ಈ ಬಾರಿ ಮಕ್ಕಳಿಗೆ ಶಾಲೆಯಲ್ಲೇ ಬೇಸಿಗೆಯ ಮೋಜು


Team Udayavani, Apr 15, 2017, 10:04 AM IST

Ban15041706Medn.jpg

ಬೆಂಗಳೂರು: ಬರಪೀಡಿತ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ಇರುತ್ತದೆ. ಜತೆಗೆ 150ಕ್ಕೂ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ, ಸ್ವಲ್ಪ ಓದು- ಸ್ವಲ್ಪ ಮೋಜು ವಿಶೇಷ ಕಾರ್ಯಕ್ರಮ ಸಹ ಸಾರ್ವಜನಿಕ ಶಿಕ್ಷಣ ಇಲಾಖೆ
ರೂಪಿಸಿದೆ.

ಬರ ಪೀಡಿತ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಬಿಸಿಯೂಟ ನೀಡುವ ವ್ಯವಸ್ಥೆ ಕಳೆದ ಕೆಲವು ವರ್ಷದಿಂದ ನಡೆದುಕೊಂಡು ಬರುತ್ತಿದೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಮಕ್ಕಳು ಶಾಲೆಗೆ ಬರುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು
ತರಬೇತಿ ಇಲಾಖೆ, ಸರ್ವಶಿಕ್ಷಾ ಅಭಿಯಾನ ಹಾಗೂ ಪ್ರಥಮ್‌ ಸಂಸ್ಥೆಯ ಜತೆ ಸೇರಿ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮ ಸಿದ್ಧಪಡಿಸಿದೆ.

6 ವಾರಗಳ ಕಾರ್ಯಕ್ರಮ: ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಕಲಿಕೆಯ ಜತೆಗೆ ಮೋಜು ನೀಡಬೇಕು ಎಂಬ ಉದ್ದೇಶದಿಂದ ಇದೇ ಮೊದಲ ಬಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮವನ್ನು ರೂಪಿಸಿದೆ. 6 ವಾರಗಳ ಕಾಲ ಈ ಶಿಬಿರ ನಡೆಯಲಿದೆ. ಇದು ನಿತ್ಯದ ಶಾಲಾ ಅವಧಿಯಂತೆ ಇರುತ್ತದೆ. ಬೆಳಗ್ಗೆಯಿಂದ ಸಂಜೆಯ ತನಕವೂ ಸರಳ ಕಲಿಕೆಯ ಜತೆಗೆ ಮೋಜಿನ ಆಟ, ಹರಟೆ ಇತ್ಯಾದಿ ಯೋಜಿಸಲಾಗಿದೆ. ಏ.17ರಿಂದ ಮೇ 28ರ ತನಕ ಸ್ವಲ್ಪ ಓದು-ಸ್ವಲ್ಪ ಮೋಜು ಬೇಸಿಗೆ ಶಿಬಿರ ನಡೆಯಲಿದೆ.

6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ: ಸರ್ಕಾರಿ ರಜಾ ದಿನ ಹೊರತುಪಡಿಸಿ ಮಧ್ಯಾಹ್ನದ ಬಿಸಿಯೂಟ 1ರಿಂದ 8ನೇ ತರಗತಿ ಮಕ್ಕಳಿಗೆ ನಿತ್ಯ ಇರುತ್ತದೆ. ಆದರೆ, ಸ್ವಲ್ಪ ಓದು-ಸ್ವಲ್ಪ ಮೋಜು ಬೇಸಿಗೆ ಶಿಬಿರ ಐದು ಮತ್ತು ಆರನೇ ತರಗತಿ ಪಾಸಾದ, ಅಂದರೆ, 2017-18ನೇ ಸಾಲಿನಲ್ಲಿ 6 ಮತ್ತು 7ನೇ ತರಗತಿಯಲ್ಲಿ ಅಭ್ಯಾಸ ಮಾಡಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಇರುತ್ತದೆ. ಬೇರೆ ಯಾವ ತರಗತಿಯ ಮಕ್ಕಳಿಗೂ ಇದು ಇರುವುದಿಲ್ಲ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡೈಸ್‌)ಯ ವರದಿ ಆಧರಿಸಿ 150ಕ್ಕಿಂತ ಅಧಿಕ ವಿದ್ಯಾರ್ಥಿಗಳು ಇರುವ 7049 ಶಾಲೆಗಳನ್ನು ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.

ಶಿಕ್ಷಕರಿಗೆ ತರಬೇತಿ: ಬೇಸಿಗೆ ರಜೆಯಲ್ಲಿ ನಡೆಸುವ ಬೇಸಿಗೆ ಶಿಬಿರಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಿರಿಕಿರಿ ಅಥವಾ ಒತ್ತಡ ಆಗದ ಮಾದರಿಯಲ್ಲಿ ಶಿಬಿರ ನಡೆಸಿಕೊಡಲು ಶಿಕ್ಷಕರಿಗೆ ತರಬೇತಿಯನ್ನು ನೀಡಲಾಗಿದೆ. 25 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕನನ್ನು ಗುರುತಿಸಲಾಗಿದೆ. ಸೇವಾ ನಿರತ ಶಿಕ್ಷಕರಿಗೆ ತರಬೇತಿ ನೀಡಲು ಈಗಾಗಲೇ ಬಿಡುಗಡೆಯಾಗಿರುವ ಸರ್ವಶಿಕ್ಷ ಅಭಿಯಾನದ ತರಬೇತಿ ಅನುದಾನದಲ್ಲಿ ಬೇಸಿಗೆ ಸಂಭ್ರಮಕ್ಕೆ ಆಯ್ಕೆಯಾದ ಶಿಕ್ಷಕರಿಗೆ ಒಂದು ದಿನದ ತರಬೇತಿ ನೀಡಲಾಗಿದೆ.

ವಿದ್ಯಾರ್ಥಿಗಳನ್ನು ಹುಡುಕುವುದೇ ಸವಾಲು 
ಸರ್ಕಾರಿ ಶಾಲೆಯ ಬೇಸಿಗೆ ರಜೆ ಈಗಾಗಲೇ ಆರಂಭವಾಗಿರುವುದರಿಂದ ಮಕ್ಕಳು ಸಂಬಂಧಿಕರ ಮನೆಗೆ ಹೋಗಿರುತ್ತಾರೆ ಅಥವಾ ಇನ್ಯಾವುದೇ ಬೇಸಿಗೆ ಶಿಬಿರಕ್ಕೆ ಸೇರಿಕೊಂಡಿರುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಯಾವುದೇ ಸೂಚನೆ ವಿದ್ಯಾರ್ಥಿಗಳಿಗೆ ನೀಡದೆ ಇರುವುದರಿಂದ ಶಿಬಿರದ ಮೇಲ್ವಿಚಾರಣೆ ಹೊಂದಿರುವ ಅಧಿಕಾರಿಗಳಿಗೆ ಮಕ್ಕಳನ್ನು ಹುಡುಕಿ ತರವುದೇ ದೊಡ್ಡ ಸವಾಲಾಗಿದೆ. ಮಕ್ಕಳನ್ನು ಶಿಬಿರಕ್ಕೆ ಕಳುಹಿಸಿಕೊಡುವ ಮಾದರಿಯಲ್ಲಿ ಸಾರ್ವಜನಿಕ ಪ್ರಚಾರ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.