ಸಮಾನ ಶಕ್ತರ ಹೋರಾಟ: ಇಂದು ಪಂಜಾಬ್‌ಗ ಡೆಲ್ಲಿ ಡೆವಿಲ್ಸ್‌ ಸವಾಲು


Team Udayavani, Apr 15, 2017, 12:03 PM IST

kINGS-15.jpg

ನವದೆಹಲಿ: ಪುಣೆಗೆ ನೀರು ಕುಡಿಸಿದ ಬಳಿಕ ಡೆಲ್ಲಿ ಡೇರ್‌ ಡೆವಿಲ್ಸ್‌ ಮತ್ತೂಂದು ಗೆಲುವಿನ ನಿರೀಕ್ಷೆಯಲ್ಲಿದೆ. ಶನಿವಾರ ಫಿರೋಜ್‌ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡವನ್ನು ಎದುರಿಸಲಿದೆ.

ಡೆಲ್ಲಿ ಒಟ್ಟು 2 ಪಂದ್ಯ ಆಡಿದೆ. ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯವನ್ನು ಸೋತಿದೆ. ಆದರೆ ಪುಣೆ ಸೂಪರ್‌ ಜೈಂಟ್ಸ್‌ ವಿರುದ್ಧ 97 ರನ್‌ ಗೆಲುವು ಪಡೆದುಕೊಂಡಿದೆ. ಇನ್ನೊಂದೆಡೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಒಟ್ಟು 3 ಪಂದ್ಯಗಳನ್ನು ಆಡಿದೆ. 2 ಪಂದ್ಯದಲ್ಲಿ ಸತತ ಗೆಲುವು ಗಳಿಸಿತ್ತು. ಆದರೆ ಕೋಲ್ಕತಾ ನೈಟ್‌ ರೈಡರ್ ವಿರುದ್ಧದ 3ನೇ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದ ಪಂಜಾಬ್‌ಗ ಕನಸು ನುಚ್ಚು ನೂರಾಗಿತ್ತು.

ಎದುರಾಳಿಗೆ ಡೆಲ್ಲಿ ಡೆವಿಲ್ಸ್‌?: ಜಹೀರ್‌ ನೇತೃತ್ವದ ಡೆಲ್ಲಿ ತಂಡ ಶ್ರೇಷ್ಠ ಆಟಗಾರರನ್ನು ಒಳಗೊಂಡಿದೆ. ಸಂಜು ಸ್ಯಾಮ್ಸನ್‌ ಪುಣೆ ವಿರುದ್ಧದ ಪಂದ್ಯದಲ್ಲಿ ನ್ಪೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಪ್ರಸ್ತುತ ಆವೃತ್ತಿ ಐಪಿಎಲ್‌ನ ಮೊದಲ ಶತಕವನ್ನು ಸಂಜು ದಾಖಲಿಸಿದ್ದಾರೆ. ಜತೆಗೆ ಕ್ರಿಸ್‌ ಮಾರಿಸ್‌ ಕೆಳ ಕ್ರಮಾಂಕದಲ್ಲಿ ಕೇವಲ 9 ಎಸೆತದಲ್ಲಿ 38 ರನ್‌ ಚಚ್ಚಿದ್ದರು. ಇನ್ನು ಆದಿತ್ಯ ತಾರೆ, ಬಿಲ್ಲಿಂಗ್ಸ್‌, ರಿಷಭ್‌ ಪಂತ್‌ ತಂಡದ ಬ್ಯಾಟಿಂಗ್‌ ವಿಭಾಗದ ದೈತ್ಯರು. ಜಹೀರ್‌ ಖಾನ್‌, ಅಮಿತ್‌ ಮಿಶ್ರಾ ಹಾಗೂ ಕಮಿನ್ಸ್‌ ಬೌಲಿಂಗ್‌ನಿಂದ ನಿಯಂತ್ರಣ ಸಾಧಿಸುವ ಸಾಮರ್ಥ್ಯ ಹೊಂದಿದ್ದಾರೆ.

ಪಂಜಾಬ್‌ ಪೆಟ್ಟು ತಿಂದ ಹುಲಿ: ಗೌತಮ್‌ ಗಂಭೀರ್‌ ಪಡೆಗೆ ಪಂಜಾಬ್‌ ಸೋತಿರುವುದರಿಂದ ಒಂದು ರೀತಿಯಲ್ಲಿ ಕಿಂಗ್ಸ್‌ ಪರಿಸ್ಥಿತಿ ಪೆಟ್ಟು ತಿಂದ ಹುಲಿಯಂತಾಗಿದೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌, ಡೇವಿಡ್‌ ಮಿಲ್ಲರ್‌, ವೃದ್ದಿಮಾನ್‌ ಸಹಾ ಬ್ಯಾಟಿಂಗ್‌ನಲ್ಲಿ ಕೈಕೊಟ್ಟರು. ಹೀಗಾಗಿ ಪಂಜಾಬ್‌ ಉತ್ತಮ ಮೊತ್ತ ಕೂಡಿಸುವಲ್ಲಿ ವಿಫ‌ಲವಾಯಿತು. ಅಲ್ಲದೆ ಪಂಜಾಬ್‌ ಬೌಲಿಂಗ್‌ನಲ್ಲಿ ದುರ್ಬಲವಾಗಿರುವುದರಿಂದ ಎಷ್ಟೇ ರನ್‌ಗಳಿಸಿದರೂ ಅದನ್ನು ಕಾಯ್ದುಕೊಳ್ಳುವಲ್ಲಿ ವಿಫ‌ಲವಾಗುತ್ತಿದೆ. 

ಅಂಕಣ ಹೇಗಿದೆ?
ಫಿರೋಜ್‌ ಷಾ ಕೋಟ್ಲಾ ಪಿಚ್‌ ಸ್ಪಿನ್‌ಗೆ ಹೆಚ್ಚು ನೆರವಾಗುತ್ತದೆ. ಎಂದಿನಂತೆ ಪಿಚ್‌ ಬ್ಯಾಟಿಂಗ್‌ಗೆ ಹೆಚ್ಚು ನೆರವಾಗಲಿದೆ. ಇಬ್ಬನಿಯಿರುವುದರಿಂದ 2ನೇ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಹೆಚ್ಚುವರಿ ಸ್ಪಿನ್‌ ಕಾಟ ಇರಲಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.