ಬಿರುಸಿನ ರಾಜಕೀಯ ಚಟುವಟಿಕೆ ಶುರು: ಸೋನಿಯಾ ಜತೆ ಸಿಎಂ ಚರ್ಚೆ


Team Udayavani, Apr 15, 2017, 11:13 AM IST

cm-15.jpg

ಬೆಂಗಳೂರು: ಉಪ ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನ ತುಂಬುವ ಲೆಕ್ಕಾಚಾರ ಹಾಕಿದ್ದು, ಶನಿವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಯಿದೆ.

ಉಪ ಚುನಾವಣೆ ಫ‌ಲಿತಾಂಶ ಕುರಿತು ಮಾಹಿತಿ ನೀಡಲು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರಿಗೆ ಶನಿವಾರ ಸೋನಿಯಾಗಾಂಧಿ ಭೇಟಿಗೆ ಸಮಯ ನಿಗದಿಯಾಗಿದ್ದು, ಆಗ ಸಂಪುಟ ವಿಸ್ತರಣೆ ಹಾಗೂ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಮೂರು ನಾಮಕರಣ ಸದಸ್ಯರ ಸ್ಥಾನ ಭರ್ತಿ ಬಗ್ಗೆಯೂ
ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖವಾಗಿ ಖಾಲಿ ಉಳಿದಿರುವ ಎರಡು ಸಚಿವ ಸ್ಥಾನಗಳ ಪೈಕಿ ಕುರುಬ ಸಮುದಾಯಕ್ಕೆ ಒಂದು ಸ್ಥಾನ ಸಿಗಲಿದೆ ಎಂಬ ಮಾತುಗಳು ಇವೆಯಾದರೂ ಸಿಎಂ ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಬೇಡ ಎಂಬ ಆಲೋಚನೆಯಲ್ಲಿದ್ದಾರೆ. ನಾನೇ ಆ ಸಮುದಾಯ ಪ್ರತಿನಿಧಿಸುತ್ತಿದ್ದೇನಲ್ಲಾ ಎಂದು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟವರ ಮುಂದೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ರೇಸ್‌ನಲ್ಲಿದ್ದಾರೆ ಹಲವರು: ಈ ಹಿಂದೆಯೂ ಕುರುಬ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಸಿಎಂಗೆ ಮನಸ್ಸಿರಲಿಲ್ಲ. ಆದರೆ, ಸಮುದಾಯದ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕೆಂದು ಸಮಾಜದ ಮುಖಂಡರು ಒತ್ತಡ ಹೇರಿದ್ದರಿಂದ ಬಾಗಲಕೋಟೆ ಶಾಸಕ ಎಚ್‌. ವೈ. ಮೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಸಂಪುಟಕ್ಕೆ ಸೇರಿದ ಆರೇ ತಿಂಗಳಲ್ಲಿ ಎಚ್‌.ವೈ ಮೇಟಿ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡರು. ಇದು ಸಿದ್ದರಾಮಯ್ಯ ಅವರಿಗೆ ಆಘಾತ ತಂದಿತ್ತು.

ಈಗ ಮತ್ತೂಬ್ಬ ಸಮುದಾಯದ ಶಾಸಕನಿಗೆ ಸಚಿವ ಸ್ಥಾನ ನೀಡಿ ಎನ್ನುವ ಆಗ್ರಹ ಇದೆ. ಬಾದಾಮಿಯ ಹಿರಿಯ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಜಾತಿ ಹಾಗೂ ಜಿಲ್ಲಾ ಪ್ರಾತಿನಿಧ್ಯದ ಲೆಕ್ಕಾಚಾರದಲ್ಲಿ ತಮಗೇ ಸಚಿವ ಸ್ಥಾನ ಸಿಗುತ್ತದೆ ಎಂಬ ಆಲೋಚನೆಯಲ್ಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ. ರೇವಣ್ಣ ಕೂಡ ತೀವ್ರ ಕಸರತ್ತು ನಡೆಸಿದ್ದಾರೆ.

ಧಾರವಾಡ ಜಿಲ್ಲೆ ಕುಂದಗೋಳ ಶಾಸಕ ಸಿ.ಎಸ್‌.ಶಿವಳ್ಳಿ ಕೂಡ ರೇಸ್‌ನಲ್ಲಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ವಿಷಯದಲ್ಲಿ ಸ್ಪಷ್ಟ ನಿಲುವು ತಾಳಿದ್ದು ಕುರುಬ ಸಮುದಾಯ ಮತ್ತು ನಾಯಕರುಗಳಿಗೆ ಅಗತ್ಯ ಕೆಲಸ ಮಾಡಿಕೊಡುವ ಭರವಸೆ ನೀಡಿದ್ದು, ಸಂಪುಟಕ್ಕೆ ಮಾತ್ರ ಸೇರಿಸಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗಿದೆ.

