12 ವರ್ಷಗಳ ಬಳಿಕ 45 ಡಿಗ್ರಿ ಸೆ. ಸಂಭವ


Team Udayavani, Apr 16, 2017, 12:24 PM IST

Sun.jpg

ರಾಯಚೂರು: ಹನ್ನೆರಡು ವರ್ಷಗಳ ಬಳಿಕ ಮತ್ತೆ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲಿನತ್ತ ದಾಪುಗಾಲು ಹಾಕಿರುವ ಹೈದರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲೀಗ 43 ಡಿಗ್ರಿ ಬಿಸಿಲು.ಸೂರ್ಯನ ಉಷ್ಣಾಂಶದ ಜತೆಗೆ ಬಿಸಿಗಾಳಿ ಹೆಚ್ಚುತ್ತಿದ್ದು, ಎರಡು ತಿಂಗಳು ಕಳೆಯುವುದು ಈ ಭಾಗದ ಜನರಿಗೆ ಅಕ್ಷರಶಃ ಅಗ್ನಿಪರೀಕ್ಷೆಯಾಗಿದೆ.

ಬೆಳಗ್ಗೆ 10 ಗಂಟೆಗೆಲ್ಲ ಬಿಸಿಲಿನ ಪ್ರಖರತೆ ಹೆಚ್ಚುತ್ತಿದ್ದು, ಸಂಜೆ ಆರು ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ಏಪ್ರಿಲ್‌ನಲ್ಲೇ ಈ ಪ್ರಮಾಣದಲ್ಲಿರುವ ಬಿಸಿಲು ಮೇ ವೇಳೆಗೆ ಮತ್ತಷ್ಟು ಭಯಂಕರವಾಗುವ ಸಾಧ್ಯತೆಯಿದೆ. ಹವಾಮಾನ ಕೇಂದ್ರದ ಸೂಚನೆಯಂತೆ ಕಳೆದ ಬಾರಿಗಿಂತ ಒಂದು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಲಿದೆ. ಕಳೆದ ವರ್ಷ ಮೇ ತಿಂಗಳಲ್ಲಿ 44 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಈ ಬಾರಿ 45 ಡಿಗ್ರಿ ತಲುಪುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. 

ಹಿಂದೆಯೂ ದಾಖಲಾಗಿತ್ತು: 2000 ಹಾಗೂ 2003ರ ಮೇ ತಿಂಗಳಲ್ಲಿ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿತ್ತು. ಉಳಿದ ವರ್ಷಗಳಲ್ಲಿ 42ರ ಗಡಿ ಮೀರಿದ ಬಿಸಿಲು ದಾಖಲಾಗಿದ್ದರೂ 45 ಡಿಗ್ರಿ ತಲುಪಿರಲಿಲ್ಲ. ಆದರೆ, ಉತ್ತರ ಭಾರತದಿಂದ ಬರುತ್ತಿರುವ ಉಷ್ಣ ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ
ವಾತಾವರಣ ಕಾವೇರುತ್ತಿದೆ. ಈಗಾಗಲೇ ತೆಲಂಗಾಣ, ಆಂಧ್ರದ ವಿವಿಧೆಡೆ 43ರ ಗಡಿ ದಾಟಿದೆ. ಇನ್ನು ಕರ್ನಾಟಕದ ಸರದಿ ಎನ್ನುತ್ತಾರೆ ಹವಾಮಾನ ತಜ್ಞರು. ಕೊಪ್ಪಳ, ಗದಗ ಜಿಲ್ಲೆಯಲ್ಲಿ ಶನಿವಾರ ಉಷ್ಣಾಂಶದಿಂದ ಬಾಲಕ ಮತ್ತು ರೈತ ಮೃತಪಟ್ಟಿದ್ದಾರೆ. ದೇಹದಲ್ಲಿ ನಿರ್ಜಲೀಕರಣದಿಂದ ತಲೆ ಸುತ್ತು
ಬರುವುದು, ವಾಂತಿ, ಭೇದಿಯಂಥ ಸಮಸ್ಯೆಗಳು ಕಾಡುತ್ತಿವೆ. ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಹೆಚ್ಚು ಮಂದಿ ಇದೇ ಸಮಸ್ಯೆಗೆ ತುತ್ತಾದವರಿದ್ದಾರೆ. ಮಕ್ಕಳಲ್ಲಿ ಹೆಚ್ಚು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಧ್ಯಾಹ್ನ 12ರಿಂದ ಸಂಜೆ ನಾಲ್ಕು ಗಂಟೆವರೆಗೆ ಸೂರ್ಯನ ಅತಿ ನೇರಳೆ ಕಿರಣಗಳು
ಹೆಚ್ಚಾಗಿರುವುದರಿಂದ ಆ ಹೊತ್ತಲ್ಲಿ ಕೆಲಸ ಮಾಡುವುದು, ಓಡಾಡುವುದು ಅಪಾಯ ಕಾರಿ. ಅದು ಜೀವಕ್ಕೆ ಅಪಾಯ ತರುವ ಸಾಧ್ಯತೆ ಉಂಟು ಎನ್ನುತ್ತಾರೆ ವೈದ್ಯರು.

