ಎ ಪಟ್ಟಿಯ 911 ಫ‌ಲಾನುಭವಿಗಳಿಗೆ ನಿವೇಶನ: ಸಚಿವ ಪ್ರಮೋದ್‌ ಮಧ್ವರಾಜ್‌


Team Udayavani, Apr 14, 2017, 2:58 PM IST

130417Astro02.jpg

ಉಡುಪಿ: ನಿವೇಶನ ರಹಿತರಿಗೆ ನಿವೇಶನ ನೀಡುವ ಯೋಜನೆಗೆ ಚುರುಕು ಮುಟ್ಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಇನ್ನು 20 ದಿನಗಳೊಳಗೆ ಎ ಪಟ್ಟಿಯಲ್ಲಿ ಬರುವ 911 ಫ‌ಲಾನುಭವಿಗಳಿಗೆ ನಿವೇಶನ ನೀಡುವ ಬಗ್ಗೆ ಪತ್ರಗಳು ಸಿದ್ಧವಾಗಬೇಕೆಂದು ಆದೇಶಿಸಿದರು.

ಅವರು ಎ. 13ರಂದು ಉಡುಪಿ ತಾ.ಪಂ. ಸಭೆಯಲ್ಲಿ ಪಿಡಿಒ ಗಳೊಂದಿಗೆ ಜರಗಿದ ಸಭೆಯಲ್ಲಿ ಮಾತನಾಡಿ, ನಗರಸಭೆಯಲ್ಲಿ 595 ಮತ್ತು ಉಳಿದೆಡೆ 316 ಸಂತ್ರಸ್ತರು ನಿವೇಶನ ರಹಿತರೆಂದು ಗುರುತಿಸಲಾಗಿದೆ. ಈ ಬಗ್ಗೆ ಸಹಕಾರಿ ಸಂಘಗಳ ನಯನಾ ಅವರು ನೋಡೆಲ್‌ ಅಧಿಕಾರಿಯಾಗಿ ನೇಮಕಗೊಡಿರುತ್ತಾರೆ. ಮುಂದಿನ 20 ದಿನಗಳೊಳಗೆ ಸರಿಯಾದ ಸಂತ್ರಸ್ತರ ಪಟ್ಟಿಯನ್ನು ಹಾಗೂ ನಿವೇಶನದ ಬಗ್ಗೆ ಅಂತಿಮ ವರದಿ ನೀಡಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಲಾಟರಿ ಮೂಲಕ ನಿವೇಶನಗಳನ್ನು ಹಂಚುವಂತೆ ಸಚಿವರು ಸೂಚಿಸಿದರು.

ಗ್ರಾಮಾಂತರ  ಪ್ರದೇಶದವರಿಗೆ 30-40 ಹಾಗೂ ನಗರ ಪ್ರದೇಶದಲ್ಲಿರು ವವರಿಗೆ 20-30 ಅಳತೆಯ ನಿವೇ ಶನವನ್ನು ನೀಡಲಾಗುವುದು. ಈ ನಿವೇಶನಗಳು ಸರಕಾರದ ಎಲ್ಲ ಇಲಾಖೆಗಳಿಂದಲೂ ದೋಷಮುಕ್ತವೆಂದು ತಿಳಿದ ಬಳಿಕವಷ್ಟೇ ಅವರಿಗೆ ವಿತರಿಸಬೇಕೆಂದು ಸಚಿವರು ಮಾಹಿತಿ ನೀಡಿದರು.

ಗ್ರಾಮಾಂತರ ಪ್ರದೇಶದಲ್ಲಿಯೂ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ವಿತರಿಸುವ ಕಾರ್ಯ ಭರದಿಂದ ಸಾಗಿದೆ. ನೀರಿಗಾಗಿ ಬೇಡಿಕೆ ಬಂದಂತೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಂಬಂಧಕ ಪಟ್ಟ ಪಿಡಿಒಗಳ ಸಭೆಗೆ ಮಾಹಿತಿ ನೀಡಿದರು.

ನೀರು ಸರಬರಾಜು ಮಾಡುವ ಗುತ್ತಿಗೆದಾರರ ಬಿಲ್‌ ಅನ್ನು ಬಾಕಿ ಇಡಬಾರದೆಂದು ತಿಳಿಸಿದ ಸಚಿವರು ವಾರದೊಳಗೆ ಎಲ್ಲ ಬಿಲ್‌ಗ‌ಳು ಕ್ಲಿಯರ್‌ ಆಗಬೇಕೆಂದು ಆದೇಶಿಸಿದರು. 

ಉಡುಪಿ ನಗರದಲ್ಲಿ  ಪ್ರಸ್ತುತ 45 ರಿಂದ 50 ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ. ಇದೇ ರೀತಿ ಮೇ 30 ವರೆಗೂ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಸಾಧ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.

ಆಧಾರ್‌ ಲಿಂಕ್‌ ಮಾಡಿ: ಡಿಸಿ
ಕೇಂದ್ರ ಮತ್ತು ರಾಜ್ಯ ನಿವೃತ್ತ ನೌಕರರಿಗೆ ಪಿಂಚಣಿ ನೀಡುವ ಬಗ್ಗೆ ಆಧಾರ್‌ ಲಿಂಕ್‌ ಬಾಕಿ ಇದೆ. ಈ ಕಾರ್ಯವನ್ನು ಅತಿ ತುರ್ತಾಗಿ ಮಾಡಬೇಕು. ಇಲ್ಲವಾದಲ್ಲಿ ಅವರು ಪಿಂಚಣಿ ಪಡೆಯುವಲ್ಲಿ ಅನೇಕ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು. ಕುಂದಾಪುರ ಸಹಾಯಕ ಕಮಿಷನರ್‌ ಶಿಲ್ಪಾ ನಾಗ್‌, ಉಡುಪಿ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ, ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಸಿಇಓ ಶೇಷಪ್ಪ, ಉಡುಪಿ ತಹಶೀಲ್ದಾರ ಮಹೇಶ್ಚಂದ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.