ರಿಬರ್ಥ್ ಫೌಂಡೇಶನ್‌: ಗ್ರೀನ್‌ ಕಾರಿಡಾರ್‌ ಶಾರ್ಟ್‌ ಫಿಲ್ಮ್ ಸ್ಪರ್ಧೆ


Team Udayavani, Apr 13, 2017, 4:57 PM IST

12-Mum07a.jpg

ಪುಣೆ: ಅವಯವ ದಾನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪುಣೆಯ ಸ್ವಯಂಸೇವಾ ಸಂಸ್ಥೆ ರಿಬರ್ಥ್  ಫೌಂಡೇಶನ್‌ ವತಿಯಿಂದ ಗ್ರೀನ್‌  ಕಾರಿಡಾರ್‌ ಶಾರ್ಟ್‌ ಫಿಲ್ಮ್  ಸ್ಪರ್ಧೆಯನ್ನು ಆಯೋಜಿಸಲಾಗುವುದು. ಅಲ್ಲದೆ ಸುಮಾರು  ಮೂರು ಲಕ್ಷಕ್ಕಿಂತ ಹೆಚ್ಚು ಮೊತ್ತದ ಬಹುಮಾನವನ್ನು ಅತ್ಯುತ್ತಮ ಫಿಲ್ಮ್ಗಳಿಗೆ ನೀಡಲಾಗುವುದು. 5 ನಿಮಿಷಗಳ ಕಿರು ಚಿತ್ರವನ್ನು ತಯಾರಿಸಲು ಅವಕಾಶವಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು 500 ರೂ. ಗಳ  ಶುಲ್ಕವನ್ನು ನಿಗದಿಪಡಿಸಲಾಗಿದೆ. ಪ್ರಸಿದ್ಧ ಚಲನಚಿತ್ರ  ನಟ, ನಿರ್ದೇಶಕ ಸುಬೋಧ್‌ ಭಾವೆ, ರಾಷ್ಟ್ರೀಯ  ವಿಜೇತ ನಿರ್ದೇಶಕ ಉಮೇಶ್‌  ಕುಲಕರ್ಣಿ ಇವರು ಕಿರು ಚಿತ್ರದ ಪರಿವೀಕ್ಷಣೆ ನಡೆಸಿ ಆಯ್ಕೆಯನ್ನು ಮಾಡಲಿದ್ದಾರೆ. ಯಾವುದೇ ತಂತ್ರಜ್ಞಾನವನ್ನು ಉಪಯೋಗಿಸಿ  ಕಿರು ಚಿತ್ರ ತಯಾರಿಸಬಹುದಾಗಿದೆ. ಜೂ. 30ರೊಳಗೆ  ರೀಬರ್ಥ್ ಸಂಸ್ಥೆಗೆ  ಚಿತ್ರವನ್ನು ತಯಾರಿಸಿ ಸ್ಪರ್ಧೆಗೆ ನೀಡಬೇಕಾಗಿದೆ. ಜುಲೈ ಕೊನೆಗೆ ವಿಜೇತರನ್ನು ಆಯ್ಕೆ ಮಾಡಲಾಗುವುದು. ಅಂಗಾಂಗ ದಾನದ ಮಹತ್ವದ ಬಗ್ಗೆ ಸಾಮಾಜಿಕ ಜನಜಾಗೃತಿ ಮೂಡಿಸುವಲ್ಲಿ ಈ ಹೆಜ್ಜೆ ಹೆಚ್ಚು ಪರಿಣಾಮಕಾರಿಯಾಗಬಲ್ಲುದೆಂಬ ವಿಶ್ವಾಸ ನಮ್ಮದಾಗಿದ್ದು ಮುಖ್ಯವಾಗಿ ಮಾಧ್ಯಮ ರಂಗ, ಸಾಮಾಜಿಕ ಸಂಸ್ಥೆಗಳು ಇದಕ್ಕೆ ಹೆಚ್ಚು ಮಹತ್ವ ನೀಡಿ ಪ್ರೋತ್ಸಾಹಿಸುವಂತೆ ರೀಬರ್ಥ್ ಫೌಂಡೇಶನ್‌ ಪುಣೆಯ ಅಧ್ಯಕ್ಷ ರಾಜೇಶ್‌ ಆರ್‌. ಶೆಟ್ಟಿ ನುಡಿದರು.