ಸರ್ಕಾರ ಕೂಡ ಉದ್ಯೋಗ ಖಾತ್ರಿ ಕೂಲಿ ಕೆಲಸದ ಅವಧಿಧಿಯನ್ನು ಶೇ.25ರಷ್ಟು ಕಡಿತಗೊಳಿಸಿದೆ. ಕಡಿಮೆ ಕೆಲಸ ಮಾಡಿದರೂ ಪೂರ್ತಿ ಕೂಲಿ ಹಣ ಪಾವತಿಸಲಾಗುತ್ತಿದೆ. ಇನ್ನು ಬಿಸಿಲಿಗೆ ಬಸವಳಿದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ವಿವಿಧ ಸಂಘ-ಸಂಸ್ಥೆಗಳು ಸಕ್ರಿಯವಾಗಿವೆ. ನಗರದ ಬಹುತೇಕ ಕಡೆ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಲಾಗಿದೆ. ರಾಜಸ್ತಾನಿ ಕನ್ನಡಿಗರ ಬಳಗ ನಿತ್ಯ ಮಧ್ಯಾಹ್ನ ಒಂದು ಗಂಟೆ ಕಾಲ ತಂಪು ಪಾನೀಯ ವಿತರಿಸುತ್ತಿದೆ. ಆದರೆ ನದಿ, ಹಳ್ಳ ಕೊಳ್ಳಗಳು ಬತ್ತಿ ಹೋಗಿದ್ದು, ಜಾನುವಾರುಗಳಿಗೆ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಈ ಎರಡು ತಿಂಗಳು ಕಳೆದರೆ ಸಾಕು ಎನ್ನುವಂತಾಗಿದೆ ಜನರ ಮನಸ್ಥಿತಿ.

ಕಳೆದ ವರ್ಷಕ್ಕೆ ಹೋಲಿಸಿದರೆ ಒಂದು ಡಿಗ್ರಿ ಸೆಲ್ಸಿಯಸ್‌ ಬಿಸಿಲು ಹೆಚ್ಚಾಗಿದೆ. ಭಾರತ ಹವಾಮಾನ ಕೇಂದ್ರ ಸೂಚನೆಯನ್ವಯ ಈ ಬಾರಿ ಮೇನಲ್ಲಿ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾದರೂ ಅಚ್ಚರಿಯಿಲ್ಲ. ಬಿಸಿಲಿನಿಂದಾಗುವ ಸಮಸ್ಯೆಗಳ ಬಗ್ಗೆ ಜನ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
– ವಿಶ್ವನಾಥ ಬಿರಾದಾರ, ಹವಾಮಾನ ತಜ್ಞ 

ನಿರ್ಜಲೀಕರಣದಿಂದ ರಿಮ್ಸ್‌ಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ 2ರಿಂದ 3 ಮಕ್ಕಳನ್ನು ದಾಖಲಿಸಲಾಗುತ್ತಿದೆ. ಅದಕ್ಕೆ ಬೇಕಾದ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಹೆಚ್ಚು ಬಿಸಿಲಲ್ಲಿ ಬಿಡದಂತೆ ಎಚ್ಚರ ವಹಿಸಬೇಕು. ಉಳಿದಂತೆ ವಾಂತಿ,
ಭೇದಿ, ತಲೆಸುತ್ತು ಸಮಸ್ಯೆಯಿಂದ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

-ಡಾ| ಕವಿತಾ ಪಾಟೀಲ,ರಿಮ್ಸ್‌ ಪ್ರಭಾರ ನಿರ್ದೇಶಕರು

ಬಿಸಿಲಿನ ಪ್ರಮಾಣ ಹೆಚ್ಚಿರುವ ಕಾರಣ ಸರ್ಕಾರ ಉದ್ಯೋಗ ಖಾತ್ರಿ ಕೆಲಸದ ಅವಧಿಧಿಯನ್ನು ಶೇ.25ರಷ್ಟು ಕಡಿತಗೊಳಿಸಿದೆ. ಕುಡಿವ ನೀರಿನ ಸಮಸ್ಯೆ ಆಗದಂತೆ ಎಚ್ಚೆತ್ತುಕೊಂಡಿದ್ದು, ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ಪೂರೈಸಲಾಗುವುದು. ಬಿಸಿಲಿನಿಂದಾಗುವ ಸಮಸ್ಯೆಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಎಲ್ಲ ಆಸ್ಪತ್ರೆಗಳಿಗೆ ತಿಳಿಸಲಾಗಿದೆ.
– ಡಾ| ಬಗಾದಿ ಗೌತಮ, ಜಿಲ್ಲಾಧಿಧಿಕಾರಿ

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.