ಮಠಗಳು ಧಾರ್ಮಿಕ ಸಂಸ್ಕಾರ ಕೇಂದ್ರಗಳು


Team Udayavani, Apr 12, 2017, 3:36 PM IST

gul4.jpg

ಜೇವರ್ಗಿ: ದೇಶದಲ್ಲಿನ ಮಠ ಮಂದಿರಗಳು ಸಮಾಜದ ಸರ್ವ ವರ್ಗದ ಜನರಿಗೆ ಧಾರ್ಮಿಕ ಸಂಸ್ಕಾರ ನೀಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾಂದರು ನುಡಿದರು. 

ತಾಲೂಕಿನ ಯಡ್ರಾಮಿ ಹತ್ತಿರದ ರೇಣುಕಗಿರಿಯಲ್ಲಿ ಶಾಖಾಮಠದ ಮೂರನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿರುವ ಸಿದ್ಧಾಂತ ಶಿಖಾಮಣಿ ಪ್ರವಚನ, ಧರ್ಮಸಭೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸನಾತನ ವೀರಶೈವ ಧರ್ಮದಲ್ಲಿ ಅನನ್ಯ ಮತ್ತು ಅಸಾಧಾರಣ ಮಹತ್ವವಿದೆ. 84 ಲಕ್ಷ ಜೀವರಾಶಿಗಳಲ್ಲಿ ಮನುಷ್ಯನಿಗೆ ಮಾತ್ರ ಸಂಸ್ಕಾರ ನೀಡಲು ಸಾಧ್ಯವಾಗುತ್ತದೆ. ಸಂಸ್ಕಾರದ ಬಲದಿಂದ ಮನುಷ್ಯ ಮಹಾದೇವನಾಗುತ್ತಾನೆ. ಗುರುವೇ ಇರದಿದ್ದರೆ ಮನುಷ್ಯ ಪಶುವಿನಂತೆ ಬಾಳಬೇಕಾಗಿತ್ತು.

ಮನುಷ್ಯನನ್ನು ಮಾನವನನ್ನಾಗಿ ರೂಪಿಸುವ ಜವಾಬ್ದಾರಿ ಮಠ, ಗುರುಗಳ ಮೇಲಿದೆ ಎಂದರು. ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ| ಅಜಯಸಿಂಗ್‌, ಮಲ್ಲಾಬಾದ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು.

ರೇಣುಕಗಿರಿಗೆ ಬರುವ ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸಲು ಯಾತ್ರಿಕ ನಿವಾಸ ನಿರ್ಮಾಣಕ್ಕೆ 25 ಲಕ್ಷ ರೂ.ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿ, ಮಲ್ಲಾಬಾದ ಏತನೀರಾವರಿ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದರು.

ಆಲೂರ-ಕಾಸರಭೋಸಗಾದ ಕೆಂಚವೃಷಬೇಂದ್ರ ಶಿವಾಚಾರ್ಯರು, ಬಾಲತಪಸ್ವಿ ಸಾಂಬ ಶಿವಯೋಗಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ನಿಡಗುಂದದ ಕರುಣೇಶ್ವರ ಸ್ವಾಮೀಜಿ, ಹಿಪ್ಪರಗಾ ಎಸ್‌.ಎನ್‌ ಸಿದ್ಧಲಿಂಗ ಶಿವಾಚಾರ್ಯರು, ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ,

ಮಲ್ಲನಗೌಡ ಪಾಟೀಲ ರದ್ದೇವಾಡಗಿ, ರಾಜಶೇಖರ ಸೀರಿ, ಗೊಲ್ಲಾಳಪ್ಪಗೌಡ ಮಾಗಣಗೇರಾ, ನಿಂಗನಗೌಡ ಪೊಲೀಸ್‌ ಪಾಟೀಲ, ವಿಶ್ವನಾಥ ಸಾಹು ಆಲೂರ, ತಾಪಂ ಸದಸ್ಯ ಪ್ರಶಾಂತ ರಾಠೊಡ, ದೇವಿಂದ್ರಪ್ಪ ಸರಕಾರ, ನಿಂಗನಗೌಡ ಸೋಮಪ್ಪಗೋಳ, ಚಂದ್ರಶೇಖರ ಪುರಾಣಿಕ, ಕೆಂಚಪ್ಪಗೌಡ ಬಿರಾದಾರ, ಹಯ್ನಾಳಪ್ಪ ಗಂಗಾಕರ,

ಮಲ್ಲಿಕಾರ್ಜುನ ಹಲಕರ್ಟಿ, ಶರಣಬಸಪ್ಪ ಪಟ್ಟಣಶೆಟ್ಟಿ ಆಗಮಿಸಿದ್ದರು. ಗುರುಕುಲ ಸಾಧಕರಿಂದ ವೇದಘೋಷ ನಡೆಯಿತು, ಚಂದ್ರಶೇಖರ ಪುರಾಣಿಕ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿವುಕುಮಾರ ಪಾಟೀಲ ಸ್ವಾಗತಿಸಿದರು, ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು, ಸಿದ್ಧು ಪಾಟೀಲ ವಂದಿಸಿದರು.   

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.