ಸುಗಮ ಸಂಗೀತಕ್ಕೆ ಸಿಗದ ಪ್ರೋತ್ಸಾಹ


Team Udayavani, Apr 14, 2017, 1:25 PM IST

dvg7.jpg

ದಾವಣಗೆರೆ: ಸರ್ಕಾರ ಆದಿಯಾಗಿ ಯಾವ ಕಡೆಯಿಂದಲೂ ಸುಗಮ ಸಂಗೀತಕ್ಕೆ ಹೆಚ್ಚಿನ ಪ್ರೋತ್ಸಾಹ, ಮನ್ನಣೆ ದೊರೆಯುತ್ತಿಲ್ಲ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್‌ ಅಧ್ಯಕ್ಷ ಡಾ| ಕಿಕ್ಕೇರಿ ಕೃಷ್ಣಮೂರ್ತಿ ವಿಷಾದ ವ್ಯಕ್ತಪಡಿಸಿದ್ದಾರೆ. 

ಗುರುವಾರ ಸುಗಮ ಸಂಗೀತ ಪರಿಷತ್‌, ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಂಡ ಗೀತಗಾಯನ ತರಬೇಶಿ ಶಿಬಿರ ಸಂಗೀತ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಹಿತ್ಯ ಸಮ್ಮೇಳನ ಒಳಗೊಂಡಂತೆ ಅನೇಕ  ಕಾರ್ಯಕ್ರಮದಲ್ಲಿ ಸುಗಮ ಸಂಗೀತಕ್ಕೆ ಹೆಚ್ಚಿನಪ್ರಾಧಾನ್ಯತೆ, ಅವಕಾಶ ನೀಡಲಾಗುತ್ತಿಲ್ಲ. ಅವಕಾಶ  ಸಿಗದೆ ಸಾವಿರಾರು ಪ್ರತಿಭಾವಂತರ ಪ್ರತಿಭೆ ನಾಲ್ಕು ಮೂಲೆಯ ಮಧ್ಯೆದಲ್ಲಿಯೇ ಮುರುಟಿ ಹೋಗುತ್ತಿದೆ ಎಂದು ಬೇಸರಿಸಿದರು. 

ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುವ ತನಕ ಕನ್ನಡ ಎನ್ನುತ್ತಾರೆ ಅಧಿಕಾರದ ಕುರ್ಚಿ ಸಿಕ್ಕ ತಕ್ಷಣ ಕನ್ನಡವನ್ನೇ  ಮರೆಯುತ್ತಾರೆ. ಕನ್ನಡದ ಕಾರ್ಯಕ್ರಮಕ್ಕೆ ಹೇಮಾಮಾಲಿನಿ, ಸೋನು ನಿಗಮ್‌ ಅಂತಹವರನ್ನು ಲಕ್ಷಗಟ್ಟಲೆ ಹಣ ನೀಡಿ ಕರೆಸಲಾಗುತ್ತದೆ. ಸುಗಮ ಸಂಗೀತ ಲೋಕದ ದಿಗ್ಗಜರನ್ನೇ ಕರೆಸಲು ಮೀನಾ ಮೇಷ ಎಣಿಸಲಾಗುತ್ತದೆ.

ಕರೆಸಿದರೂ ಕೊಡುವ ಗೌರವಧನದ ಬಗ್ಗೆ ಹೇಳುವಂತೆಯೇ ಇಲ್ಲ. ಅಧಿಕಾರಿ ವರ್ಗದ ಅಹಂನ ಪ್ರತೀಕವಾಗಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡನಾಡಿನ ಕಲಾವಿದರ ಅಪಮಾನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ, ಅಧಿಕಾರಿಗಳು ನೆರವು ನೀಡಲಿ ಬಿಡಲಿ ನಾವೆಲ್ಲರೂ ಒಗ್ಗೂಡಿ ಸುಗಮ ಸಂಗೀತ ಪರಿಷತ್‌ ಬೆಳೆಸಬೇಕು.

ಪ್ರತಿ ಜಿಲ್ಲೆಯಲ್ಲಿ 1 ಸಾವಿರವಾದರೂ ಸದಸ್ಯತ್ವ ಆಗಬೇಕು. ಅದಕ್ಕಾಗಿಯೇ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಿಸಲಾಗುವುದು. 30 ಜಿಲ್ಲೆಯ 30 ಸಾವಿರ ಜನರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಸಿದರೆ ಎಲ್ಲರೂ ಬರುತ್ತಾರೆ. ಬೇಕಾದ ನೆರವು ನೀಡುತ್ತಾರೆ.

ವಿಶ್ವ ಸುಗಮ ಸಂಗೀತ ಸಮ್ಮೇಳನ, ಕನ್ನಡೋತ್ಸವದ ವಾತಾವರಣ ನಿರ್ಮಾಣದ ಜೊತೆಗೆ ಮಾದರಿ ಪರಿಷತ್‌, ಅಕಾಡೆಮಿ ಆಗಲು ಕನ್ನಡಿಗರು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಪರಿಷತ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ ಮಾತನಾಡಿ, ನಾಡಿನ ಪ್ರಖ್ಯಾತ ಕವಿಗಳ ಗೀತೆಗಳನ್ನು ಕನ್ನಡಿಗರ ಮನ,

ಹೃದಯಕ್ಕೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ಹೊಂದಿರುವ ಸುಗಮ ಸಂಗೀತ ಪ್ರಾಕಾರಕ್ಕೆ ಅಕಾಡೆಮಿ ಪ್ರಾರಂಭಿಸಿದಲ್ಲಿ ಸುಗಮ ಸಂಗೀತ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆಯುತ್ತದೆ. ಮುಂಚೂಣಿಗೆ ಬರುತ್ತದೆ. ಸರ್ಕಾರ ಅಕಾಡೆಮಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. 

ಶಿಬಿರ ಉದ್ಘಾಟಿಸಿದ ನಾಡೋಜ ಡಾ| ಬಿ.ಕೆ. ಸುಮಿತ್ರಾ ಮಾತನಾಡಿ, ನಾವೆಲ್ಲ ಸಣ್ಣವರಿದ್ದಾಗ ಈ ರೀತಿಯ ತರಬೇತಿ, ಶಿಬಿರ ಯಾವುದೂ ಇರಲಿಲ್ಲ. ನಾವಾಗಿಯೇ ಕಲಿಯಬೇಕಿತ್ತು. ಈಗ ಇರುವ ಸಾಕಷ್ಟು ಅವಕಾಶ ಸದುಪಯೋಗಪಡಿಸಿಕೊಂಡು ಚೆನ್ನಾಗಿ ಕಲಿತು, ಒಳ್ಳೆಯ ಗಾಯಕರಾಗಿ ಹೊರ ಹೊಮ್ಮಬೇಕು ಎಂದು ಆಶಿಸಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ವಾಮದೇವಪ್ಪ, ಸಂಗೀತ ನಿರ್ದೇಶಕ ಬಿ.ವಿ. ಶ್ರೀನಿವಾಸ್‌, ರೇಖಾ ಓಂಕಾರಪ್ಪ, ವೀಣಾ ಕೃಷ್ಣಮೂರ್ತಿ ಇತರರು ಇದ್ದರು. ಹೇಮಂತ್‌ ಕುಮಾರ್‌ ಪ್ರಾರ್ಥಿಸಿದರು. ಸಾಲಿಗ್ರಾಮ ಗಣೇಶ ಶೆಣೈ ನಿರೂಪಿಸಿದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.