ಸಾಕಾರದ ನಿರೀಕ್ಷೆಯಲ್ಲಿ  ಮೇಲ್ದರ್ಜೆ ಬೇಡಿಕೆ


Team Udayavani, Apr 14, 2017, 2:42 PM IST

1304mlr31-lady-goshen-hospi.jpg

ಮಹಾನಗರ: ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲ ಸುಮಾರು 6 ಜಿಲ್ಲೆಗಳ ಬಡ ರೋಗಿಗಳ ಪಾಲಿಗೆ ಆಶಾಕಿರಣವಾದ ಲೇಡಿಗೋಶನ್‌ ಆಸ್ಪತ್ರೆಯನ್ನು 500 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಪೂರಕವಾಗಿ ಇತರ ಸೌಲಭ್ಯಗಳು ನಿರ್ಮಾಣವಾಗುತ್ತಿದ್ದು, ಸರಕಾರ ಒಪ್ಪಿಗೆ ನೀಡಬೇಕಿದೆ. 

ಕಟ್ಟಡ ಸಾಮರ್ಥ್ಯ ಹೆಚ್ಚಳ ಸಹಿತ ವಿವಿಧ ಸೌಲಭ್ಯಗಳನ್ನು ಒದಗಿಸ ಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರ 500 ಹಾಸಿಗೆ ಸಾಮರ್ಥ್ಯಕ್ಕೇರಿಸಿ ಒಪ್ಪಿಗೆ ನೀಡಿದರೆ ನೂರಾರು ಜನರಿಗೆ ಅನುಕೂಲವಾಗಲಿದೆ. ಆಸ್ಪತ್ರೆಯಲ್ಲಿ  ಪ್ರಸ್ತುತ 272 ಹಾಸಿಗೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಂದ  ವಾರ್ಷಿಕ 50 ಸಾವಿರಕ್ಕಿಂತಲೂ ಅಧಿಕ ಹೊರ ರೋಗಿಗಳು, ಸುಮಾರು 15 ಸಾವಿರ ಒಳರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. 

ಸರಕಾರಿ ಆಸ್ಪತ್ರೆಯಾದರೂ ತಜ್ಞ ವೈದ್ಯರು, ಉತ್ತಮ ಸೌಲಭ್ಯ ಇರುವು ದರಿಂದ ಬಡ ವರ್ಗದ ಮಹಿಳೆಯರು ಇಲ್ಲಿಗೆ ಚಿಕಿತ್ಸೆಗೆಂದು ಬರುತ್ತಿದ್ದು, ವಾರ್ಷಿಕ 7 ಸಾವಿರದಷ್ಟು ಹೆರಿಗೆಗಳಾಗುತ್ತಿವೆ. ಆಸ್ಪತ್ರೆಯ ಆವರಣದಲ್ಲೇ  ರೆಡ್‌ಕ್ರಾಸ್‌ ಸಂಸ್ಥೆಯ ಬ್ಲಿಡ್‌ ಬ್ಯಾಂಕ್‌ ಇದೆ. 

ಆಸ್ಪತ್ರೆಗೆ  ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಹಾಸಿಗೆ ಸಾಮರ್ಥ್ಯವನ್ನು ಏರಿಸಬೇಕೆಂಬುದು ನಾಗರಿಕರ ಬೇಡಿಕೆ. ಈಗ ರೋಗಿಗಳ ಸಂಖ್ಯೆ ಜಾಸ್ತಿಯಾ ದಾಗ ಹಾಸಿಗೆಗಳನ್ನು ಹೊಂದಿಸುವುದೇ ದೊಡ್ಡ ಸಮಸ್ಯೆ. ಒಳರೋಗಿ ಸಾಮರ್ಥ್ಯ ವನ್ನು ಕನಿಷ್ಠ 500ಕ್ಕಾದರೂ ಏರಿಸಿದರೆ ಈ ಸಮಸ್ಯೆಗೆ ಕೊಂಚ ಪರಿಹಾರ ಸಿಗಲಿದೆ. ಜತೆಗೆ ಹಲವಾರು ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದೆ.

