ಹಿಟ್ಲರ್‌ನಂತೆ ವರ್ತಿಸುತ್ತಿರುವ ಯುಪಿ ಸರ್ಕಾರ


Team Udayavani, Apr 17, 2017, 12:55 PM IST

mys5.jpg

ಹುಣಸೂರು: ಉತ್ತರ ಪ್ರದೇಶದ ಸರ್ಕಾರದ ಕೆಲ ತೀರ್ಮಾನಗಳು ಹಿಟ್ಲರ್‌ಗಿಂತಲೂ ಕಠಿಣ ವಾಗಿದ್ದು, ಸಂವಿಧಾನದ ಆಶಯಕ್ಕೆ ವಿರೋಧ ವಾಗಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ಟೀಕಿಸಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿ ಸಿದ್ದ ಅಂಬೇಡ್ಕರ್‌ 126ನೇ ಜಯಂತಿಯಲ್ಲಿ ಮಾತನಾಡಿ, ಅಂಬೇಡ್ಕರ್‌ ಇಡೀ ಪ್ರಪಂಚದ ಮನುಕುಲಕ್ಕೆ ಬೆಳಕಾದ ಮಹಾನ್‌ ಜ್ಞಾನಿ, ಅವರ ನೇತತ್ವದಲ್ಲಿ ರಚನೆಯಾದ ಸಂವಿಧಾನದ ಮೂಲ ಆಶಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂದರು.

ಅಂಬೇಡ್ಕರ್‌ ಕೊಟ್ಟ ಬೆಳಕಿನಡಿಯ ಕತ್ತಲಿನಲ್ಲಿ ಕೆಲ ಗೋಮುಖ ವ್ಯಾಘ್ರಗಳು ಅವರು ಬೆಳಗಿಸಿದ ದೀಪನ್ನು ಆರಿಸಲು ಯತ್ನಿಸುತ್ತಿವೆ. ಲಂಚ ಕೊಡುವವನು ಹಾಗೂ ಪಡೆಯುವವನು ಸಂವಿಧಾನ ವಿರೋಧಿಯೇ, ಅಂಬೇಡ್ಕರ್‌ ಮಾರ್ಗದಲ್ಲಿ ತೆರಳಿದರೆ ಅವರ ಮಾನವೀಯ, ಹೋರಾಟದ ಗುಣ ಬೆಳೆಸಿಕೊಳ್ಳಲು ಸಾಧ್ಯ, ಉತ್ತರ ಪ್ರದೇಶ ಸರಕಾರದ ಕೆಲ ಸಂವಿಧಾನ ವಿರೋಧಿ ತೀರ್ಮಾನ ಹಿಟ್ಲರ್‌ಗಿಂತ ದೊಡ್ಡ ದೆಂದು ವ್ಯಂಗ್ಯವಾಡಿದರು.

ಉಪವಿಭಾಗಾಧಿಕಾರಿ ಡಾ. ಸೌಜನ್ಯ ಮಾತ ನಾಡಿ, ಅತಿ ದೊಡ್ಡ ಪ್ರಜಾಪ್ರಭುತ್ವದ ಭಾರತದಲ್ಲಿ ಸಂವಿಧಾನದಂತೆಯೇ ತಲೆಬಾಗಿ ಜೀವನ ನಡೆಸುವುದೇ ಅಂಬೇಡ್ಕರ್‌ಗೆ ನೀಡುವ ನಿಜವಾದ ಗೌರವ ಎಂದರು. ಎ.ಎಸ್‌.ಪಿ.ಹರೀಶ್‌ಪಾಂಡೆ ಅಂಬೇಡ್ಕರ್‌ ಆಶಯದಂತೆ ಶೋಷಿತರು ಶಿಕ್ಷಣಕ್ಕೆ ಮಹತ್ವ ನೀಡಿದಾಗ ಆರ್ಥಕ ಸಮಾನತೆ ಸಿಗಲಿದ್ದು, ಆಗಮಾತ್ರ ಮೇಲು ಕೀಳೆಂಬ ತಾರತಮ್ಯ ಹೋಗಲಾಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ಎತ್ತರದ ಸ್ಥಾನ ಗಿಟ್ಟಿಸಬೇಕು ಎಂದು ತಿಳಿಸಿದರು.

ಅಂಬೇಡ್ಕರ್‌ ಪುತ್ಥಳಿ ನಿರ್ಮಾಣ: ನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಗರಸಭೆ ಕಟ್ಟಡದ ಆವರಣದಲ್ಲಿ ಅಂಬೇಡ್ಕರರ ಪುತ್ಥಳಿ ನಿರ್ಮಾಣಕ್ಕೆ ನಗರಸಭೆ 10 ಲಕ್ಷರೂ ಮೀಸ ಲಿರಿಸಿದೆ ಎಂದು ನಗರಸಭಾಧ್ಯಕ್ಷ ಕೆ.ಲಕ್ಷ್ಮಣ್‌ ಸಭೆಯಲ್ಲಿ ಘೋಷಿಸಿ, ಸರಕಾರದಿಂದ ಇನ್ನೂ ಹೆಚ್ಚಿನ ಅನುದಾನ ಕೊಡಿಸಬೇಕೆಂದು ಶಾಸಕರನ್ನು ಕೋರಿದರು. 

ದಲಿತ ಮುಖಂಡರಾದ ನಿಂಗರಾಜಮಲ್ಲಾಡಿ ಮಾತನಾಡಿ, ಅಂಬೇಡ್ಕರ್‌ ದಲಿತರು, ಶೋಷಿತರಿಗೆ ಆತ್ಮಸ್ಥೆರ್ಯ ತುಂಬಿದ ಜನನಾಯಕ ರಾಗಿದ್ದು, ಸಮಾಜದಲ್ಲಿ ಅನೇಕ ಬದಲಾವಣೆ ಗಳನ್ನು ಕಂಡರೂ ಇನ್ನೂ ಅಸ್ಪೃಶ್ಯತೆ, ಅರಾಜಕತೆ, ಬಹಿಷ್ಕಾರ ಪದ್ಧತಿ ಸಮಾಜದಲ್ಲಿದೆ. ತಾಲೂಕಿನಲ್ಲಿ ಅಧಿಕಾರ ಶಾಹಿಗಳು ಸಂವಿಧಾನಕ್ಕೆ ಅಪಚಾರ ವೆಸಗುತ್ತಿವೆ.

ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಮನುಷ್ಯನ ಆಹಾರ ಪದ್ಧತಿ ಮೇಲೆ ಸಂವಿಧಾನ ವಿರೋಧಿ ತೀರ್ಮಾನ ಕೈ ಗೊಂಡಿದ್ದಾರೆ ಎಂದು ಆರೋಪಿಸಿದರು. ಕಲ್ಕುಣಿಕೆ ಬಸವರಾಜು, ಸಮಾಜ ಕಲ್ಯಾಣಾ ಧಿಕಾರಿ ಹೊನ್ನೇಗೌಡ, ತಹಶೀಲ್ದಾರ್‌ ಮೋಹನ್‌, ಇಒ ಕೃಷ್ಣಕುಮಾರ್‌, ಜಿಪಂ ಸದಸ್ಯರಾದ ಡಾ. ಪುಷ್ಪ, ಗೌರಮ್ಮ, ತಾಪಂ ಅಧ್ಯಕ್ಷೆ ಪದ್ಮಮ್ಮ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.