ಹೆಬಿಕ್‌ ಸ್ಮಾರಕ ಚರ್ಚ್‌ನಲ್ಲಿ ಶಿಲುಬೆ ಸಂಜೆ


Team Udayavani, Apr 15, 2017, 3:12 PM IST

hub3.jpg

ಧಾರವಾಡ: ಇಂದಿನ ಹಿಂಸಾ ಪ್ರಧಾನ ಸಮಾಜದಲ್ಲಿ ಎಲ್ಲರನ್ನು ಪ್ರೀತಿಸು ಎನ್ನುವ ಕ್ರಿಸ್ತನ ಸಂದೇಶವನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ ಎನ್ನುವ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕವಿ  ಡಾ| ಚೆನ್ನವೀರ ಕಣವಿ ಹೇಳಿದರು. 

ಇಲ್ಲಿನ ಹೆಬಿಕ್‌ ಸ್ಮಾರಕ ಚರ್ಚ್‌ನಲ್ಲಿ ಶುಭ ಶುಕ್ರವಾರ ನಿಮಿತ್ತ ಹಮ್ಮಿಕೊಂಡಿದ್ದ “ಶಿಲುಬೆ ಸಂಜೆ’ ಕಾರ್ಯಕ್ರಮದಲ್ಲಿ “ಕವಿ ಕಂಡ ಕ್ರೂಜೆ’ ಕುರಿತು ಅವರು ಮಾತನಾಡಿದರು. ಪ್ರೀತಿ ಬದುಕಿನ ಭಾಗ ಮತ್ತು ಬದುಕಿನ ರೀತಿಯಾಗಬೇಕು ಎನ್ನುವುದು ಏಸು ಕ್ರಿಸ್ತ ಇಡೀ ಜನ ಸಮುದಾಯಕ್ಕೆ ನೀಡಿದ ಸಂದೇಶ.

ತನ್ನನ್ನು ಹಿಂಸಿಸಿದವರನ್ನು ಕ್ಷಮಿಸು. ಅವರಿಗೆ ತಾವು ಏನು ಮಾಡುತ್ತಿದ್ದೇವೆ ಎನ್ನುವ ಕಲ್ಪನೆ ಇಲ್ಲ  ಎನ್ನುವ ಕ್ರಿಸ್ತನ ಉದಾರತೆ ನಮ್ಮ ಬದುಕಿನಲ್ಲೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು. ಕನ್ನಡ ಸಾಹಿತ್ಯದ ವಿವಿಧ ನೆಲೆಗಳಲ್ಲಿ ಕ್ರೈಸ್ತ ಸಂವೇದನೆಗಳು ರೂಪಿತವಾಗಿದ್ದು, ಅವು ನೀಡುವ ಅನುಭವಗಳು ಗಾಢವಾಗಿ ತಟ್ಟುತ್ತವೆ.

ಕ್ರಿಸ್ತನ ಕಾವ್ಯಧರ್ಮ ಮತ್ತು ತತ್ವಜ್ಞಾನದ ಕುರಿತು ಕನ್ನಡ ಸಾಹಿತ್ಯದಲ್ಲಿ ಹಲವು ಕೃತಿಗಳು ರಚಿತವಾಗಿವೆ. ಕಿಟೆಲ್‌,  ಮೊಗ್ಲಿಂಗ್‌ ಸಾಹಿತ್ಯದಿಂದ ಹಿಡಿದು ಇಂದಿನ ಆಧುನಿಕ ಸಾಹಿತ್ಯದಲ್ಲಿ ಕ್ರಿಸ್ತನ ಮೌಲಿಕ ಸಂದೇಶಗಳನ್ನು ಜನಮಾನಸಕ್ಕೆ ಮುಟ್ಟಿಸುವ ಪ್ರಯತ್ನಗಳು ಹಲವು ವಿಧದಲ್ಲಿ ಸಾಗಿದೆ ಎಂದರು. 

18ನೇ ಶತಮಾನದ ಪೂರ್ವಾರ್ಧದಲ್ಲಿ ಕ್ರೈಸ್ತ ಮಿಶನರಿಗಳು ಭಾರತಕ್ಕೆ ಪ್ರವೇಶ ಮಾಡಿದ ಸಂದರ್ಭದಲ್ಲಿ ಅವರ ಮೂಲಕ ಕ್ರೈಸ್ತ ಧರ್ಮದ ಮೌಲಿಕ ವಿಚಾರಗಳು  ಕನ್ನಡ ಸಾಹಿತ್ಯದಲ್ಲಿ ಪ್ರವೇಶ ಪಡೆದುಕೊಂಡವು. ರೆವೆರಂಡ್‌ ಕಿಟೆಲ್‌ ಇಲ್ಲಿಗೆ ಬಂದು ಕನ್ನಡ ಕಲಿತು, ಭಾಮಿನಿದಿಯಲ್ಲಿ ಕಾವ್ಯ ರಚನೆ ಮಾಡಿದ್ದು ಅಚ್ಚರಿ ಹುಟ್ಟಿಸುವ ಸಂಗತಿ.  

ಅದಾದ ನಂತರ ಅನೇಕ ಕನ್ನಡದ ಕವಿಗಳು ಕ್ರಿಸ್ತನ ಹುಟ್ಟು, ಬದುಕು, ಚಿಂತನೆ ಮತ್ತು ಸಂದೇಶ ಕುರಿತು ಕಾವ್ಯದ ಮೂಲಕ ಕಟ್ಟಿಕೊಡುವ ಅನುಭವಗಳು ಸಾಹಿತ್ಯದ ಬೆಳವಣಿಗೆಗೂ ಪೂರಕವಾಗಿದ್ದವು ಎಂದು ಹೇಳಿದರು. ರೆವೆರಂಡ್‌ ರವಿ ಕುಮಾರ್‌ ನಿರಂಜನ, ಡಾ| ಜಿ.ಎಂ. ಹೆಗಡೆ, ಕವಿ ವಿ.ಸಿ. ಐರಸಂಗ, ಡಾ| ಎಸ್‌.ಆರ್‌. ಗುಂಜಾಳ ಇದ್ದರು. ನಂತರ ಹೆಬಿಕ್‌ ಸಭೆಯ ಕಲಾವಿದರು ಕ್ರಿಸ್ತನ ಸಂದೇಶ ಸಾರುವ ಗೀತೆಗಳನ್ನು ಪ್ರಸ್ತುತಪಡಿಸಿದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.