60 ಹಾಸಿಗೆಗಳ ಎಂಸಿಎಚ್‌ ಬ್ಲಾಕ್‌
ಪ್ರಸ್ತುತ  ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಎನ್‌ಆರ್‌ಎಚ್‌ಎಂ ಯೋಜನೆಯಡಿ ನಿರ್ಮಾಣವಾ ಗುತ್ತಿರುವ 10.46 ಕೋ.ರೂ. ವೆಚ್ಚದ‌ ಎಂಸಿಎಚ್‌ ( ತಾಯಿ ಮತ್ತು ಮಗು ಆರೋಗ್ಯ ) ವಿಭಾಗ   60 ಹಾಸಿಗೆಗಳ ಸಾಮರ್ಥ್ಯವನ್ನು  ಹೊಂದಿದೆ. ಸೆಲ್ಲರ್‌, ನೆಲಮಹಡಿ ಹಾಗೂ 1ನೇ ಮಹಡಿ ಯನ್ನು  ಒಳಗೊಂಡಿದ್ದು  ಒಟ್ಟು 3,989 ಚ.ಮಿ. ವಿಸ್ತೀರ್ಣ ಹೊಂದಿದೆ. ಸೆಲ್ಲರ್‌ನಲ್ಲಿ  ಆಡುಗೆ ಕೋಣೆ , ಔಷಧ ಮಳಿಗೆ ಇರಲಿದ್ದು, 756 ಚದರ ಮೀ. ವಿಸ್ತೀರ್ಣವಿದೆ.  ನೆಲಮಹಡಿ ಹಾಗೂ  ಮೊದಲ ಮಹಡಿಯಲ್ಲಿ  ವಾರ್ಡ್‌, ಒಪಿಡಿ,  ಶಸ್ತ್ರಚಿಕಿತ್ಸಾ ಕೊಠಡಿ,  ಕನ್ಸಲ್ಟೆನ್ಸಿ ವಿಭಾಗಗಳಿರುತ್ತವೆ. ಮುಂದಿನ ವರ್ಷ ಸಾರ್ವಜನಿಕರಿಗೆ ಈ ವಿಭಾಗ ಲಭ್ಯವಾಗುವ ಸಾಧ್ಯತೆಯಿದೆ. ಇದು ಬಳಕೆಗೆ ನಿಲುಕಿದರೆ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಲೇಡಿಗೋಷನ್‌ ಅನ್ನು ಅಶ್ರಯಿಸುವವರು ಕಡಿಮೆಯಾಗಬಹುದು. 

ಹೊಸ ಕಟ್ಟಡ 3 ತಿಂಗಳಲ್ಲಿ ಕಾರ್ಯಾರಂಭ ನಿರೀಕ್ಷೆ 
ಒಎನ್‌ಜಿಸಿ- ಎಂಆರ್‌ಪಿಎಲ್‌ ನೆರವಿ ನೊಂದಿಗೆ 21.70 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ  ಹೊಸ ಕಟ್ಟಡ 3 ತಿಂಗಳೊಳಗೆ ಕಾರ್ಯಾರಂಭ ಮಾಡುವ ನಿರೀಕ್ಷೆ  ಇದೆ. 1.30 ಲಕ್ಷ ಚದರ ಅಡಿ ವಿಸ್ತೀರ್ಣದ 5 ಮಹಡಿಗಳ  ಈ  ಕಟ್ಟಡದಲ್ಲಿ  226 ಹಾಸಿಗೆಗಳು, ಅತ್ಯಾಧುನಿಕ ಸೌಲಭ್ಯಗಳನ್ನು   ಒಳಗೊಂಡಿದೆ. ಸೌಲಭ್ಯ ಹಾಗೂ ಸಲಕರಣೆಗಳ ಅಳವಡಿಕೆಗೆ ರಾಜ್ಯ ಸರಕಾರದಿಂದ  ಈಗಾಗಲೇ 10 ಕೋ.ರೂ. ಬಿಡುಗಡೆಯಾಗಿದೆ. ಇದು ಉದ್ಘಾಟನೆಯಾದ ಬಳಿಕ  ಈಗ ಇರುವ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತಿ ರುವ  ಬಹುತೇಕ ವಿಭಾಗಗಳು ಇಲ್ಲಿಗೆ ವರ್ಗಾವಣೆಯಾಗಲಿವೆ.

500 ಬೆಡ್‌ಗೆ ಸ್ಥಳಾವಕಾಶ ಸಾಧ್ಯ
ಈಗ ಇರುವ  ಹಳೆ ಕಟ್ಟಡದಲ್ಲಿ ಮತ್ತು  ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ  500 ಹಾಸಿಗೆಗಳನ್ನು ಅಳವಡಿಸಲು ಸಾಧ್ಯವಿದೆ. ಹೊಸ ಕಟ್ಟಡದಲ್ಲಿ ಅತ್ಯಾಧುನಿಕ ಸೌಲಭ್ಯಗಳೂ ಲಭ್ಯವಾಗಲಿವೆ. ಅದುದರಿಂದ 500 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು  ಸರಕಾರಕ್ಕೆ  ಹೆಚ್ಚಿನ ಹೊರೆಯಾಗದು. ಈ  ನಿಟ್ಟಿನಲ್ಲಿ  ಸರಕಾರದಿಂದ ಮಂಜೂರಾತಿ ಪಡೆಯುವ ನಿಟ್ಟಿನಲ್ಲಿ ಪೂರಕ ಕ್ರಮಗಳು ಅವಶ್ಯವಿದೆ.  

– ಕೇಶವ ಕುಂದರ್‌ 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.