ಕುರುಬ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
Team Udayavani, Apr 17, 2017, 12:50 PM IST
ಮೈಸೂರು: ಅಂದಾಜು 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಕೆ.ಸೋಮಶೇಖರ್ ಭೂಮಿ ಪೂಜೆ ನೆರವೇರಿಸಿದರು.
ನಗರದ ಎನ್.ಆರ್ ಮೊಹಲ್ಲಾದಲ್ಲಿರುವ ಕುರುಬರ ಶ್ರೀಬೀರೇಶ್ವರ ಶ್ರೀರಾಮ ಮಂದಿರ ಟ್ರಸ್ಟ್ನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲು ಸಚಿವ ತನ್ವೀರ್ ಅವರೊಂದಿಗೆ ನಾನು ಸಹಕರಿಸುತ್ತೇನೆ. ಸಮುದಾಯ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ಈ ಭಾಗದ ಕುರುಬ ಸಮಾಜದವರಿಗೆ ಸಮುದಾಯ ಭವನ ನಿರ್ಮಾಣದಿಂದ ಅನುಕೂಲವಾಗಲಿದೆ. 90-80 ಅಡಿ ವಿಸ್ತೀರ್ಣದಲ್ಲಿ ಸಮುದಾಯ ಭ ವನ ನಿರ್ಮಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈಗಾಗಲೇ 30 ಲಕ್ಷ ರೂ. ಬಿಡುಗಡೆಯಾಗಿದೆ. ಮತ್ತಷ್ಟು ಅನುದಾನ ಬಿಡುಗಡೆಗಾಗಿ ಸ್ಥಳೀಯ ಶಾಸಕ ಸಚಿವ ತನ್ವೀರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಮೈಸೂರು ಮಹಾ ನಗರಪಾಲಿಕೆ ಉಪ ಮೇಯರ್ ರತ್ನ ಲಕ್ಷ್ಮಣ್, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಟ್ರಸ್ಟ್ನ ಗೌರವ ಅಧ್ಯಕ್ಷ ಕುನ್ನಯ್ಯ, ಅಧ್ಯಕ್ಷ ಎಂ.ಎನ್.ಮಹದೇವ್, ಕಾರ್ಯಾಧ್ಯಕ್ಷ ಚುಂಚಯ್ಯ, ಉಪಾಧ್ಯಕ್ಷ ಆರ್.ಮಹದೇವ, ಗೌರವ ಕಾರ್ಯದರ್ಶಿ ಕೆಂಪೇಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.