ಹೊಸ ಲೆಕ್ಕಾಚಾರ: ಈ ಬಾರಿ ಮಂತ್ರಿ ಮಂಡಲ ವಿಸ್ತರಣೆಯಲ್ಲ, ಪುನಾರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ, ಸಂಪುಟದ ಕೆಲ ವಿಕೆಟ್‌ಗಳು ಬೀಳುತ್ತಾ ಎಂಬ ಪ್ರಶ್ನೆ ಮೂಡಿದೆ.

ಪರಮೇಶ್ವರ್‌ ಅಥವಾ ಡಿ.ಕೆ. ಶಿವಕುಮಾರ್‌ ಯಾರೇ ಕೆಪಿಸಿಸಿ ಅಧ್ಯಕ್ಷರಾದರೂ ಮಂತ್ರಿ ಸ್ಥಾನ ಖಾಲಿ ಮಾಡಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ. ಅದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಮೂರರಿಂದ ಅಥವಾ ನಾಲ್ಕು ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡುವ ಆಲೋಚನೆ ನಡೆಸಿದ್ದಾರೆ. ಸಂಪುಟಕ್ಕೆ ಹೊಸ ಮುಖಗಳನ್ನು ಸೇರಿಸಿಕೊಳ್ಳುವ ಲೆಕ್ಕಾಚಾರ ಅವರದಾಗಿದ್ದು ಇದನ್ನು ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಹಲವರ ಒತ್ತಡ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದರೆ ಅವಕಾಶಕ್ಕಾಗಿ ಮುದ್ದೆಬಿಹಾಳ ಶಾಸಕ ಸಿ.ಎಸ್‌. ನಾಡಗೌಡ, ಮಧುಗಿರಿ ರಾಜಣ್ಣ , ರಾಮದುರ್ಗದ ಅಶೋಕ್‌ ಪಟ್ಟಣ ಕಾಯುತ್ತಿದ್ದಾರೆ. ಇನ್ನು, ಭೋವಿ ಸಮುದಾಯದ ಏಕೈಕ ಶಾಸಕ ಎಂಬ ಕಾರಣಕ್ಕೆ ಕನಕಗಿರಿಯ ಶಿವರಾಜ್‌ ತಂಗಡಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಬೇಕು ಎಂಬ ಒತ್ತಡವೂ ಇದೆ.

ಎಸ್‌.ಆರ್‌. ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿದ್ದರೇ ಮಂತ್ರಿ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದಲ್ಲದೇ ಹಳೆ ಮೈಸೂರು ಭಾಗದಲ್ಲಿ ಲಿಂಗಾಯತ ಸಮುದಾಯ ಪ್ರತಿನಿಧಿಸುವ ಸಚಿವರು ಯಾರೂ ಇಲ್ಲ ಎಂಬ ಕಾರಣಕ್ಕೆ ಗೀತಾ ಮಹದೇವ ಪ್ರಸಾದ್‌ ಅವರಿಗೂ ಚುನಾವಣಾ ಪ್ರಚಾರದಲ್ಲಿ ಮಾತು ಕೊಟ್ಟಂತೆ ಮಂತ್ರಿ ಮಾಡಬಹುದು ಎಂದು ಹೇಳಲಾಗಿದೆ.

ಗ್ರೀನ್‌ ಸಿಗ್ನಲ್‌ ಸಿಗುತ್ತಾ?
ಉಪಚುನಾವಣೆಯಲ್ಲಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸೇರಿ ರಾಜ್ಯ ಕಾಂಗ್ರೆಸ್‌ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಚರ್ಚೆಗೆ ಬರಲಿದೆ. ಆದರೆ, ಇದೇ ಸಭೆಯಲ್ಲಿ ಎಲ್ಲವೂ ಅಂತಿಮವಾಗುವ ಸಾಧ್ಯತೆ ಕಡಿಮೆ. ಈ ಕುರಿತ ಪ್ರಸ್ತಾಪ ಹೈಕಮಾಂಡ್‌ ಮುಂದಿಟ್ಟು ಪಟ್ಟಿ ಸಿದ್ಧಪಡಿಸಿಕೊಂಡು ಮತ್ತೂಮ್ಮೆ ಭೇಟಿಯಾಗಿ ಒಪ್ಪಿಗೆ ಪಡೆಯಬಹುದು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.