20ರಂದು ಬಾಂಬ್‌ ನಾಗ ಶರಣಾಗತಿ?


Team Udayavani, Apr 17, 2017, 11:59 AM IST

bomb-naaga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಪ್ರಕರಣದಲ್ಲಿ ತಲೆಮರೆಸಿ­ಕೊಂಡಿರುವ ನಾಗರಾಜ್‌ ಅಲಿಯಾಸ್‌ ಬಾಂಬ್‌ ನಾಗ ತಮಿಳುನಾಡಿನ “ಶಿಪ್‌ಯಾರ್ಡ್‌’ವೊಂದರಲ್ಲಿ ಅಡಗಿಕೊಂಡಿ­ದ್ದಾನೆ ಎಂಬ ಮಾಹಿತಿ ಬಹಿರಂಗ­ಗೊಂಡಿದೆ. ಈನಡುವೆ ಪೊಲೀಸರ ಕಾರ್ಯಾ­ಚರಣೆ ಗತಿ ಕಂಡು ಆತಂಕಕ್ಕೊಳ­ಗಾಗಿರುವ ನಾಗ, ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿ, ಏ.20ರಂದು ನಗರಕ್ಕೆ ಬಂದು ತಾನೇ ಪೊಲೀಸರಿಗೆ ಶರಣಾಗುವುದಾಗಿ ಹೇಳಿದ್ದಾನೆ ಎನ್ನಲಾಗಿದೆ.

ಏ.14ರಂದು ಪೊಲೀಸರ ದಾಳಿಯ ಮುನ್ಸೂಚನೆ ಪಡೆದಿದ್ದ ಆರೋಪಿ ನಾಗರಾಜ್‌ ಒಂದು ದಿನ ಮೊದಲೇ ತಮಿಳುನಾಡಿನ ಧರ್ಮಪುರಿಗೆ ಓಡಿ ಹೋಗಿದ್ದಾನೆ. ಬಳಿಕ ತನ್ನ ಸಂಬಂಧಿಕರು ಹಾಗೂ ಅಂತಾರಾಜ್ಯ ಮಟ್ಟದಲ್ಲಿ ಕಪ್ಪು ಹಣ ದಂಧೆ ನಡೆಸುತ್ತಿರುವ ಕೆಲ ಉದ್ಯಮಿಗಳ ಸಹಾಯ ಪಡೆದು ತನ್ನ ಮಕ್ಕಳೊಂದಿಗೆ ಶಿಪ್‌ಯಾರ್ಡ್‌ನಲ್ಲಿ ರಹಸ್ಯವಾಗಿ ನೆಲೆಸಿದ್ದಾನೆ. ಈ ನಡುವೆ ಪೊಲೀಸರು ಬಂಧಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ವಕೀಲರನ್ನು ಸಂಪರ್ಕಿಸಿದ್ದಾನೆ ಎನ್ನಲಾಗಿದೆ. 

ಮತ್ತೂಂದೆಡೆ ನಾಗರಾಜ್‌ಗಾಗಿ ಹುಡುಕಾಟ ಆರಂಭಿಸಿರುವ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡಿನ ರಾಣಿಪೇಟ್‌ಗೆ ತೆರಳಿದೆ. ಆದರೆ, ಶನಿವಾರದವರೆಗೆ ಆರೋಪಿಗಳ ಲೋಕೇಷನ್‌ ರಾಣಿಪೇಟ್‌ನಲ್ಲಿ ಪತ್ತೆಯಾಗುತ್ತಿತ್ತು. ಭಾನುವಾರ ಬೇರೆಡೆಯೇ ತೋರಿಸುತ್ತಿದೆ. ಹೀಗೆ ನಿತ್ಯ ತನ್ನ ಸ್ಥಳವನ್ನು ಆರೋಪಿ ಬದಲಾಯಿಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

“ಶಿಪ್‌ಯಾರ್ಡ್‌’ನಲ್ಲೇ ವ್ಯವಹಾರ: ಮೂಲತಃ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ನಾಗರಾಜ್‌, ಕೆಲ ಸ್ಥಳೀಯ ಉದ್ಯಮಿಗಳ ಸಂಪರ್ಕ ಹೊಂದಿದ್ದ. ಹಾಗೇ ಕೆಲ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಕೋರರ ಜತೆಯೂ ವ್ಯವಹಾರ ನಡೆಸುತ್ತಿದ್ದ. ಹಾಗಾಗಿ ಡಿಸೆಂಬರ್‌ನಿಂದಲೇ ಈತ ಅಮಾನ್ಯಗೊಂಡ ನೋಟುಗಳ ಬದಲಾವಣೆಯಲ್ಲಿ ತೊಡಗಿದ್ದ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ರಾಜಕೀಯ ಮುಖಂಡರು, ಉದ್ಯಮಿಗಳ ಕಪ್ಪು ಹಣವನ್ನು ಶೇ.25ರಷ್ಟು ಕಮಿಷನ್‌ ಆಧಾರದ ಮೇಲೆ ಬದಲಾವಣೆ ಮಾಡಿಕೊಡುತ್ತಿದ್ದ.

ಹಾಗೇ ನೋಟುಗಳ ಬದಲಾವಣೆಗೆ ಬಂದ ಉದ್ಯಮಿಗಳಿಗೆ ಬೆದರಿಸಿ ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ರೂ. ಮೌಲ್ಯದ ಹಳೇ ನೋಟುಗಳನ್ನು ತಮಿಳುನಾಡಿನ ಶಿಪ್‌ಯಾರ್ಡ್‌ಗಳಿಗೆ ಕೊಂಡೊಯ್ದು ಅಂತಾರಾಜ್ಯ ದಂಧೆಕೋರರ ಮೂಲಕ ಶೇ.30ರಷ್ಟು ಕಮಿಷನ್‌ಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದ. ಇದಕ್ಕಾಗಿಯೇ ತಮಿಳುನಾಡು ಹಾಗೂ ರಾಜ್ಯದ ಬಹಳಷ್ಟು ಜನ ಅನಿವಾಸಿ ಭಾರತೀಯರನ್ನು ಸಂಪರ್ಕಿಸಿ ಅವರಿಗೂ ಶೇಕಡಾ ಪ್ರಮಾಣದಲ್ಲಿ ಕಮಿಷನ್‌ ಕೊಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪೊಲೀಸರು ಕಾರ್ಯಾಚರಣೆಯಿಂದ ಆತಂಕಗೊಂಡಿರುವ ಆರೋಪಿ ನಾಗರಾಜ್‌, ಏ.20ರಂದು ಶರಣಾಗುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ವಕೀಲರ ಸಂಪರ್ಕ
ಪೊಲೀಸರು ಬಂಧನಕ್ಕೆ ಮುಂದಾಗುವ ಮೊದಲೇ ನಿರೀಕ್ಷಣಾ  ಜಾಮೀನು ಪಡೆಯಲು ತನ್ನ ಸಂಬಂಧಿಕರ ಮೂಲಕ ವಕೀಲರನ್ನು ಸಂಪರ್ಕಿಸಿದ್ದಾನೆ ಎನ್ನಲಾಗಿದೆ. ಆದರೆ, ಈಗಾಗಲೇ ಆರೋಪಿ ನಾಗನ ಪ್ರತಿ ಚಲನ ವಲನಗಳ ಬಗ್ಗೆ ನಿಗಾವಹಿಸಿರುವ ಪೊಲೀಸರು ಸದ್ಯದಲ್ಲೇ ಆತನನ್ನು ಬಂಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.