ಹೆದ್ದಾರಿ ಮದ್ಯದಂಗಡಿ: ಸುಪ್ರೀಂಗೆ ಮೊರೆ


Team Udayavani, Apr 15, 2017, 12:29 PM IST

highway-liquor.jpg

ಬೆಂಗಳೂರು: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಅಕ್ಕ-ಪಕ್ಕದಲ್ಲಿ “ಸಿಎಲ್‌-07′ ಪರವಾನಗಿ ಹೊಂದಿರುವ ಹೋಟೆಲ್‌ಗ‌ಳನ್ನೂ ತೆರವುಗೊಳಿಸಲು ಆದೇಶಿಸಿದ್ದು, ಈ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಪ್ರವಾಸೋದ್ಯಮ ಹೋಟೆಲ್‌ ಮಾಲಿಕರ ಸಂಘ ತೀರ್ಮಾನಿಸಿದೆ. 

ನಗರದ ಕೃಷಿ ಭವನದಲ್ಲಿ ಶುಕ್ರವಾರ ರಾಜ್ಯ ಪ್ರವಾಸೋದ್ಯಮ ಹೋಟೆಲ್‌ ಮಾಲಿಕರ ಸಂಘದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.  ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಉಮೇಶ್‌ ಶಿ. ಬಾಳಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬಳಿ ಇರುವ ಎಲ್ಲ ಪ್ರಕಾರದ ಹೋಟೆಲ್‌ಗ‌ಳು ಇರಕೂಡದು ಎಂದು ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಸರ್ಕಾರದ ನೀತಿ-ನಿಯಮಗಳಡಿ ಕೋಟ್ಯಂತರ ರೂ. ಹೂಡಿಕೆ ಮಾಡಿ, ನಿರ್ಮಿಸಿದ ಶಾಶ್ವತ ಕಟ್ಟಡಗಳನ್ನು ಸ್ಥಳಾಂತರಿಸುವುದು ಕಷ್ಟಸಾಧ್ಯ. ಅಷ್ಟಕ್ಕೂ ಈ ಮಾದರಿಯ ಹೋಟೆಲ್‌ಗ‌ಳಲ್ಲಿ ತಂಗುವವರಿಗೆ ಮಾತ್ರ ಮದ್ಯ ಸರಬರಾಜು ಮಾಡಲಾಗುತ್ತದೆ. ಆದ್ದರಿಂದ ಆದೇಶವನ್ನು ಪುನರ್‌ಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು. 

ನಿಯಮ ತಿದ್ದುಪಡಿಗೆ ಒತ್ತಾಯ: ರಾಜ್ಯಾದ್ಯಂತ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬಳಿ ಸುಮಾರು 953 “ಸಿಎಲ್‌- 07′ ಪರವಾನಗಿ ಪಡೆದ ಹೋಟೆಲ್‌ಗ‌ಳಿವೆ. ಇವುಗಳಿಗೆ ಕನಿಷ್ಠ 1ರಿಂದ 10 ಕೋಟಿ ರೂ.ವರೆಗೂ ಬಂಡವಾಳ ಹೂಡಲಾಗಿದೆ. ಕನಿಷ್ಠ 30 ಕೊಠಡಿಗಳಿರುವ ಲಾಡಿjಂಗ್‌ ವ್ಯವಸ್ಥೆ ಈ ಹೋಟೆಲ್‌ಗ‌ಳಲ್ಲಿದೆ. ಇಲ್ಲಿ ಉಳಿದುಕೊಳ್ಳುವವರಿಗೆ ಮಾತ್ರ ಮದ್ಯ ಸರಬರಾಜು ಮಾಡಲಾಗುತ್ತದೆ.

ವಾರ್ಷಿಕ 300 ಕೋಟಿ ರೂ.ಗಳಿಗೂ ಅಧಿಕ ವಹಿವಾಟು ನಡೆಯುತ್ತದೆ. ಈಗ ಸುಪ್ರೀಂ ಕೋರ್ಟ್‌ ಆದೇಶದಿಂದ ಹೋಟೆಲ್‌ಗ‌ಳನ್ನು ರಸ್ತೆ ಬದಿಯಿಂದ 500 ಮೀಟರ್‌ ದೂರದಲ್ಲಿ ಸ್ಥಳಾಂತರಿಸಲು ಆಗುವುದಿಲ್ಲ. ಬದಲಿಗೆ ನೆಲಸಮಗೊಳಿಸಬೇಕಾಗುತ್ತದೆ. ಈ ಬಗ್ಗೆ ಕೂಡ ಸುಪ್ರೀಂ ಕೋರ್ಟ್‌ಗೆ ಸಲ್ಲಿಸುವ ಅರ್ಜಿಯ ಮೂಲಕ ಮನದಟ್ಟು ಮಾಡಿಕೊಡಲಾಗುವುದು ಎಂದರು. 

ಇದಲ್ಲದೆ, ಪ್ರಧಾನಿ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವರನ್ನೂ ಖುದ್ದು ಭೇಟಿ ಮಾಡಿ, ಮನವರಿಕೆ ಮಾಡಿಕೊಡ ಲಾಗುವುದು ಎಂದ ಅವರು, ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿಯಾಗಿ ಅಗತ್ಯಬಿದ್ದರೆ ನಿಯಮಾವಳಿಗಳ ತಿದ್ದುಪಡಿ ಮಾಡುವಂತೆ ಕೋರಲಾಗುವುದು ಎಂದೂ ತಿಳಿಸಿದರು. 

ರಾಜ್ಯದಲ್ಲಿ ಸುಮಾರು ಹತ್ತು ಸಾವಿರ ಮದ್ಯ ಮಾರಾಟ ಪರವಾನಗಿದಾರರಿದ್ದಾರೆ. ಇವರಿಂದ ಸರ್ಕಾರಕ್ಕೆ ವಾರ್ಷಿಕ 16ರಿಂದ 18 ಸಾವಿರ ಕೋಟಿ ರೂ. ಆದಾಯ ಬರುತ್ತದೆ ಎಂದು ಉಮೇಶ್‌ ಬಾಳಿ ಮಾಹಿತಿ ನೀಡಿದರು.  ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರೇವಣಸಿದ್ದಪ್ಪ ಗು. ಕಲಬುರ್ಗಿ, ಪ್ರಧಾನ ಕಾರ್ಯದರ್ಶಿ ಗೋವಿಂದ ದು. ಕೌಲಗಿ ಮತ್ತಿತರರು ಭಾಗವಹಿಸಿದ್ದರು. 

10000 ಪರವಾನಗಿದಾರರು
ಪ್ರವಾಸೋದ್ಯಮ ಹೋಟೆಲ್‌ಗ‌ಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸಿ, ಹೋಟೆಲ್‌ಗ‌ಳ ಹಿತರಕ್ಷಣೆಗಾಗಿ ಅಗತ್ಯಬಿದ್ದರೆ ಹೋರಾಟಗಳನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು. 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.