿರ್ಮಾಣಕ್ಕೆ 25 ಲಕ್ಷ ರೂ.ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿ, ಮಲ್ಲಾಬಾದ ಏತನೀರಾವರಿ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದರು.
ಆಲೂರ-ಕಾಸರಭೋಸಗಾದ ಕೆಂಚವೃಷಬೇಂದ್ರ ಶಿವಾಚಾರ್ಯರು, ಬಾಲತಪಸ್ವಿ ಸಾಂಬ ಶಿವಯೋಗಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ನಿಡಗುಂದದ ಕರುಣೇಶ್ವರ ಸ್ವಾಮೀಜಿ, ಹಿಪ್ಪರಗಾ ಎಸ್.ಎನ್ ಸಿದ್ಧಲಿಂಗ ಶಿವಾಚಾರ್ಯರು, ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ,
ಮಲ್ಲನಗೌಡ ಪಾಟೀಲ ರದ್ದೇವಾಡಗಿ, ರಾಜಶೇಖರ ಸೀರಿ, ಗೊಲ್ಲಾಳಪ್ಪಗೌಡ ಮಾಗಣಗೇರಾ, ನಿಂಗನಗೌಡ ಪೊಲೀಸ್ ಪಾಟೀಲ, ವಿಶ್ವನಾಥ ಸಾಹು ಆಲೂರ, ತಾಪಂ ಸದಸ್ಯ ಪ್ರಶಾಂತ ರಾಠೊಡ, ದೇವಿಂದ್ರಪ್ಪ ಸರಕಾರ, ನಿಂಗನಗೌಡ ಸೋಮಪ್ಪಗೋಳ, ಚಂದ್ರಶೇಖರ ಪುರಾಣಿಕ, ಕೆಂಚಪ್ಪಗೌಡ ಬಿರಾದಾರ, ಹಯ್ನಾಳಪ್ಪ ಗಂಗಾಕರ,
ಮಲ್ಲಿಕಾರ್ಜುನ ಹಲಕರ್ಟಿ, ಶರಣಬಸಪ್ಪ ಪಟ್ಟಣಶೆಟ್ಟಿ ಆಗಮಿಸಿದ್ದರು. ಗುರುಕುಲ ಸಾಧಕರಿಂದ ವೇದಘೋಷ ನಡೆಯಿತು, ಚಂದ್ರಶೇಖರ ಪುರಾಣಿಕ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿವುಕುಮಾರ ಪಾಟೀಲ ಸ್ವಾಗತಿಸಿದರು, ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು, ಸಿದ್ಧು ಪಾಟೀಲ ವಂದಿಸಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.