ಉಪ್ಪಿನಂಗಡಿ: ನೀರು ದುರ್ಬಳಕೆ ತಡೆಗೆ ಕಾರ್ಯಾಚರಣೆ


Team Udayavani, Apr 13, 2017, 2:01 PM IST

124upg3.jpg

ಉಪ್ಪಿನಂಗಡಿ: ಗ್ರಾ.ಪಂ.ನ ಕುಡಿಯುವ ನೀರನ್ನು ದುರ್ಬಳಕೆ ಮಾಡು ವವರನ್ನು ಪತ್ತೆ ಹಚ್ಚಲು ಗುರುವಾರದಿಂದ ವಾರ್ಡ್‌ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಗ್ರಾ.ಪಂ.ನ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ತೀರ್ಮಾನಿಸಿದೆ.

ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಕಚೇರಿಯಲ್ಲಿ ಬುಧವಾರ ನಡೆದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ., ಕೆಲವರು ಪಂಚಾಯತ್‌ನ ಕುಡಿಯುವ ನೀರನ್ನು ಕೃಷಿ ಕಾರ್ಯಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಇನ್ನು ಕೆಲವು ಕಡೆ ಕುಡಿಯುವ ನೀರು ಅನಗತ್ಯವಾಗಿ ಪೋಲಾಗುತ್ತಿದೆ. ಬೇಸಗೆಯಲ್ಲಿ ಕುಡಿಯುವ ನೀರಿಗೆ ಕೊರತೆಯಿದ್ದು, ಆದ್ದರಿಂದ ನೀರನ್ನು ನಾಜೂಕಾಗಿ ಬಳಸಬೇಕು. ಅಗತ್ಯ ಕೆಲಸಗಳನ್ನು ಬಿಟ್ಟು ಇನ್ನಿತರ ಕಾರ್ಯಗಳಿಗೆ ಕುಡಿಯುವ ನೀರನ್ನು  ದುರ್ಬಳಕೆಯಾಗಬಾರದು. ಇದನ್ನು ತಡೆಯುವ ನಿಟ್ಟಿನಲ್ಲಿ ಗ್ರಾ.ಪಂ.ನ ಪ್ರತಿ ವಾರ್ಡ್‌ನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು ಕಾರ್ಯಾಚರಣೆ ನಡೆಸಲಿದ್ದಾರೆ. ನೀರು ದುರ್ಬಳಕೆಯಾಗುತ್ತಿರುವುದು ಕಂಡು ಬಂದಲ್ಲಿ. ಅಂಥವರ ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಮತ್ತೆ ಮಳೆಗಾಲ ಪ್ರಾರಂಭವಾಗುವವರೆಗೆ ಕುಡಿಯುವ ನೀರಿನ ಸಂಪರ್ಕ ನೀಡುವು ದಿಲ್ಲ. ನಾಳೆಯಿಂದಲೇ ಈ ಕಾರ್ಯಾಚರಣೆ ಆರಂಭವಾಗಲಿದೆ ಎಂದರು.

ಸಮಿತಿಯ ಕೋಶಾಧಿಕಾರಿ ಉಷಾ ಚಂದ್ರ ಮುಳಿಯ ಮಾತನಾಡಿ, ನೇತ್ರಾವತಿ ನದಿಯಲ್ಲಿ ಬಟ್ಟೆ ಒಗೆಯುವುದು, ವಾಹನಗಳನ್ನು ತೊಳೆಯುವುದು ಕಂಡು ಬರುತ್ತಿದೆ. ಇದರಿಂದಾಗಿ ಕುಡಿಯುವ ನೀರು ಮಲಿನಗೊಳ್ಳುತ್ತಿದೆ ಎಂದು ದೂರಿದರು.
 
ಅಧಿಕಾರಿ, ಸಿಬಂದಿ ತರಾಟೆಗೆ
ಸಭೆಗಳಲ್ಲಿ ನಿರ್ಣಯವಾದರೂ ಆ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶೀಘ್ರ ನಿರ್ಣಯ ಅನುಷ್ಠಾನವಾಗುವಂತೆ ಮಾಡುತ್ತಿಲ್ಲ ಎಂದು ಪಂಚಾಯತ್‌ನ ಅಧಿಕಾರಿಗಳನ್ನು ಪಂಚಾಯತ್‌ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಈ ಸಂದರ್ಭ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಪಂಚಾಯತ್‌ ರಾಜ್‌ ಕಾಯ್ದೆಯನ್ನು ಉಲ್ಲಂಘಿಸಿದಂತೆ ಸೂಚಿಸಿದರು. 

ಸಮಿತಿ ಸದಸ್ಯ ಮುಹಮ್ಮದ್‌ ಕೆಂಪಿ ಮಾತನಾಡಿ, ಬಸ್‌ ನಿಲ್ದಾಣದ ಬಳಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದರಿಂದ ನದಿಗೆ ಮಲಿನ ನೀರು ಬಿಡುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜ್ಯೂನಿಯರ್‌ ಕಾಲೇಜಿನಿಂದ ಹಿಡಿದು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದವರೆಗೆ ಅಲ್ಲಲ್ಲಿ ಮಲೀನ ನೀರು ನದಿಯನ್ನು ಸೇರುತ್ತಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳ ಬೇಕೆಂಬ ಒತ್ತಾಯ ಕೇಳಿಬಂತು. 

ನದಿ ಮಲಿನಗೊಳಿಸದಂತೆ ಸೂಚಿಸುವ ನಾಮಫಲಕ
ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಮಾತನಾಡಿ, ನದಿ ನೀರನ್ನು ಮಲಿನಗೊಳಿಸುತ್ತಿರುವವ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಫ‌ಲಕವನ್ನು ನದಿ ಬದಿ ಅಲ್ಲಲ್ಲಿ ಅಳವಡಿಸುವಂತೆ ಪಿಡಿಒಗೆ ಸೂಚಿಸಿದರು. ನದಿ ತೀರದ ಬಳಿ ಡೇರೆ ಹಾಕಿಕೊಂಡು ವಾಸವಾಗಿರುವ ಕಾರ್ಮಿಕರಲ್ಲಿಗೆ ತೆರಳಿ ಅವರಿಗೆ ಎಚ್ಚರಿಕೆ ನೀಡಲು ನಿರ್ಣಯ ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.