ಎ. 11ರಂದು ನಗರದ ಸಿಂಹಘಡ್‌ರೋಡ್‌ನ‌ಲ್ಲಿರುವ ನೈವೇದ್ಯಂ ಹೊಟೇಲ್‌ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,  ಪುಣೆಯ ವಿವಿಧ ಆಸ್ಪತ್ರೆಗಳು, ನುರಿತ ತಜ್ಞ ವೈದ್ಯರು, ಪೊಲೀಸ್‌ ವಿಭಾಗ, ಇವುಗಳು ಈಗಾಗಲೇ ಅಂಗಾಂಗ ದಾನಕ್ಕೆ ಸಂಬಂಧಿಸಿದ  ಗ್ರೀನ್‌  ಕಾರಿಡಾರ್‌  ವ್ಯವಸ್ಥೆಗೆ ಕೇವಲ ಒಂದು ಕರೆಯನ್ನು ಸ್ವೀಕರಿಸಿ ತ್ವರಿತಗತಿಯಲ್ಲಿ  ಕಾರ್ಯವನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿಯೇ ಅತೀ ಹೆಚ್ಚು ಅಂಗಾಂಗದಾನ ಪುಣೆಯಲ್ಲಿ ನಡೆದಿದ್ದು ಇನ್ನೂ ಹೆಚ್ಚಿನ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದರು.

ಉಪಸ್ಥಿತರಿದ್ದ ರಾಜ್ಯದ ಸಾಂಸ್ಕೃತಿಕ ಖಾತೆಯ ಸಲಹೆಗಾರರಾದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮಿಲಿಂದ್‌  ಲೇಲೆ ಮಾತನಾಡಿ,  ಮುಖ್ಯವಾಗಿ ಯುವ ಪೀಳಿಗೆ, ವಿದ್ಯಾರ್ಥಿ ವರ್ಗಗಳಿಗೆ ಹೆಚ್ಚಿನ ಜಾಗೃತಿ ರವಾನಿಸಬೇಕಾಗಿದೆ. ಕಿರು ಚಿತ್ರದ ಮೂಲಕ ಯುವ ವರ್ಗದಿಂದ ಹೆಚ್ಚಿನ ಪ್ರೋತ್ಸಾಹವನ್ನು  ನಿರೀಕ್ಷಿಸುತ್ತೇವೆ. ಮಾಧ್ಯಮ ರಂಗವೂ ನಮ್ಮ ಈ ಅಭಿಯಾನಕ್ಕೆ ಕೈಜೋಡಿಸಬೇಕಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರದ ಅವಯವದಾನ ಕಕ್ಷೆಯ ಸಮನ್ವಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಆರತಿ ಗೋಖಲೆ ಉಪಸ್ಥಿತರಿದ್ದು ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು. ಫೌಂಡೇಶನ್‌ ಪ್ರಾಜೆಕ್ಟ್ ಹೆಡ್‌ ಗಣೇಶ್‌ ಬಾಕಳೆ, ರಾಷ್ಟ್ರೀಯ ಪ್ರಶಸ್ತಿ ವಿಜೇತ ದಿಗªರ್ಶಕ ಉಮೇಶ್‌ ಕುಲಕರ್ಣಿ ಉಪಸ್ಥಿತರಿದ್ದರು. ಈ ಸಂದರ್ಭ ಶಾರ್ಟ್‌ ಫಿಲ್ಮ್ ಸ್ಪರ್ಧೆಯ ಲೋಗೋ ಬಿಡುಗಡೆಗೊಳಿಸಲಾಯಿತು.

ಪುಣೆಯಲ್ಲಿರುವ ವಿವಿಧ ಕ್ಷೇತ್ರದ ಉದ್ಯಮಿಗಳ ಬಳಗವೊಂದು ಸಾಮಾಜಿಕ ಕಾಳಜಿಯೊಂದಿಗೆ ಎರಡು ವರ್ಷಗಳ ಹಿಂದೆ ರೀಬರ್ಥ್ ಫೌಂಡೇಶನ್‌ ಅನ್ನು  ಸ್ಥಾಪಿಸಿತು. ಪುಣೆಯ ವಿವಿಧ ಕ್ಷೇತ್ರದಲ್ಲಿರುವ ವ್ಯಕ್ತಿಗಳು ಈ ಫೌಂಡೇಶನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಎರಡು ವರ್ಷಗಳಿಂದ ನಿರಂತರವಾಗಿ ಪುಣೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ  ಜನಜಾಗೃತಿ ಮೂಡಿಸುವ ಕಾರ್ಯವನ್ನು ನಿಸ್ವಾರ್ಥ  ಭಾವದಿಂದ ಮಾಡುತ್ತಾ  ಬಂದಿದೆ. ಪುಣೆ  ರೀಬರ್ಥ್ ಫೌಂಡೇಶನ್‌  ಆರಂಭಿಸಿದ ಟೋಲ್‌ ಫ್ರೀ ನಂಬರ್‌ 18002747444 ನ್ನು ರಾಜ್ಯ ಸರಕಾರವು ಅಧಿಕೃತ ಅಂಗಾಂಗ ದಾನದ ಟೋಲ… ಫ್ರೀ ನಂಬರ್‌ ಆಗಿ  ನೋಂದಣಿಗೊಳಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.